<p>ಹುಬ್ಬಳ್ಳಿ: ‘ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಒತ್ತು ನೀಡಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಅಮೆರಿಕದ ಬೋಸ್ಟನ್ನ ಐಸೆಲ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸ್ಥಾಪಕ ಪ್ರಸಾದ್ ಪಾಟೀಲ್ ಹೇಳಿದರು.</p>.<p>ಇಲ್ಲಿನ ಕೆ.ಎಲ್.ಇ ಸೊಸೈಟಿಯ ಪಿ.ಸಿ.ಜಾಬಿನ್ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಾರ್ಷಿಕೋತ್ಸವ, ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತಂತ್ರಜ್ಞಾನದಿಂದ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ದುಕೊಂಡು ಅದರಲ್ಲಿ ಪರಿಣತಿ ಸಾಧಿಸಬೇಕು’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಜಾನಪದ ತಜ್ಞ ರಾಮು ಮೂಲಗಿ, ‘ಜನಪದ ಸಾಹಿತ್ಯವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ. ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಸಂಧ್ಯಾ ಆರ್.ಕುಲಕರ್ಣಿ ಸ್ವಾಗತಿಸಿದರು. ಕಾಲೇಜು ವೇದಿಕೆಯ ಉಪಾಧ್ಯಕ್ಷೆ ಸುಧಾ ಪಾಟೀಲ ಅವರು ಕಾಲೇಜು ವೇದಿಕೆಯ ವಾರ್ಷಿಕ ವರದಿ ಮಂಡಿಸಿದರು.</p>.<p>ಕಾಲೇಜಿನ ಜಿಮ್ಖಾನಾದ ಉಪಾಧ್ಯಕ್ಷ ಪ್ರಭಾಕರ್ ಟಿ., ಅವರು ಕ್ರೀಡೆ ಮತ್ತು ಎನ್ಸಿಸಿ ಚಟುವಟಿಕೆಗಳ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಪೇಟೆಂಟ್ ಹೊಂದಿರುವವರು, ವಿಜ್ಞಾನಿಗಳು, ಅಂತರರಾಷ್ಟ್ರೀಯ ಸಂದರ್ಶಕ ಅಧ್ಯಾಪಕರು, ಪಿಎಚ್.ಡಿಪುರಸ್ಕೃತರನ್ನು ಸನ್ಮಾನಿಸಲಾಯಿತು. ಗಣ್ಯರು ಕಾಲೇಜಿನ ಸುದ್ದಿ ಪತ್ರವನ್ನು ಬಿಡುಗಡೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-24-1173327485</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಒತ್ತು ನೀಡಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಅಮೆರಿಕದ ಬೋಸ್ಟನ್ನ ಐಸೆಲ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸ್ಥಾಪಕ ಪ್ರಸಾದ್ ಪಾಟೀಲ್ ಹೇಳಿದರು.</p>.<p>ಇಲ್ಲಿನ ಕೆ.ಎಲ್.ಇ ಸೊಸೈಟಿಯ ಪಿ.ಸಿ.ಜಾಬಿನ್ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಾರ್ಷಿಕೋತ್ಸವ, ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತಂತ್ರಜ್ಞಾನದಿಂದ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ದುಕೊಂಡು ಅದರಲ್ಲಿ ಪರಿಣತಿ ಸಾಧಿಸಬೇಕು’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಜಾನಪದ ತಜ್ಞ ರಾಮು ಮೂಲಗಿ, ‘ಜನಪದ ಸಾಹಿತ್ಯವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ. ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಸಂಧ್ಯಾ ಆರ್.ಕುಲಕರ್ಣಿ ಸ್ವಾಗತಿಸಿದರು. ಕಾಲೇಜು ವೇದಿಕೆಯ ಉಪಾಧ್ಯಕ್ಷೆ ಸುಧಾ ಪಾಟೀಲ ಅವರು ಕಾಲೇಜು ವೇದಿಕೆಯ ವಾರ್ಷಿಕ ವರದಿ ಮಂಡಿಸಿದರು.</p>.<p>ಕಾಲೇಜಿನ ಜಿಮ್ಖಾನಾದ ಉಪಾಧ್ಯಕ್ಷ ಪ್ರಭಾಕರ್ ಟಿ., ಅವರು ಕ್ರೀಡೆ ಮತ್ತು ಎನ್ಸಿಸಿ ಚಟುವಟಿಕೆಗಳ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಪೇಟೆಂಟ್ ಹೊಂದಿರುವವರು, ವಿಜ್ಞಾನಿಗಳು, ಅಂತರರಾಷ್ಟ್ರೀಯ ಸಂದರ್ಶಕ ಅಧ್ಯಾಪಕರು, ಪಿಎಚ್.ಡಿಪುರಸ್ಕೃತರನ್ನು ಸನ್ಮಾನಿಸಲಾಯಿತು. ಗಣ್ಯರು ಕಾಲೇಜಿನ ಸುದ್ದಿ ಪತ್ರವನ್ನು ಬಿಡುಗಡೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-24-1173327485</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>