<p>ಹುಬ್ಬಳ್ಳಿ: ‘ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಬೆಂಗಳೂರಿನ ಸಿಇಎನ್ಎಸ್ ಸಂಶೋಧನಾ ಸಂಸ್ಥೆಯ ಪ್ರೊ.ಸಿ.ವಿ.ಏಳಮಗ್ಗದ ಹೇಳಿದರು.</p>.<p>ನಗರದ ಉಣಕಲ್ಲಿನ ಶ್ರೀನಗರದ ಎಸ್.ಕೆ.ಟಿ ಸಾರಥಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ಸೇವಿಸುವ ಆಹಾರ, ನೀರು, ಗಾಳಿ ಕಲುಷಿತವಾಗಿದೆ. ಇದರಿಂದಾಗಿ ಜನರು ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಂಶೋಧನೆ ನಡೆಸಿ ಇವುಗಳಿಗೆ ಉತ್ತಮ ಔಷಧ ಕಂಡು ಹಿಡಿಯಬೇಕು’ ಎಂದರು.</p>.<p>ಡಾ.ಆನಂದ ಪಾಂಡುರಂಗಿ ಮಾತನಾಡಿ, ‘ಪೋಷಕರು ತಮ್ಮ ಕನಸನ್ನು ಮಕ್ಕಳ ಮೇಲೆ ಹೇರಬಾರದು. ಅವರ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>ಹೈದರಾಬಾದ್ನ ವಿಜ್ಞಾನಿ ಮಂಜುನಾಥ, ಹು-ಧಾ ಮಹಾನಗರ ಪಾಲಿಕೆ ಸದಸ್ಯರ ರಾಜಣ್ಣ ಕೊರವಿ, ಪ್ರೊ. ಪಿ.ಎಸ್.ಹೆಗಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ 300 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಲ್.ಪಿ.ಹೆಗಡಿ, ಶ್ರೀನಗರ ಸೊಸೈಟಿಯ ಅಧ್ಯಕ್ಷರ ಡಿ. ಎನ್. ಮುತಾಲಿಕ, ಆರ್.ಎಸ್. ರಾಜನಾಳ ಇದ್ದರು.</p>.<p>ಪ್ರಾಚಾರ್ಯರಾದ ಆರ್.ವಿ.ಜಹಗಿರದಾರ ಸ್ವಾಗತಿಸಿ, ಉಪನ್ಯಾಸಕಿ ಸಹನಾ ನಂದಿ ವಂದಿಸಿದರು. ಅಮೃತಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-24-2077750671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಬೆಂಗಳೂರಿನ ಸಿಇಎನ್ಎಸ್ ಸಂಶೋಧನಾ ಸಂಸ್ಥೆಯ ಪ್ರೊ.ಸಿ.ವಿ.ಏಳಮಗ್ಗದ ಹೇಳಿದರು.</p>.<p>ನಗರದ ಉಣಕಲ್ಲಿನ ಶ್ರೀನಗರದ ಎಸ್.ಕೆ.ಟಿ ಸಾರಥಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ಸೇವಿಸುವ ಆಹಾರ, ನೀರು, ಗಾಳಿ ಕಲುಷಿತವಾಗಿದೆ. ಇದರಿಂದಾಗಿ ಜನರು ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಂಶೋಧನೆ ನಡೆಸಿ ಇವುಗಳಿಗೆ ಉತ್ತಮ ಔಷಧ ಕಂಡು ಹಿಡಿಯಬೇಕು’ ಎಂದರು.</p>.<p>ಡಾ.ಆನಂದ ಪಾಂಡುರಂಗಿ ಮಾತನಾಡಿ, ‘ಪೋಷಕರು ತಮ್ಮ ಕನಸನ್ನು ಮಕ್ಕಳ ಮೇಲೆ ಹೇರಬಾರದು. ಅವರ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>ಹೈದರಾಬಾದ್ನ ವಿಜ್ಞಾನಿ ಮಂಜುನಾಥ, ಹು-ಧಾ ಮಹಾನಗರ ಪಾಲಿಕೆ ಸದಸ್ಯರ ರಾಜಣ್ಣ ಕೊರವಿ, ಪ್ರೊ. ಪಿ.ಎಸ್.ಹೆಗಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ 300 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಲ್.ಪಿ.ಹೆಗಡಿ, ಶ್ರೀನಗರ ಸೊಸೈಟಿಯ ಅಧ್ಯಕ್ಷರ ಡಿ. ಎನ್. ಮುತಾಲಿಕ, ಆರ್.ಎಸ್. ರಾಜನಾಳ ಇದ್ದರು.</p>.<p>ಪ್ರಾಚಾರ್ಯರಾದ ಆರ್.ವಿ.ಜಹಗಿರದಾರ ಸ್ವಾಗತಿಸಿ, ಉಪನ್ಯಾಸಕಿ ಸಹನಾ ನಂದಿ ವಂದಿಸಿದರು. ಅಮೃತಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-24-2077750671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>