<p>ಹುಬ್ಬಳ್ಳಿ: ‘ಶಿಕ್ಷಣ ಪಡೆಯುವುದು, ಸಾಹಿತಿಯಾಗುವುದು ದೊಡ್ಡ ವಿಷಯವಲ್ಲ. ಸಮಾಜಮುಖಿ ಚಿಂತನೆ ಹಾಗೂ ಉದಾತ್ತ ಮನೋಭಾವ ಹೊಂದುವುದು ಮುಖ್ಯ’ ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣ ತೋಂಟದಾರ್ಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ಕುಟುಂಬದವರು ಸಹಯೋಗದಲ್ಲಿ ನಡೆದ ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ‘ವಚನ ಸುಧೆ’, ‘ತುಪ್ಪದ ತಲೆಯವರು’ ಹಾಗೂ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರು, ತಮ್ಮ ಸಾಹಿತ್ಯ ಕೃತಿಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹಾಗೂ ಚಿಂತನೆಗಳನ್ನು ಹಂಚಿಕೊಂಡಿದ್ದಾರೆ. ಸಮುದಾಯದ ಒಳಿತಾಗಿ ಯೋಚಿಸುವ ವ್ಯಕ್ತಿಯಾಗಿದ್ದಾರೆ’ ಎಂದು ಬಣ್ಣಿಸಿದರು.</p>.<p>ಲೆಕ್ಕಪರಿಶೋಧಕ ಸಿ.ಎ.ನಟರಾಜ ಮೂರಶಿಳ್ಳಿ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣನವರ ಮತ್ತು ವೀರಣ್ಣ ರಾಜೂರ ಅವರು ಕೃತಿಗಳ ಕುರಿತು ಮಾತನಾಡಿದರು.</p>.<p>ಪ್ರೊ.ಶೋಭಾ ಜಾಬಿನ ಹಾಗೂ ತಂಡದವರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಪತ್ರಕರ್ತ ಗಿರೀಶ ಪಟ್ಟಣಶೆಟ್ಟಿ, ಜೆ.ಎಸ್.ಪ್ರಸನ್ನಕುಮಾರ್ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಪ್ರಭುಶಂಕರ,ಪ್ರೊ.ಐ.ಜಿ.ಸನದಿ, ಎಂ.ವಿ.ಗೊಂಗಡಶೆಟ್ಟಿ, ಮೈತ್ರೇಯಿಣಿ ಗದಿಗೆಪ್ಪಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-613899556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಶಿಕ್ಷಣ ಪಡೆಯುವುದು, ಸಾಹಿತಿಯಾಗುವುದು ದೊಡ್ಡ ವಿಷಯವಲ್ಲ. ಸಮಾಜಮುಖಿ ಚಿಂತನೆ ಹಾಗೂ ಉದಾತ್ತ ಮನೋಭಾವ ಹೊಂದುವುದು ಮುಖ್ಯ’ ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣ ತೋಂಟದಾರ್ಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ಕುಟುಂಬದವರು ಸಹಯೋಗದಲ್ಲಿ ನಡೆದ ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ‘ವಚನ ಸುಧೆ’, ‘ತುಪ್ಪದ ತಲೆಯವರು’ ಹಾಗೂ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರು, ತಮ್ಮ ಸಾಹಿತ್ಯ ಕೃತಿಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹಾಗೂ ಚಿಂತನೆಗಳನ್ನು ಹಂಚಿಕೊಂಡಿದ್ದಾರೆ. ಸಮುದಾಯದ ಒಳಿತಾಗಿ ಯೋಚಿಸುವ ವ್ಯಕ್ತಿಯಾಗಿದ್ದಾರೆ’ ಎಂದು ಬಣ್ಣಿಸಿದರು.</p>.<p>ಲೆಕ್ಕಪರಿಶೋಧಕ ಸಿ.ಎ.ನಟರಾಜ ಮೂರಶಿಳ್ಳಿ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣನವರ ಮತ್ತು ವೀರಣ್ಣ ರಾಜೂರ ಅವರು ಕೃತಿಗಳ ಕುರಿತು ಮಾತನಾಡಿದರು.</p>.<p>ಪ್ರೊ.ಶೋಭಾ ಜಾಬಿನ ಹಾಗೂ ತಂಡದವರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಪತ್ರಕರ್ತ ಗಿರೀಶ ಪಟ್ಟಣಶೆಟ್ಟಿ, ಜೆ.ಎಸ್.ಪ್ರಸನ್ನಕುಮಾರ್ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಪ್ರಭುಶಂಕರ,ಪ್ರೊ.ಐ.ಜಿ.ಸನದಿ, ಎಂ.ವಿ.ಗೊಂಗಡಶೆಟ್ಟಿ, ಮೈತ್ರೇಯಿಣಿ ಗದಿಗೆಪ್ಪಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-613899556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>