<p>ಹುಕ್ಕೇರಿ: ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಸಮಾಜ ಸೇವೆಯ ಆಕಾಂಕ್ಷೆ ಹೊಂದಿದ್ದರೆ ಪ್ರಶಸ್ತಿಗಳು ತಾವೇ ಹುಡುಕಿಕೊಂಡು ಬರುತ್ತವೆ ಎಂದು ಸಮಾಜ ಸೇವಕಿ ಸೀತವ್ವ ಜೋಡಟ್ಟಿ ಹೇಳಿದರು.</p>.<p>ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವನಾಥ ಕತ್ತಿ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎ., ಬಿ.ಕಾಂ. ಮತ್ತು ಬಿ.ಎಸ್.ಸಿ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಎಸ್. ಹೂಗಾರ ಮಾತನಾಡಿ, ‘ವಿದ್ಯಾರ್ಥಿಗಳು ಸಿಕ್ಕ ಅವಕಾಶ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿ.ಎಸ್.ನಾಯಕ, ಆಡಳಿತಾಧಿಕಾರಿ ಕೆ.ಸಿ.ಮುಚಖಂಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಭಂಗಿ, ಐಟಿಐ ಕಾಲೇಜಿನ ಪ್ರಾಚಾರ್ಯ ವಿ.ಡಿ.ತೋರೋ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಎಸ್.ಡಿ.ಬೆಳ್ಳಿಕಟ್ಟಿ, ಯು.ಕೆ. ಪಾಟೀಲ, ಆರ್.ಎಸ್. ಹುದ್ದಾರ್, ಆರ್.ಕೆ. ಪಾಟೀಲ, ಬಿ.ಎ.ಮಿರ್ಜೆ, ಜಿ.ಎಸ್.ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-21-2102122510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಸಮಾಜ ಸೇವೆಯ ಆಕಾಂಕ್ಷೆ ಹೊಂದಿದ್ದರೆ ಪ್ರಶಸ್ತಿಗಳು ತಾವೇ ಹುಡುಕಿಕೊಂಡು ಬರುತ್ತವೆ ಎಂದು ಸಮಾಜ ಸೇವಕಿ ಸೀತವ್ವ ಜೋಡಟ್ಟಿ ಹೇಳಿದರು.</p>.<p>ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವನಾಥ ಕತ್ತಿ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎ., ಬಿ.ಕಾಂ. ಮತ್ತು ಬಿ.ಎಸ್.ಸಿ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಎಸ್. ಹೂಗಾರ ಮಾತನಾಡಿ, ‘ವಿದ್ಯಾರ್ಥಿಗಳು ಸಿಕ್ಕ ಅವಕಾಶ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿ.ಎಸ್.ನಾಯಕ, ಆಡಳಿತಾಧಿಕಾರಿ ಕೆ.ಸಿ.ಮುಚಖಂಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಭಂಗಿ, ಐಟಿಐ ಕಾಲೇಜಿನ ಪ್ರಾಚಾರ್ಯ ವಿ.ಡಿ.ತೋರೋ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಎಸ್.ಡಿ.ಬೆಳ್ಳಿಕಟ್ಟಿ, ಯು.ಕೆ. ಪಾಟೀಲ, ಆರ್.ಎಸ್. ಹುದ್ದಾರ್, ಆರ್.ಕೆ. ಪಾಟೀಲ, ಬಿ.ಎ.ಮಿರ್ಜೆ, ಜಿ.ಎಸ್.ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-21-2102122510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>