<p>ಹುಳಿಯಾರು: ತಾಂತ್ರಿಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅನಿವಾರ್ಯವಾಗಿದೆ ಎಂದು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಕೆ.ಬಿ.ಸರಸ್ವತಿ ತಿಳಿಸಿದರು.</p>.<p>ಹುಳಿಯಾರು –ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೋಶದ ಕಂಪ್ಯೂಟರ್ ಸಾಕ್ಷರತಾ ವೇದಿಕೆಯಿಂದ ನಡೆದ ‘ಉಚಿತ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆಶುಕ್ರವಾರ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.</p>.<p>ಪ್ರಾಂಶುಪಾಲ ಎಸ್.ಸಿ.ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳಲ್ಲಿಕೇವಲ ಪಠ್ಯದ ಜ್ಞಾನವಷ್ಟೇ ಅಲ್ಲದೆ, ಪ್ರಾಯೋಗಿಕ ಕಂಪ್ಯೂಟರ್ ಕೌಶಲಗಳನ್ನು ಬೆಳೆಸುವುದು ಕಾಲೇಜಿನ ಮುಖ್ಯ ಉದ್ದೇಶ. ಕಾಲೇಜು ಸತತವಾಗಿ ಇಂತಹ ಉಪಯುಕ್ತ ತರಬೇತಿಗಳನ್ನು ನೀಡುತ್ತಾ ಬಂದಿದೆ ಎಂದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕ ಬಿ. ಯೋಗೀಶ್, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕೌಶಲಗಳ ಅಭಿವೃದ್ಧಿ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು.</p>.<p>ಉಪನ್ಯಾಸಕರಾದ ಸುಷ್ಮಾ ಎಲ್. ಬಿರಾದಾರ್, ಧನಂಜಯ್, ಉದ್ಯೋಗ ಮತ್ತು ತರಬೇತಿ ಕೋಶದ ಸಂಯೋಜಕಿ ಎಸ್.ಲಕ್ಷ್ಮಿ , ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-17-1516777767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಳಿಯಾರು: ತಾಂತ್ರಿಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅನಿವಾರ್ಯವಾಗಿದೆ ಎಂದು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಕೆ.ಬಿ.ಸರಸ್ವತಿ ತಿಳಿಸಿದರು.</p>.<p>ಹುಳಿಯಾರು –ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೋಶದ ಕಂಪ್ಯೂಟರ್ ಸಾಕ್ಷರತಾ ವೇದಿಕೆಯಿಂದ ನಡೆದ ‘ಉಚಿತ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆಶುಕ್ರವಾರ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.</p>.<p>ಪ್ರಾಂಶುಪಾಲ ಎಸ್.ಸಿ.ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳಲ್ಲಿಕೇವಲ ಪಠ್ಯದ ಜ್ಞಾನವಷ್ಟೇ ಅಲ್ಲದೆ, ಪ್ರಾಯೋಗಿಕ ಕಂಪ್ಯೂಟರ್ ಕೌಶಲಗಳನ್ನು ಬೆಳೆಸುವುದು ಕಾಲೇಜಿನ ಮುಖ್ಯ ಉದ್ದೇಶ. ಕಾಲೇಜು ಸತತವಾಗಿ ಇಂತಹ ಉಪಯುಕ್ತ ತರಬೇತಿಗಳನ್ನು ನೀಡುತ್ತಾ ಬಂದಿದೆ ಎಂದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕ ಬಿ. ಯೋಗೀಶ್, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕೌಶಲಗಳ ಅಭಿವೃದ್ಧಿ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು.</p>.<p>ಉಪನ್ಯಾಸಕರಾದ ಸುಷ್ಮಾ ಎಲ್. ಬಿರಾದಾರ್, ಧನಂಜಯ್, ಉದ್ಯೋಗ ಮತ್ತು ತರಬೇತಿ ಕೋಶದ ಸಂಯೋಜಕಿ ಎಸ್.ಲಕ್ಷ್ಮಿ , ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-17-1516777767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>