<p>ಹುಮನಾಬಾದ್: ‘ನಾವು ಯಾವುದೇ ಹುದ್ದೆಗೆ ಏರಿದರೂ ನಮಗೆ ವಿದ್ಯಾ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕು’ ಎಂದು ಶಾಲೆಯ ಆಡಳಿತಾಧಿಕಾರಿ ಗುಂಡಯ್ಯ ತೀರ್ಥ ಹೇಳಿದರು.</p>.<p>ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಬಸವತೀರ್ಥ ವಿದ್ಯಾಪೀಠ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2000ನೇ ಸಾಲಿನೇ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರು ಸಮಾಜದ ನಿಜವಾದ ನಾಯಕರು. ಗುರು ಮತ್ತು ಸ್ನೇಹಿತನ ಸಂಬಂಧವನ್ನು ಜೀವ ಇರುವವರೆಗೆ ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತ ಶಿಕ್ಷಕ ಸುಂದರರಾಜ ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಕಲಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಿಗಿಂತ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರೂ ಅವರನ್ನು ಮರೆಯದೇ ಸನ್ಮಾನಿಸುತ್ತಿರುವ ನಿಮ್ಮ ಕಾರ್ಯ ಶ್ಲಾಘನೀಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಸುಭಾಷ ಗಂಗಾ ಮಾತನಾಡಿ, ಗುರು ಶಿಷ್ಯರ ಸಂಬಂಧ ಬಹಳ ಪವಿತ್ರವಾದದ್ದು. ನಮ್ಮ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡಿರುವುದು ಸಂತಸ ತಂದಿದೆ ಎಂದರು.</p>.<p>ಶಿಕ್ಷಕರಾದ ಮಧುಕರ ದೇಶಪಾಂಡೆ, ಶಿವಶಂಕರ ಬೇಟಗೇರಿ, ವಿದ್ಯಾವತಿ ತೀರ್ಥಾ, ಶೋಭಾವತಿ, ದಿನೇಶ , ವಿಜಯಲಕ್ಷ್ಮೀ, ಅಂಬಿಕಾ, ರಾಜೇಶ್ವರಿ, ಶಿಲ್ಪಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1794832856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ‘ನಾವು ಯಾವುದೇ ಹುದ್ದೆಗೆ ಏರಿದರೂ ನಮಗೆ ವಿದ್ಯಾ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕು’ ಎಂದು ಶಾಲೆಯ ಆಡಳಿತಾಧಿಕಾರಿ ಗುಂಡಯ್ಯ ತೀರ್ಥ ಹೇಳಿದರು.</p>.<p>ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಬಸವತೀರ್ಥ ವಿದ್ಯಾಪೀಠ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2000ನೇ ಸಾಲಿನೇ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರು ಸಮಾಜದ ನಿಜವಾದ ನಾಯಕರು. ಗುರು ಮತ್ತು ಸ್ನೇಹಿತನ ಸಂಬಂಧವನ್ನು ಜೀವ ಇರುವವರೆಗೆ ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.</p>.<p>ನಿವೃತ್ತ ಶಿಕ್ಷಕ ಸುಂದರರಾಜ ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಕಲಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಿಗಿಂತ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರೂ ಅವರನ್ನು ಮರೆಯದೇ ಸನ್ಮಾನಿಸುತ್ತಿರುವ ನಿಮ್ಮ ಕಾರ್ಯ ಶ್ಲಾಘನೀಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಸುಭಾಷ ಗಂಗಾ ಮಾತನಾಡಿ, ಗುರು ಶಿಷ್ಯರ ಸಂಬಂಧ ಬಹಳ ಪವಿತ್ರವಾದದ್ದು. ನಮ್ಮ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡಿರುವುದು ಸಂತಸ ತಂದಿದೆ ಎಂದರು.</p>.<p>ಶಿಕ್ಷಕರಾದ ಮಧುಕರ ದೇಶಪಾಂಡೆ, ಶಿವಶಂಕರ ಬೇಟಗೇರಿ, ವಿದ್ಯಾವತಿ ತೀರ್ಥಾ, ಶೋಭಾವತಿ, ದಿನೇಶ , ವಿಜಯಲಕ್ಷ್ಮೀ, ಅಂಬಿಕಾ, ರಾಜೇಶ್ವರಿ, ಶಿಲ್ಪಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1794832856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>