<p>ಹುಣಸಗಿ: ‘ಅಂಗವಿಕಲರ ಸಬಲೀಕರಣಕ್ಕಾಗಿ ಆರೋಗ್ಯ, ಶಿಕ್ಷಣ, ಪುನರ್ವಸತಿ ಹಾಗೂ ಸ್ವಾವಲಂಬನೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಎಪಿಡಿ ಸಂಸ್ಥೆಯ ಮೂಲಕ ದೊರಕಿಸಿ ಕೊಡಲಾಗುತ್ತದೆ’ ಎಂದು ಎಪಿಡಿ ಸಂಸ್ಥೆಯ ತಾಲ್ಲೂಕು ಸಂಯೋಜಕ ಚನ್ನವೀರ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯ ವತಿಯಿಂದ 39 ಜನ ಅಂಗವಿಕಲರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಗ್ರಾಮೀಣ ಭಾಗದಲ್ಲಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ಅಗತ್ಯ ನೆರವು, ಮಾರ್ಗದರ್ಶನ ನೀಡಲಾಗುತ್ತಿದೆ. ಸಾರ್ವಜನಿಕರು ಇಂತಹ ಅವಕಾಶಗಳನ್ನು ಸದುಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಎಪಿಡಿ ಸಂಸ್ಥೆಯ ಬೆಂಗಳೂರಿನ ಎಎಟಿ ಟೀಮ್ನ ಜಾನ ಸ್ಮೀತಾ, ಹುಲೆಪ್ಪ, ಫಿಸಿಯೋಥೆರಪಿಸ್ಟ್ ಯೋಗೇಶ್, ಸಮುದಾಯ ಸಂಯೋಜಕರಾದ ಮಾಲತೇಶ್, ನಾಗರಾಜ, ಲಾಳೆಮಶಾಕ್, ರಮೇಶ್, ಹಾಜಿರಾ, ಸಮುದಾಯ ಕಾರ್ಯಕರ್ತರಾದ ರೇಣುಕಾ ಬಿರಾದಾರ, ಹನುಮಂತ್ರಾಯ ಸೇರಿದಂತೆ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-30-906293249</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ‘ಅಂಗವಿಕಲರ ಸಬಲೀಕರಣಕ್ಕಾಗಿ ಆರೋಗ್ಯ, ಶಿಕ್ಷಣ, ಪುನರ್ವಸತಿ ಹಾಗೂ ಸ್ವಾವಲಂಬನೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಎಪಿಡಿ ಸಂಸ್ಥೆಯ ಮೂಲಕ ದೊರಕಿಸಿ ಕೊಡಲಾಗುತ್ತದೆ’ ಎಂದು ಎಪಿಡಿ ಸಂಸ್ಥೆಯ ತಾಲ್ಲೂಕು ಸಂಯೋಜಕ ಚನ್ನವೀರ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯ ವತಿಯಿಂದ 39 ಜನ ಅಂಗವಿಕಲರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಗ್ರಾಮೀಣ ಭಾಗದಲ್ಲಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ಅಗತ್ಯ ನೆರವು, ಮಾರ್ಗದರ್ಶನ ನೀಡಲಾಗುತ್ತಿದೆ. ಸಾರ್ವಜನಿಕರು ಇಂತಹ ಅವಕಾಶಗಳನ್ನು ಸದುಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಎಪಿಡಿ ಸಂಸ್ಥೆಯ ಬೆಂಗಳೂರಿನ ಎಎಟಿ ಟೀಮ್ನ ಜಾನ ಸ್ಮೀತಾ, ಹುಲೆಪ್ಪ, ಫಿಸಿಯೋಥೆರಪಿಸ್ಟ್ ಯೋಗೇಶ್, ಸಮುದಾಯ ಸಂಯೋಜಕರಾದ ಮಾಲತೇಶ್, ನಾಗರಾಜ, ಲಾಳೆಮಶಾಕ್, ರಮೇಶ್, ಹಾಜಿರಾ, ಸಮುದಾಯ ಕಾರ್ಯಕರ್ತರಾದ ರೇಣುಕಾ ಬಿರಾದಾರ, ಹನುಮಂತ್ರಾಯ ಸೇರಿದಂತೆ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-30-906293249</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>