<p>ಹುಣಸೂರು: ಸಾರ್ವಜನಿಕರಿಗೆ ಸರ್ಕಾರ ಚಿಕಿತ್ಸೆ ನೀಡಿ ರೋಗಮುಕ್ತರನ್ನಾಗಿಸುವಲ್ಲಿ ದಾಖಲೆ ಸೃಷ್ಟಿಸಿದ್ದರೂ ರೋಗಬಾಧೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ ಎಂದು ಗ್ರಾಮ ಸಂಸ್ಥೆಯ ಕಾರ್ಯನಿರ್ವಹಣ ನಿರ್ದೇಶಕ ಬಸವರಾಜ್ ಆರ್. ಶ್ರೇಷ್ಠ ಹೇಳಿದರು.</p>.<p>‘ಗ್ರಾಮ್’ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಸ್ವಾಸ್ಥ್ಯ ಸ್ವರಾಜ್ ನಮ್ಮ ಆರೋಗ್ಯ ನಮ್ಮ ಕ್ರಿಯಾ ಯೋಜನೆ’ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರದ ಯೋಜನೆಗಳನ್ನು ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಹೆಗಲಿಗಿದ್ದು, ಆ ದೃಷ್ಟಿಯಿಂದ ದೇಶದಲ್ಲಿ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಕೇಂದ್ರ ಸರ್ಕಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಬಲವರ್ಧನೆಗೊಳಿಸಿ ‘ಆರೋಗ್ಯ ಗ್ರಾಮ’ವನ್ನಾಗಿಸುವ ಉದ್ದೇಶ ಹೊಂದಿದೆ. ದೇಶದಲ್ಲಿ ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿ ಇದರ ಯಶಸ್ಸು ಮತ್ತು ಸಾಧಕ– ಬಾಧಕಗಳನ್ನು ಗಮನಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ ಬಳಿಕ ಯೋಜನೆ ರಾಷ್ಟ್ರದಾದ್ಯಂತ ಅನುಷ್ಠಾನಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಸ್ವಾಸ್ಥ್ಯ ಸ್ವರಾಜ್ ಯೋಜನೆಯಲ್ಲಿ ಸ್ಥಳಿಯ ಗ್ರಾಮ ಪಂಚಾಯಿತಿ ಹಂತದಲ್ಲಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಒಳಗೊಂಡಂತೆ ಪಂಚಾಯತ್ ರಾಜ್ ಅಡಿಯಲ್ಲಿ ಜನಾರೋಗ್ಯ ಸಮಿತಿ ರಚಿಸಿ ಈ ಸಮಿತಿ ಪದಾಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆರೋಗ್ಯ ಸುಧಾರಿಸುವ ದಿಕ್ಕಿನಲ್ಲಿ ಜನರೊಂದಿಗೆ ಕೊಂಡಿಯಾಗಿ ಜಾಗೃತಿ ಮೂಡಿಸಿ ಆರೋಗ್ಯ ಗ್ರಾಮವನ್ನಾಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ’ ಎಂದರು.</p>.<p>ಡಿಜಿಟಲ್ ಜಾಹೀರಾತು: ಹುಣಸೂರು ತಾಲ್ಲೂಕಿನ 41 ಪಂಚಾಯಿತಿಗಳ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರು ಹೆಚ್ಚಿನ ಆಕರ್ಷಣೆಗೆ ಒಳಗಾಗಿರುವ ಡಿಜಿಟಲ್ ಮಾಧ್ಯಮದಲ್ಲಿ ಆರೋಗ್ಯ ಸಂಬಂಧಿಸಿದ ಜಾಹೀರಾತು ಗಳನ್ನು ಅಳವಡಿಸಲಾಗುವುದು’ ಎಂದು ಪಂಚಾಯತ್ ರಾಜ್ ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್ ಹೇಳಿದರು.</p>.<p>ವಿಸ್ತರಣೆ:‘ಸ್ವಾಸ್ಥ್ಯ ಸ್ವರಾಜ್ ಯೋಜನೆ ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ಪಂಚಾಯತ್ ರಾಜ್ ಪ್ರಮುಖ ಪಾತ್ರ ನಿರ್ವಹಿಸಬೇಕಿದ್ದು, ಸ್ಥಳೀಯ ಸಂಘ– ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರು ಸಕರಾತ್ಮಕವಾಗಿ ಸ್ಪಂದಿಸಿ’ ಎಂದರು.</p>.<p>ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ, ಆರ್ಥಿಕಾಭಿವೃದ್ಧಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದು ವಿಪರ್ಯಾಸ. ಭಾರತೀಯ ಸರಾಸರಿ ಅಂಶಕ್ಕಿಂತಲೂ ಕಡಿಮೆ ಇದೆ’ ಎಂದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ಮಾತನಾಡಿ, ‘ಸ್ವಾಸ್ಥ್ಯ ಸ್ವರಾಜ್ ಕ್ರಿಯಾ ಯೋಜನೆ ಸಿದ್ದಪಡಿಸಿ ರಾಜ್ಯದಲ್ಲಿ ಮಾದರಿ ತಾಲ್ಲೂಕಾಗಿ ಹುಣಸೂರು ರಾಜ್ಯದಲ್ಲಿ ಆಯ್ಕೆಗೊಂಡಿದೆ. ಕ್ಷೇತ್ರದ 44 ಆಯುಷ್ಮಾನ್ ಆರೋಗ್ಯ ಕೇಂದ್ರ ಸೇರಿದಂತೆ 210 ಆರೋಗ್ಯ ಉಪಕೇಂದ್ರಗಳಲ್ಲಿ ಈ ಯೋಜನೆ ಅನುಷ್ಟಾನಗೊಳಿಸಿ ಕಾರ್ಯಾಚರಣೆ ತರಲಾಗುತ್ತಿದೆ’ ಎಂದರು.</p>.<p>‘ಆರೋಗ್ಯ ಗ್ರಾಮ ಸೃಷ್ಠಿಸಲು ಕೇಂದ್ರ ಸರ್ಕಾರ ಸ್ವಾಸ್ಥ್ಯ ಸ್ವರಾಜ್ ಎಂಬ ಯೋಜನೆಗೆ ಒತ್ತು ನೀಡಿ ಪ್ರತಿಯೊಬ್ಬ ನಾಗರಿಕರೂ ಆರೋಗ್ಯವಂತರಾಗಿರಬೇಕು ಎಂಬ ಪರಿಕಲ್ಪನೆಯಲ್ಲಿ ಈ ಯೋಜನೆ ರೂಪುಗೊಂಡಿದೆ’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದರ್ಶನ್, ತಾಲ್ಲೂಕು ಪಂಚಾಯಿತಿ ಇಒ ಹೊಂಗಯ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆ ಹರೀಶ್ ಇದ್ದರು. ಗ್ರಾಮ್ ಸಂಸ್ಥೆಯ ಮಲ್ಲಿಕಾರ್ಜುನ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-574948886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ಸಾರ್ವಜನಿಕರಿಗೆ ಸರ್ಕಾರ ಚಿಕಿತ್ಸೆ ನೀಡಿ ರೋಗಮುಕ್ತರನ್ನಾಗಿಸುವಲ್ಲಿ ದಾಖಲೆ ಸೃಷ್ಟಿಸಿದ್ದರೂ ರೋಗಬಾಧೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ ಎಂದು ಗ್ರಾಮ ಸಂಸ್ಥೆಯ ಕಾರ್ಯನಿರ್ವಹಣ ನಿರ್ದೇಶಕ ಬಸವರಾಜ್ ಆರ್. ಶ್ರೇಷ್ಠ ಹೇಳಿದರು.</p>.<p>‘ಗ್ರಾಮ್’ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಸ್ವಾಸ್ಥ್ಯ ಸ್ವರಾಜ್ ನಮ್ಮ ಆರೋಗ್ಯ ನಮ್ಮ ಕ್ರಿಯಾ ಯೋಜನೆ’ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರದ ಯೋಜನೆಗಳನ್ನು ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಹೆಗಲಿಗಿದ್ದು, ಆ ದೃಷ್ಟಿಯಿಂದ ದೇಶದಲ್ಲಿ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಕೇಂದ್ರ ಸರ್ಕಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಬಲವರ್ಧನೆಗೊಳಿಸಿ ‘ಆರೋಗ್ಯ ಗ್ರಾಮ’ವನ್ನಾಗಿಸುವ ಉದ್ದೇಶ ಹೊಂದಿದೆ. ದೇಶದಲ್ಲಿ ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿ ಇದರ ಯಶಸ್ಸು ಮತ್ತು ಸಾಧಕ– ಬಾಧಕಗಳನ್ನು ಗಮನಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ ಬಳಿಕ ಯೋಜನೆ ರಾಷ್ಟ್ರದಾದ್ಯಂತ ಅನುಷ್ಠಾನಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಸ್ವಾಸ್ಥ್ಯ ಸ್ವರಾಜ್ ಯೋಜನೆಯಲ್ಲಿ ಸ್ಥಳಿಯ ಗ್ರಾಮ ಪಂಚಾಯಿತಿ ಹಂತದಲ್ಲಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಒಳಗೊಂಡಂತೆ ಪಂಚಾಯತ್ ರಾಜ್ ಅಡಿಯಲ್ಲಿ ಜನಾರೋಗ್ಯ ಸಮಿತಿ ರಚಿಸಿ ಈ ಸಮಿತಿ ಪದಾಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆರೋಗ್ಯ ಸುಧಾರಿಸುವ ದಿಕ್ಕಿನಲ್ಲಿ ಜನರೊಂದಿಗೆ ಕೊಂಡಿಯಾಗಿ ಜಾಗೃತಿ ಮೂಡಿಸಿ ಆರೋಗ್ಯ ಗ್ರಾಮವನ್ನಾಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ’ ಎಂದರು.</p>.<p>ಡಿಜಿಟಲ್ ಜಾಹೀರಾತು: ಹುಣಸೂರು ತಾಲ್ಲೂಕಿನ 41 ಪಂಚಾಯಿತಿಗಳ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರು ಹೆಚ್ಚಿನ ಆಕರ್ಷಣೆಗೆ ಒಳಗಾಗಿರುವ ಡಿಜಿಟಲ್ ಮಾಧ್ಯಮದಲ್ಲಿ ಆರೋಗ್ಯ ಸಂಬಂಧಿಸಿದ ಜಾಹೀರಾತು ಗಳನ್ನು ಅಳವಡಿಸಲಾಗುವುದು’ ಎಂದು ಪಂಚಾಯತ್ ರಾಜ್ ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್ ಹೇಳಿದರು.</p>.<p>ವಿಸ್ತರಣೆ:‘ಸ್ವಾಸ್ಥ್ಯ ಸ್ವರಾಜ್ ಯೋಜನೆ ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ಪಂಚಾಯತ್ ರಾಜ್ ಪ್ರಮುಖ ಪಾತ್ರ ನಿರ್ವಹಿಸಬೇಕಿದ್ದು, ಸ್ಥಳೀಯ ಸಂಘ– ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರು ಸಕರಾತ್ಮಕವಾಗಿ ಸ್ಪಂದಿಸಿ’ ಎಂದರು.</p>.<p>ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ, ಆರ್ಥಿಕಾಭಿವೃದ್ಧಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದು ವಿಪರ್ಯಾಸ. ಭಾರತೀಯ ಸರಾಸರಿ ಅಂಶಕ್ಕಿಂತಲೂ ಕಡಿಮೆ ಇದೆ’ ಎಂದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ಮಾತನಾಡಿ, ‘ಸ್ವಾಸ್ಥ್ಯ ಸ್ವರಾಜ್ ಕ್ರಿಯಾ ಯೋಜನೆ ಸಿದ್ದಪಡಿಸಿ ರಾಜ್ಯದಲ್ಲಿ ಮಾದರಿ ತಾಲ್ಲೂಕಾಗಿ ಹುಣಸೂರು ರಾಜ್ಯದಲ್ಲಿ ಆಯ್ಕೆಗೊಂಡಿದೆ. ಕ್ಷೇತ್ರದ 44 ಆಯುಷ್ಮಾನ್ ಆರೋಗ್ಯ ಕೇಂದ್ರ ಸೇರಿದಂತೆ 210 ಆರೋಗ್ಯ ಉಪಕೇಂದ್ರಗಳಲ್ಲಿ ಈ ಯೋಜನೆ ಅನುಷ್ಟಾನಗೊಳಿಸಿ ಕಾರ್ಯಾಚರಣೆ ತರಲಾಗುತ್ತಿದೆ’ ಎಂದರು.</p>.<p>‘ಆರೋಗ್ಯ ಗ್ರಾಮ ಸೃಷ್ಠಿಸಲು ಕೇಂದ್ರ ಸರ್ಕಾರ ಸ್ವಾಸ್ಥ್ಯ ಸ್ವರಾಜ್ ಎಂಬ ಯೋಜನೆಗೆ ಒತ್ತು ನೀಡಿ ಪ್ರತಿಯೊಬ್ಬ ನಾಗರಿಕರೂ ಆರೋಗ್ಯವಂತರಾಗಿರಬೇಕು ಎಂಬ ಪರಿಕಲ್ಪನೆಯಲ್ಲಿ ಈ ಯೋಜನೆ ರೂಪುಗೊಂಡಿದೆ’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದರ್ಶನ್, ತಾಲ್ಲೂಕು ಪಂಚಾಯಿತಿ ಇಒ ಹೊಂಗಯ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆ ಹರೀಶ್ ಇದ್ದರು. ಗ್ರಾಮ್ ಸಂಸ್ಥೆಯ ಮಲ್ಲಿಕಾರ್ಜುನ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-574948886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>