<p>ಹುಣಸೂರು: ‘ಕಾಲೇಜು ಹಂತದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸುವುದರಿಂದ ದೇಶದ ಗ್ರಾಮೀಣ ಜನ ಜೀವನ ಮತ್ತು ಪ್ರದೇಶ ಸಮಸ್ಯೆ ಕುರಿತು ಅರಿಯಲು ಸಹಕಾರವಾಗಲಿದೆ’ ಎಂದು ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಮುಖಂಡ ಕೂಸಪ್ಪ ಹೇಳಿದರು.</p>.<p>ಗ್ರಾಮದಲ್ಲಿ ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ಏ.6ರವರೆಗೆ ಹಮ್ಮಿಕೊಂಡಿರುವ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ಯೂತ್ ಫಾರ್ ಮೈ ಭಾರತ್ ಎಂಬ ಘೋಷವಾಕ್ಯದಲ್ಲಿ ಈ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನಡೆಸಲಾಗುತ್ತಿದೆ’ ಎಂದರು.</p>.<p>‘ಯುವ ಸಮುದಾಯದ ಸಹಭಾಗಿತ್ವದಿಂದ ಸಮಗ್ರ ಅಭಿವೃದ್ಧಿ ಭಾರತ ನಿರ್ಮಾಣಕ್ಕೆ ಸಹಕಾರವಾಗಲಿದೆ. ಯುವಶಕ್ತಿ ಸಂಘಟಿತರಾಗಿ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿ ಯೋಜನೆ ರೂಪಿಸುವ ಮನಸ್ಥಿತಿ ಹೊಂದಬೇಕು’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಎಸ್.ಮಂಜು, ಶಿಬಿರದ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ಕೆ.ಪಿ, ಸಂಯೋಜನಾಧಿಕಾರಿ ಸುರೇಶ್ ಎಂ.ಬಿ. ಪ್ರತಾಪ್ ಲಿಂಗಯ್ಯ, ಸಬೀರಾಫಿರ್ಧೋಸ್, ಎಂ.ಸಿ.ಲಕ್ಷ್ಮಯ್ಯ, ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಪವಿತ್ರಾ, ಗ್ರಾಮದ ಕೆಂಗಯ್ಯ, ರಾಮಚಂದ್ರನಾಯಕ, ತಮ್ಮೇಗೌಡ, ನಿಂಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-38-79910650</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ‘ಕಾಲೇಜು ಹಂತದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸುವುದರಿಂದ ದೇಶದ ಗ್ರಾಮೀಣ ಜನ ಜೀವನ ಮತ್ತು ಪ್ರದೇಶ ಸಮಸ್ಯೆ ಕುರಿತು ಅರಿಯಲು ಸಹಕಾರವಾಗಲಿದೆ’ ಎಂದು ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಮುಖಂಡ ಕೂಸಪ್ಪ ಹೇಳಿದರು.</p>.<p>ಗ್ರಾಮದಲ್ಲಿ ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ಏ.6ರವರೆಗೆ ಹಮ್ಮಿಕೊಂಡಿರುವ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ಯೂತ್ ಫಾರ್ ಮೈ ಭಾರತ್ ಎಂಬ ಘೋಷವಾಕ್ಯದಲ್ಲಿ ಈ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನಡೆಸಲಾಗುತ್ತಿದೆ’ ಎಂದರು.</p>.<p>‘ಯುವ ಸಮುದಾಯದ ಸಹಭಾಗಿತ್ವದಿಂದ ಸಮಗ್ರ ಅಭಿವೃದ್ಧಿ ಭಾರತ ನಿರ್ಮಾಣಕ್ಕೆ ಸಹಕಾರವಾಗಲಿದೆ. ಯುವಶಕ್ತಿ ಸಂಘಟಿತರಾಗಿ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿ ಯೋಜನೆ ರೂಪಿಸುವ ಮನಸ್ಥಿತಿ ಹೊಂದಬೇಕು’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಎಸ್.ಮಂಜು, ಶಿಬಿರದ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ಕೆ.ಪಿ, ಸಂಯೋಜನಾಧಿಕಾರಿ ಸುರೇಶ್ ಎಂ.ಬಿ. ಪ್ರತಾಪ್ ಲಿಂಗಯ್ಯ, ಸಬೀರಾಫಿರ್ಧೋಸ್, ಎಂ.ಸಿ.ಲಕ್ಷ್ಮಯ್ಯ, ಬನ್ನಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಪವಿತ್ರಾ, ಗ್ರಾಮದ ಕೆಂಗಯ್ಯ, ರಾಮಚಂದ್ರನಾಯಕ, ತಮ್ಮೇಗೌಡ, ನಿಂಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-38-79910650</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>