<p>ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.</p>.<p>ತಾಲ್ಲೂಕಿನ ನವಲಿ ಗ್ರಾಮದಲ್ಲಿ ರುದ್ರಾಂಬ ಎಂ.ಪಿ. ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಸೇವಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನ ಪರಿಪೂರ್ಣವಾಗಬೇಕಾದರೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದು ಅವಶ್ಯ. ಸಂಪ್ರದಾಯ, ಪರಂಪರೆ, ನೆಲಮೂಲ ಸಂಸ್ಕೃತಿ ಅಳವಡಿಸಿಕೊಂಡು ದೇಶ ಕಟ್ಟುವುದಕ್ಕೆ ಶೈಕ್ಷಣಿಕ ಸೇವಾ ಶಿಬಿರಗಳು ಸಹಕಾರಿಯಾಗಿವೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಂ. ವಿಜಯಕುಮಾರ್ ಹೇಮಪ್ಪ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾಧಿಕಾರಿಗಳಾದ ಸುರೇಶ್ ಬೂದನೂರು, ಉಮಾದೇವಿ, ಭಾಗ್ಯ ಮಠಪತಿ, ಪ್ರಾಧ್ಯಾಪಕರಾದ ಸತೀಶ್ ಪಾಟೀಲ, ವೆಂಕಟೇಶ್, ಭೀಮಪ್ಪ, ಮುಖಂಡರಾದ ಹಣ್ಣಿ ಶಶಿಧರ, ಕೃಷ್ಣನಾಯ್ಕ, ಮಂಜುನಾಥ, ಎಂ. ಜಗದೀಶ, ಗುಡದಯ್ಯ, ಲಕ್ಷ್ಮಣ, ಪ್ರಶಾಂತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-486763445</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.</p>.<p>ತಾಲ್ಲೂಕಿನ ನವಲಿ ಗ್ರಾಮದಲ್ಲಿ ರುದ್ರಾಂಬ ಎಂ.ಪಿ. ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಸೇವಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನ ಪರಿಪೂರ್ಣವಾಗಬೇಕಾದರೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದು ಅವಶ್ಯ. ಸಂಪ್ರದಾಯ, ಪರಂಪರೆ, ನೆಲಮೂಲ ಸಂಸ್ಕೃತಿ ಅಳವಡಿಸಿಕೊಂಡು ದೇಶ ಕಟ್ಟುವುದಕ್ಕೆ ಶೈಕ್ಷಣಿಕ ಸೇವಾ ಶಿಬಿರಗಳು ಸಹಕಾರಿಯಾಗಿವೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಂ. ವಿಜಯಕುಮಾರ್ ಹೇಮಪ್ಪ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾಧಿಕಾರಿಗಳಾದ ಸುರೇಶ್ ಬೂದನೂರು, ಉಮಾದೇವಿ, ಭಾಗ್ಯ ಮಠಪತಿ, ಪ್ರಾಧ್ಯಾಪಕರಾದ ಸತೀಶ್ ಪಾಟೀಲ, ವೆಂಕಟೇಶ್, ಭೀಮಪ್ಪ, ಮುಖಂಡರಾದ ಹಣ್ಣಿ ಶಶಿಧರ, ಕೃಷ್ಣನಾಯ್ಕ, ಮಂಜುನಾಥ, ಎಂ. ಜಗದೀಶ, ಗುಡದಯ್ಯ, ಲಕ್ಷ್ಮಣ, ಪ್ರಶಾಂತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-486763445</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>