<p>ತಿಪಟೂರು: ‘ರಾಷ್ಟ್ರದ ಭದ್ರತೆಗೆ ಧಕ್ಕೆ ಉಂಟಾಗುವ ಸಂಭವ ಬಂದರೆ ನಾವೆಲ್ಲರೂ ಒಗ್ಗೂಡಿ ರಕ್ಷಣೆಗೆ ತೊಡಗಿಕೊಳ್ಳಬೇಕು’ ಎಂದು ಕ್ಯಾಪ್ಟನ್ ಬಿ.ಎಂ.ಹರಿಪ್ರಸಾದ್ ಹೇಳಿದರು.</p>.<p>ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ಬಳಿಯ ರಂಭಾಪುರಿ ಮಠದ ಆವರಣದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆಯ ಆರನೇ ದಿನದ ಕಾರ್ಯಕ್ರಮದಲ್ಲಿ ‘ದೇಶದ ರಕ್ಷಣೆಯಲ್ಲಿ ಯುವಕರ ಪಾತ್ರ’ ಎಂಬ ವಿಷಯದ ಬಗ್ಗೆ ಮಾತನಾಡಿದರು.</p>.<p>‘ದೇಶದ ರಕ್ಷಣೆಯಲ್ಲಿ ಸೈನ್ಯಕ್ಕೆ ಎಷ್ಟು ಜವಾಬ್ದಾರಿ ಇರುತ್ತದೆಯೋ ಹಾಗೆಯೇ ಯುವಕರಿಗೆ ದೇಶದ ರಕ್ಷಣೆಯ ಜವಾಬ್ದಾರಿಯನ್ನು ಅರಿತು ನಡೆಯಬೇಕಾಗುತ್ತದೆ. ತಾವು ಬದಲಾದರೆ ದೇಶದ ಬದಲಾವಣೆ ಸಾಧ್ಯವಾಗುತ್ತದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಡಾ.ವೆಂಕಟೇಶ್.ಎಲ್.ಎ ಮಾತನಾಡಿ, ‘ಯುವಕರು ಆಧುನಿಕ ಕೃಷಿಯನ್ನು ಹೊಸ ಹೊಸ ಅನ್ವೇಷಣೆ, ತಂತ್ರಜ್ಞಾನ, ಸಾಹಸಮಯ ಪ್ರವೃತ್ತಿ, ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡುತ್ತ ಕೃಷಿಯನ್ನು ಮಾದರಿ ಉದ್ಯಮವಾಗಿ ಪರಿವರ್ತಿಸಿಕೊಂಡು ಕೃಷಿಕರ ಬದುಕನ್ನು ಸುಧಾರಿಸಬೇಕು’ ಎಂದರು.</p>.<p>ಕಿರಣ್ ಸಿ.ಆರ್, ಮೋಹನಕುಮಾರ ಎಚ್.ಆರ್ ಮಾತನಾಡಿದರು. ವಿದ್ಯಾರ್ಥಿಗಳು ಕೆ.ಬಿ.ಕ್ರಾಸ್ನಲ್ಲಿ ನಡೆಯುವ ವಾರದ ಸಂತೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಶ್ರಮದಾನದಲ್ಲಿ ಪಾಲ್ಗೊಂಡರು.</p>.<p>ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ, ಶಿಬಿರಾಧಿಕಾರಿ ತುಕಾರಾಮ.ವಿ, ಸ್ಮಿತಾ.ಎಚ್.ಎಸ್, ಜಾಯಿದಾಬಿ ಖಾನಬೋಗಿ, ವೇದಮೂರ್ತಿ, ಜ್ಯೋತಿ ಎಸ್., ಲಿಂಗರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-17-1215164208</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ‘ರಾಷ್ಟ್ರದ ಭದ್ರತೆಗೆ ಧಕ್ಕೆ ಉಂಟಾಗುವ ಸಂಭವ ಬಂದರೆ ನಾವೆಲ್ಲರೂ ಒಗ್ಗೂಡಿ ರಕ್ಷಣೆಗೆ ತೊಡಗಿಕೊಳ್ಳಬೇಕು’ ಎಂದು ಕ್ಯಾಪ್ಟನ್ ಬಿ.ಎಂ.ಹರಿಪ್ರಸಾದ್ ಹೇಳಿದರು.</p>.<p>ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ಬಳಿಯ ರಂಭಾಪುರಿ ಮಠದ ಆವರಣದಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆಯ ಆರನೇ ದಿನದ ಕಾರ್ಯಕ್ರಮದಲ್ಲಿ ‘ದೇಶದ ರಕ್ಷಣೆಯಲ್ಲಿ ಯುವಕರ ಪಾತ್ರ’ ಎಂಬ ವಿಷಯದ ಬಗ್ಗೆ ಮಾತನಾಡಿದರು.</p>.<p>‘ದೇಶದ ರಕ್ಷಣೆಯಲ್ಲಿ ಸೈನ್ಯಕ್ಕೆ ಎಷ್ಟು ಜವಾಬ್ದಾರಿ ಇರುತ್ತದೆಯೋ ಹಾಗೆಯೇ ಯುವಕರಿಗೆ ದೇಶದ ರಕ್ಷಣೆಯ ಜವಾಬ್ದಾರಿಯನ್ನು ಅರಿತು ನಡೆಯಬೇಕಾಗುತ್ತದೆ. ತಾವು ಬದಲಾದರೆ ದೇಶದ ಬದಲಾವಣೆ ಸಾಧ್ಯವಾಗುತ್ತದೆ’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಡಾ.ವೆಂಕಟೇಶ್.ಎಲ್.ಎ ಮಾತನಾಡಿ, ‘ಯುವಕರು ಆಧುನಿಕ ಕೃಷಿಯನ್ನು ಹೊಸ ಹೊಸ ಅನ್ವೇಷಣೆ, ತಂತ್ರಜ್ಞಾನ, ಸಾಹಸಮಯ ಪ್ರವೃತ್ತಿ, ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡುತ್ತ ಕೃಷಿಯನ್ನು ಮಾದರಿ ಉದ್ಯಮವಾಗಿ ಪರಿವರ್ತಿಸಿಕೊಂಡು ಕೃಷಿಕರ ಬದುಕನ್ನು ಸುಧಾರಿಸಬೇಕು’ ಎಂದರು.</p>.<p>ಕಿರಣ್ ಸಿ.ಆರ್, ಮೋಹನಕುಮಾರ ಎಚ್.ಆರ್ ಮಾತನಾಡಿದರು. ವಿದ್ಯಾರ್ಥಿಗಳು ಕೆ.ಬಿ.ಕ್ರಾಸ್ನಲ್ಲಿ ನಡೆಯುವ ವಾರದ ಸಂತೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಶ್ರಮದಾನದಲ್ಲಿ ಪಾಲ್ಗೊಂಡರು.</p>.<p>ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ, ಶಿಬಿರಾಧಿಕಾರಿ ತುಕಾರಾಮ.ವಿ, ಸ್ಮಿತಾ.ಎಚ್.ಎಸ್, ಜಾಯಿದಾಬಿ ಖಾನಬೋಗಿ, ವೇದಮೂರ್ತಿ, ಜ್ಯೋತಿ ಎಸ್., ಲಿಂಗರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-17-1215164208</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>