<p><strong>ಬೆಂಗಳೂರು</strong>: ಇಂಡಿಯನ್ ಆಯಿಲ್ ಸಂಸ್ಥೆಯು ‘ಮೇಧಾ ವಿದ್ಯಾರ್ಥಿವೇತನ ಯೋಜನೆ’ಯಡಿಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ರಾಜ್ಯದ 75 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಸ್ತಾಂತರಿಸಿದೆ.</p>.<p>75ನೇ ಸ್ವಾತಂತ್ರ್ಯ ದಿನದ ಅಂಗವಾಗಿ 30 ರಾಜ್ಯಗಳಿಂದ ತಲಾ 75 ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಈ ಯೋಜನೆಯಡಿ ಒಟ್ಟು ₹2.25 ಕೋಟಿ ಮೊತ್ತದಲ್ಲಿ 2,259 ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ.</p>.<p>‘ಪ್ರತಿ ವಿದ್ಯಾರ್ಥಿನಿ ₹10 ಸಾವಿರ ವಿದ್ಯಾರ್ಥಿವೇತನ ಮತ್ತು ಪ್ರಮಾಣಪತ್ರ ಪಡೆಯಲಿದ್ದಾರೆ. ಇದರಿಂದ ಅವರ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಪ್ರತಿ ರಾಜ್ಯದ ಶಿಕ್ಷಣ ಮಂಡಳಿ ಶಿಫಾರಸಿನ ಮೇರೆಗೆ ಅತಿ ಹೆಚ್ಚು ಅಂಕ ಪಡೆದವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>ಇಂಡಿಯನ್ ಆಯಿಲ್ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ್ ಮಾಧವ್ ವೈದ್ಯ,‘ಯುವಜನಾಂಗದ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಸಂಸ್ಥೆ ಈ ಯೋಜನೆ ರೂಪಿಸಿದೆ. ವಿದ್ಯಾರ್ಥಿವೇತನದ ಮೂಲಕ ಹೆಣ್ಣುಮಕ್ಕಳು ತಮ್ಮ ಶೈಕ್ಷಣಿಕ ಗುರಿ ಮತ್ತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ. ವಿದ್ಯಾವಂತ ಹೆಣ್ಣುಮಕ್ಕಳು ಸಧೃಡ ಸಮಾಜ ನಿರ್ಮಿಸುತ್ತಾರೆ ಎನ್ನುವುದು ನಮ್ಮ ನಂಬಿಕೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಂಡಿಯನ್ ಆಯಿಲ್ ಸಂಸ್ಥೆಯು ‘ಮೇಧಾ ವಿದ್ಯಾರ್ಥಿವೇತನ ಯೋಜನೆ’ಯಡಿಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ರಾಜ್ಯದ 75 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಸ್ತಾಂತರಿಸಿದೆ.</p>.<p>75ನೇ ಸ್ವಾತಂತ್ರ್ಯ ದಿನದ ಅಂಗವಾಗಿ 30 ರಾಜ್ಯಗಳಿಂದ ತಲಾ 75 ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಈ ಯೋಜನೆಯಡಿ ಒಟ್ಟು ₹2.25 ಕೋಟಿ ಮೊತ್ತದಲ್ಲಿ 2,259 ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ.</p>.<p>‘ಪ್ರತಿ ವಿದ್ಯಾರ್ಥಿನಿ ₹10 ಸಾವಿರ ವಿದ್ಯಾರ್ಥಿವೇತನ ಮತ್ತು ಪ್ರಮಾಣಪತ್ರ ಪಡೆಯಲಿದ್ದಾರೆ. ಇದರಿಂದ ಅವರ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಪ್ರತಿ ರಾಜ್ಯದ ಶಿಕ್ಷಣ ಮಂಡಳಿ ಶಿಫಾರಸಿನ ಮೇರೆಗೆ ಅತಿ ಹೆಚ್ಚು ಅಂಕ ಪಡೆದವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>ಇಂಡಿಯನ್ ಆಯಿಲ್ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ್ ಮಾಧವ್ ವೈದ್ಯ,‘ಯುವಜನಾಂಗದ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಸಂಸ್ಥೆ ಈ ಯೋಜನೆ ರೂಪಿಸಿದೆ. ವಿದ್ಯಾರ್ಥಿವೇತನದ ಮೂಲಕ ಹೆಣ್ಣುಮಕ್ಕಳು ತಮ್ಮ ಶೈಕ್ಷಣಿಕ ಗುರಿ ಮತ್ತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ. ವಿದ್ಯಾವಂತ ಹೆಣ್ಣುಮಕ್ಕಳು ಸಧೃಡ ಸಮಾಜ ನಿರ್ಮಿಸುತ್ತಾರೆ ಎನ್ನುವುದು ನಮ್ಮ ನಂಬಿಕೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>