<p>ಜಗಳೂರು: ‘ಮೇ 29ರಂದು ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ಊಟದ ವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಿದ್ಧತೆ ಕೈಗೊಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ ಶಿಕ್ಷಕರಿಗೆ ಸಲಹೆ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಈಚೆಗೆ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ನೀಡಲಾಗುತ್ತದೆ. ತಾಲ್ಲೂಕಿನಲ್ಲಿ ಶತಮಾನ ಪೂರೈಸಿದ ಶಾಲೆಗಳು ಸೇರಿದಂತೆ ಅನೇಕ ಶಾಲಾ ಕಟ್ಟಡಗಳು ದುಃಸ್ಥಿತಿಯಲ್ಲಿದ್ದವು. ಕಳೆದ ವರ್ಷ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿ ಅನುದಾನದಲ್ಲಿ 200ಕ್ಕೂ ಹೆಚ್ಚು ಶಾಲೆಗಳ ದುರಸ್ತಿ ಕೈಗೊಳ್ಳಲಾಗಿದೆ. ಕೆಲ ಶಿಕ್ಷಕರಿಗೆ ವಿಷಯ ಹಂಚಿಕೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದು ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಠ್ಯಪುಸ್ತಕಗಳನ್ನು ಬಹುತೇಕ ಶಾಲೆಗಳಿಗೆ ತಲುಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಣೆ ಮಾಡಬೇಕು. ಶಿಕ್ಷಣ ಇಲಾಖೆಯಿಂದ ದಾಖಲಾತಿ ಆಂದೋಲನ ನಡೆಸಲಾಗಿದ್ದು, ಮನೆಮನೆಗೆ ಭೇಟಿ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವಂತೆ ಪೋಷಕರಲ್ಲಿ ಮನವಿ ಮಾಡಲಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಧ್ಯೇಯವಾಗಿದೆ’ ಎಂದು ಹೇಳಿದರು.</p>.<p>ಬಿಆರ್ಸಿ ಡಿ.ಡಿ ಹಾಲಪ್ಪ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಣಕಾರ್, ಇಸಿಒಗಳಾದ ಬಸವರಾಜ್, ತಿಪ್ಪೇಸ್ವಾಮಿ, ಈ.ಸತೀಶ್, ಬಸವರಾಜ್, ರವಿಕುಮಾರ್, ಸಿಆರ್ಪಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-1174114633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ‘ಮೇ 29ರಂದು ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ಊಟದ ವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಿದ್ಧತೆ ಕೈಗೊಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ ಶಿಕ್ಷಕರಿಗೆ ಸಲಹೆ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಈಚೆಗೆ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ನೀಡಲಾಗುತ್ತದೆ. ತಾಲ್ಲೂಕಿನಲ್ಲಿ ಶತಮಾನ ಪೂರೈಸಿದ ಶಾಲೆಗಳು ಸೇರಿದಂತೆ ಅನೇಕ ಶಾಲಾ ಕಟ್ಟಡಗಳು ದುಃಸ್ಥಿತಿಯಲ್ಲಿದ್ದವು. ಕಳೆದ ವರ್ಷ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿ ಅನುದಾನದಲ್ಲಿ 200ಕ್ಕೂ ಹೆಚ್ಚು ಶಾಲೆಗಳ ದುರಸ್ತಿ ಕೈಗೊಳ್ಳಲಾಗಿದೆ. ಕೆಲ ಶಿಕ್ಷಕರಿಗೆ ವಿಷಯ ಹಂಚಿಕೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದು ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಠ್ಯಪುಸ್ತಕಗಳನ್ನು ಬಹುತೇಕ ಶಾಲೆಗಳಿಗೆ ತಲುಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಣೆ ಮಾಡಬೇಕು. ಶಿಕ್ಷಣ ಇಲಾಖೆಯಿಂದ ದಾಖಲಾತಿ ಆಂದೋಲನ ನಡೆಸಲಾಗಿದ್ದು, ಮನೆಮನೆಗೆ ಭೇಟಿ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವಂತೆ ಪೋಷಕರಲ್ಲಿ ಮನವಿ ಮಾಡಲಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಧ್ಯೇಯವಾಗಿದೆ’ ಎಂದು ಹೇಳಿದರು.</p>.<p>ಬಿಆರ್ಸಿ ಡಿ.ಡಿ ಹಾಲಪ್ಪ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಣಕಾರ್, ಇಸಿಒಗಳಾದ ಬಸವರಾಜ್, ತಿಪ್ಪೇಸ್ವಾಮಿ, ಈ.ಸತೀಶ್, ಬಸವರಾಜ್, ರವಿಕುಮಾರ್, ಸಿಆರ್ಪಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-1174114633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>