<p>ಕೆ.ಆರ್.ಪೇಟೆ: ಜೀವನದಲ್ಲಿ ಗುರಿ ಸಾಧನೆ ಮಾಡಬೇಕೆಂದರೆ ಸೋಲನ್ನೇ ಗೆಲುವಿನ ಸೋಪಾನವಾಗಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಹೇಳಿದರು.</p>.<p>ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭವಿಷ್ಯದಲ್ಲಿ ಭಾರತವನ್ನು ಕಟ್ಟುವ ನಿರ್ಮಾತೃಗಳಾದ ನೀವು ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರಿ ಪಲಾಯನ ವಾದ ಅನುಸರಿಸದೇ ಸತತ ಪರಿಶ್ರಮ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸೋಲನ್ನೇ ಗೆಲುವಿನ ಮೆಟ್ಟಿಲುಗಳನ್ನಾಗಿಸಿ ಕೊಂಡು ಸಾಧನೆ ಮಾಡಬೇಕು ಎಂದರು.</p>.<p>ವಿದ್ಯಾರ್ಥಿ ಜೀವನದಲ್ಲಿ ನಾನೂ ನಿಮ್ಮಂತೆ ಕಷ್ಟಪಟ್ಟಿದ್ದೇನೆ. ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ನಾನು ಸೋಲಿಗೆ ಹೆದರದೇ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪದವಿ ಶಿಕ್ಷಣ ಪಡೆದು ನಂತರ ಮಹಾ ಪ್ರಬಂಧ ಮಂಡಿಸಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿರುವೆ. ಸೋಲನ್ನು ಸವಾಲಾಗಿ ಸ್ವೀಕರಿಸಿದ್ದರಿಂದಲೇ ಈ ಯಶಸ್ಸು ಸಾಧ್ಯವಾಯಿತು. ಹಾಗಾಗಿ ನೀವು ಗೆಲುವಿಗೆ ಶ್ರಮಪಡುವದನ್ನು ರೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಾಗಪ್ಪ ಯು. ಭಜಂತ್ರಿ ಮಾತನಾಡಿ, ನಿಮ್ಮೆಲ್ಲರ ಸತತ ಪರಿಶ್ರಮದಿಂದಲೇ ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ ನಮ್ಮ ಕಾಲೇಜು ನೂರಕ್ಕೆ ನೂರರಷ್ಟು ಫಲಿತಾಂಶ ಕೊಡುವ ಕಾಲೇಜಾಗಿ ದೆ. ಇದನ್ನು ಪ್ರತಿ ವರ್ಷ ಮುಂದುವರಿಸುವಂತೆ ಮನವಿ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-40-1028435395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪೇಟೆ: ಜೀವನದಲ್ಲಿ ಗುರಿ ಸಾಧನೆ ಮಾಡಬೇಕೆಂದರೆ ಸೋಲನ್ನೇ ಗೆಲುವಿನ ಸೋಪಾನವಾಗಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಹೇಳಿದರು.</p>.<p>ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭವಿಷ್ಯದಲ್ಲಿ ಭಾರತವನ್ನು ಕಟ್ಟುವ ನಿರ್ಮಾತೃಗಳಾದ ನೀವು ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರಿ ಪಲಾಯನ ವಾದ ಅನುಸರಿಸದೇ ಸತತ ಪರಿಶ್ರಮ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸೋಲನ್ನೇ ಗೆಲುವಿನ ಮೆಟ್ಟಿಲುಗಳನ್ನಾಗಿಸಿ ಕೊಂಡು ಸಾಧನೆ ಮಾಡಬೇಕು ಎಂದರು.</p>.<p>ವಿದ್ಯಾರ್ಥಿ ಜೀವನದಲ್ಲಿ ನಾನೂ ನಿಮ್ಮಂತೆ ಕಷ್ಟಪಟ್ಟಿದ್ದೇನೆ. ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ನಾನು ಸೋಲಿಗೆ ಹೆದರದೇ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪದವಿ ಶಿಕ್ಷಣ ಪಡೆದು ನಂತರ ಮಹಾ ಪ್ರಬಂಧ ಮಂಡಿಸಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿರುವೆ. ಸೋಲನ್ನು ಸವಾಲಾಗಿ ಸ್ವೀಕರಿಸಿದ್ದರಿಂದಲೇ ಈ ಯಶಸ್ಸು ಸಾಧ್ಯವಾಯಿತು. ಹಾಗಾಗಿ ನೀವು ಗೆಲುವಿಗೆ ಶ್ರಮಪಡುವದನ್ನು ರೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಾಗಪ್ಪ ಯು. ಭಜಂತ್ರಿ ಮಾತನಾಡಿ, ನಿಮ್ಮೆಲ್ಲರ ಸತತ ಪರಿಶ್ರಮದಿಂದಲೇ ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ ನಮ್ಮ ಕಾಲೇಜು ನೂರಕ್ಕೆ ನೂರರಷ್ಟು ಫಲಿತಾಂಶ ಕೊಡುವ ಕಾಲೇಜಾಗಿ ದೆ. ಇದನ್ನು ಪ್ರತಿ ವರ್ಷ ಮುಂದುವರಿಸುವಂತೆ ಮನವಿ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-40-1028435395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>