<p>ಕಡರನಾಯ್ಕನಹಳ್ಳಿ: ‘ದುಶ್ಚಟಗಳಿಂದ ಮುಕ್ತವಾದ ಸಮಾಜ ಮೌಲ್ಯಾಧಾರಿತವಾಗಿದೆ. ಸಮಾಜವನ್ನು ನಿಕೋಟಿನ್, ತಂಬಾಕು ಸೇವನೆಯಿಂದ ಮುಕ್ತವಾಗಿಸಲು ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರು ಕೈಜೋಡಿಸಿ’ ಎಂದು ಡಾ. ಆಶಾ ಸಲಹೆ ನೀಡಿದರು.</p>.<p>ಸಮೀಪದ ಬಿಳಸನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹರಿಹರ ತಾಲ್ಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ನಿಕೋಟಿನ್ ಮತ್ತು ತಂಬಾಕು ಸೇವನೆ ಯುವ ಸಮೂಹವನ್ನು ಆಕರ್ಷಿಸುತ್ತಿರುವುದು ವಿಪರ್ಯಾಸ. ಕಂಪನಿಗಳ ಆಕರ್ಷಕ ಜಾಹೀರಾತು ಸಹ ಇದಕ್ಕೆ ಕಾರಣವಾಗಿದೆ’ ಎಂದು ತಾಲ್ಲೂಕಿನ ಹಿರಿಯ ಆರೋಗ್ಯ ನಿರೀಕ್ಷಕ ಎಂ. ಉಮ್ಮಣ್ಣ ಹೇಳಿದರು.</p>.<p>‘ತಂಬಾಕು ಮತ್ತು ನಿಕೋಟಿನ್ ದುಷ್ಪರಿಣಾಮಗಳನ್ನು ಮನವರಿಕೆ ಮಾಡಿಕೊಡುವುದು ನಮ್ಮ ಉದ್ದೇಶ. ಬಿಳಸನೂರು ವ್ಯಾಪ್ತಿಯ ತಿಮ್ಮಾಪುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿಸಲು ಮತ್ತು ಘೋಷಿಸಲು ಎಲ್ಲ ರೀತಿಯ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಡಾ.ಉಷಾ ಹೇಳಿದರು.</p>.<p>ಎಂ. ಮಂಜುನಾಥ್, ಬಸವರಾಜ್ ಎರೆಸೀಮೆ, ನಾಗರತ್ನ, ಪುಷ್ಪಾ, ರೇಣುಕಾ, ನಾಗಮ್ಮ, ಆಸ್ಮಾ, ನಾದಾಫ್ ರಮ್ಯಾ, ಫಾರ್ಮಸಿ ಅಧಿಕಾರಿ ಮಂಜುನಾಥ, ಕಿರಿಯ ಪ್ರಯೋಗಶಾಲೆ ತಂತ್ರಜ್ಞ ದೇವರಾಜ್, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-43-706450386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡರನಾಯ್ಕನಹಳ್ಳಿ: ‘ದುಶ್ಚಟಗಳಿಂದ ಮುಕ್ತವಾದ ಸಮಾಜ ಮೌಲ್ಯಾಧಾರಿತವಾಗಿದೆ. ಸಮಾಜವನ್ನು ನಿಕೋಟಿನ್, ತಂಬಾಕು ಸೇವನೆಯಿಂದ ಮುಕ್ತವಾಗಿಸಲು ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರು ಕೈಜೋಡಿಸಿ’ ಎಂದು ಡಾ. ಆಶಾ ಸಲಹೆ ನೀಡಿದರು.</p>.<p>ಸಮೀಪದ ಬಿಳಸನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹರಿಹರ ತಾಲ್ಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ನಿಕೋಟಿನ್ ಮತ್ತು ತಂಬಾಕು ಸೇವನೆ ಯುವ ಸಮೂಹವನ್ನು ಆಕರ್ಷಿಸುತ್ತಿರುವುದು ವಿಪರ್ಯಾಸ. ಕಂಪನಿಗಳ ಆಕರ್ಷಕ ಜಾಹೀರಾತು ಸಹ ಇದಕ್ಕೆ ಕಾರಣವಾಗಿದೆ’ ಎಂದು ತಾಲ್ಲೂಕಿನ ಹಿರಿಯ ಆರೋಗ್ಯ ನಿರೀಕ್ಷಕ ಎಂ. ಉಮ್ಮಣ್ಣ ಹೇಳಿದರು.</p>.<p>‘ತಂಬಾಕು ಮತ್ತು ನಿಕೋಟಿನ್ ದುಷ್ಪರಿಣಾಮಗಳನ್ನು ಮನವರಿಕೆ ಮಾಡಿಕೊಡುವುದು ನಮ್ಮ ಉದ್ದೇಶ. ಬಿಳಸನೂರು ವ್ಯಾಪ್ತಿಯ ತಿಮ್ಮಾಪುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿಸಲು ಮತ್ತು ಘೋಷಿಸಲು ಎಲ್ಲ ರೀತಿಯ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಡಾ.ಉಷಾ ಹೇಳಿದರು.</p>.<p>ಎಂ. ಮಂಜುನಾಥ್, ಬಸವರಾಜ್ ಎರೆಸೀಮೆ, ನಾಗರತ್ನ, ಪುಷ್ಪಾ, ರೇಣುಕಾ, ನಾಗಮ್ಮ, ಆಸ್ಮಾ, ನಾದಾಫ್ ರಮ್ಯಾ, ಫಾರ್ಮಸಿ ಅಧಿಕಾರಿ ಮಂಜುನಾಥ, ಕಿರಿಯ ಪ್ರಯೋಗಶಾಲೆ ತಂತ್ರಜ್ಞ ದೇವರಾಜ್, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-43-706450386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>