<p>ಕಡೂರು: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ವತಿಯಿಂದ 2025-26ನೇ ಸಾಲಿನ 10 ಮತ್ತು 12ನೇ ತರಗತಿಯಲ್ಲಿ ಶೇ 90 ಹಾಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕಾರಣಾಂತರದಿಂದ ಪುರಸ್ಕಾರ ನೀಡಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲು ತೀರ್ಮಾನಿಸಿದ್ದು, ಮೇ 25ರ ಒಳಗೆ www.aivlm.org ಮೂಲಕ ಅರ್ಜಿ ಸಲ್ಲಿಸಬೇಕು ಎಂದರು.</p>.<p>ಸಮಾರಂಭವನ್ನು ನಿಗದಿ ಪಡಿಸಿದ ನಂತರ ಸಮಾಜದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಜತೆಗೆ ಸಮಾಜಕ್ಕಾಗಿ ದುಡಿದವರು ಹಾಗೂ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.</p>.<p>ಮಹಾಸಭಾದ ಕಾರ್ಯದರ್ಶಿ ಬೇಲೇನಹಳ್ಳಿ ಸೋಮಶೇಖರ್, ಕೋಶಾಧ್ಯಕ್ಷ ಎಚ್.ಸಿ.ರೇವಣಸಿದ್ದಪ್ಪ, ವೀರಶೈವ ಮಹಾಸಭಾದ ತಾಲ್ಲೂಕು ಘಟಕ ಅಧ್ಯಕ್ಷ ಎಸ್.ಪಿ.ರೇಣುಕಾರಾಧ್ಯ, ನಿರ್ದೇಶಕ ಜಿ.ಎಂ.ಯತೀಶ್, ಭಾರ್ಗೇಶಪ್ಪ, ಕಲ್ಲೇಶ್, ದಿವಾಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-126-1444305216</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ವತಿಯಿಂದ 2025-26ನೇ ಸಾಲಿನ 10 ಮತ್ತು 12ನೇ ತರಗತಿಯಲ್ಲಿ ಶೇ 90 ಹಾಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕಾರಣಾಂತರದಿಂದ ಪುರಸ್ಕಾರ ನೀಡಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲು ತೀರ್ಮಾನಿಸಿದ್ದು, ಮೇ 25ರ ಒಳಗೆ www.aivlm.org ಮೂಲಕ ಅರ್ಜಿ ಸಲ್ಲಿಸಬೇಕು ಎಂದರು.</p>.<p>ಸಮಾರಂಭವನ್ನು ನಿಗದಿ ಪಡಿಸಿದ ನಂತರ ಸಮಾಜದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಜತೆಗೆ ಸಮಾಜಕ್ಕಾಗಿ ದುಡಿದವರು ಹಾಗೂ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.</p>.<p>ಮಹಾಸಭಾದ ಕಾರ್ಯದರ್ಶಿ ಬೇಲೇನಹಳ್ಳಿ ಸೋಮಶೇಖರ್, ಕೋಶಾಧ್ಯಕ್ಷ ಎಚ್.ಸಿ.ರೇವಣಸಿದ್ದಪ್ಪ, ವೀರಶೈವ ಮಹಾಸಭಾದ ತಾಲ್ಲೂಕು ಘಟಕ ಅಧ್ಯಕ್ಷ ಎಸ್.ಪಿ.ರೇಣುಕಾರಾಧ್ಯ, ನಿರ್ದೇಶಕ ಜಿ.ಎಂ.ಯತೀಶ್, ಭಾರ್ಗೇಶಪ್ಪ, ಕಲ್ಲೇಶ್, ದಿವಾಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-126-1444305216</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>