<p>ಆಳಂದ: ‘ಪ್ರಸ್ತುತ ಶೈಕ್ಷಣಿಕ ಅವಕಾಶಗಳು ಎಲ್ಲಡೆ ದೊರೆಯುತ್ತಿದ್ದು, ಇದರ ಸದ್ಬಳಕೆ ಮೂಲಕ ಜ್ಞಾನದ ಹಸಿವು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು’ ಎಂದು ಕಲಬುರಗಿಯ ಶರಣಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಸುರೇಶ ನಂದಗಾಂವ ತಿಳಿಸಿದರು.</p>.<p>ಪಟ್ಟಣದ ಎ.ವಿ.ಪಾಟೀಲ ಪದವಿ ಕಾಲೇಜಿನಲ್ಲಿ ಶುಕ್ರವಾರ ಪ್ರಸಕ್ತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎಚ್.ಹೊಸಮನಿ ಮಾತನಾಡಿ, ‘ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಅಧ್ಯಯನಶೀಲತೆ ಗುಣ ಬೆಳೆಸಿಕೊಂಡಾಗ ಮಾತ್ರ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಿದೆ. ಕಳೆದ 5 ದಶಕದಲ್ಲಿ ನಮ್ಮ ಕಾಲೇಜು ತಾಲ್ಲೂಕಿನ ಪ್ರಗತಿಗೆ ತನ್ನದೆಯಾದ ಕೊಡುಗೆ ನೀಡಿದೆ’ ಎಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕರಾದ ಎಸ್.ಎಸ್.ಕಮ್ಮಾರ, ರಮೇಶ ಮಸರೋಬಾ ಮಾತನಾಡಿದರು. ಪ್ರಾಧ್ಯಾಪಕ ರಾಜಶೇಖರ ಬಾಬನೂರೆ, ವೆಂಕಟೇಶ ಜಿ, ಜೈಪ್ರಕಾಶ ಬಾವಿಮನಿ, ಶ್ರೀಮಂತ ಎಸ್., ಬಸವರಾಜ ಡಿ.ಪಾಟೀಲ, ಟೀಕಪ್ಪ ಎಂ., ಸಿದ್ದರಾಮ ಮಾಶಾಳ, ಬಬ್ರುವಾಹನ, ಬಸವರಾಜ ಶ್ರೇಂಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮತ್ತು ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-31-97181029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಳಂದ: ‘ಪ್ರಸ್ತುತ ಶೈಕ್ಷಣಿಕ ಅವಕಾಶಗಳು ಎಲ್ಲಡೆ ದೊರೆಯುತ್ತಿದ್ದು, ಇದರ ಸದ್ಬಳಕೆ ಮೂಲಕ ಜ್ಞಾನದ ಹಸಿವು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು’ ಎಂದು ಕಲಬುರಗಿಯ ಶರಣಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಸುರೇಶ ನಂದಗಾಂವ ತಿಳಿಸಿದರು.</p>.<p>ಪಟ್ಟಣದ ಎ.ವಿ.ಪಾಟೀಲ ಪದವಿ ಕಾಲೇಜಿನಲ್ಲಿ ಶುಕ್ರವಾರ ಪ್ರಸಕ್ತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎಚ್.ಹೊಸಮನಿ ಮಾತನಾಡಿ, ‘ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಅಧ್ಯಯನಶೀಲತೆ ಗುಣ ಬೆಳೆಸಿಕೊಂಡಾಗ ಮಾತ್ರ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಿದೆ. ಕಳೆದ 5 ದಶಕದಲ್ಲಿ ನಮ್ಮ ಕಾಲೇಜು ತಾಲ್ಲೂಕಿನ ಪ್ರಗತಿಗೆ ತನ್ನದೆಯಾದ ಕೊಡುಗೆ ನೀಡಿದೆ’ ಎಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕರಾದ ಎಸ್.ಎಸ್.ಕಮ್ಮಾರ, ರಮೇಶ ಮಸರೋಬಾ ಮಾತನಾಡಿದರು. ಪ್ರಾಧ್ಯಾಪಕ ರಾಜಶೇಖರ ಬಾಬನೂರೆ, ವೆಂಕಟೇಶ ಜಿ, ಜೈಪ್ರಕಾಶ ಬಾವಿಮನಿ, ಶ್ರೀಮಂತ ಎಸ್., ಬಸವರಾಜ ಡಿ.ಪಾಟೀಲ, ಟೀಕಪ್ಪ ಎಂ., ಸಿದ್ದರಾಮ ಮಾಶಾಳ, ಬಬ್ರುವಾಹನ, ಬಸವರಾಜ ಶ್ರೇಂಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮತ್ತು ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-31-97181029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>