<p>ಕಲಬುರಗಿ: ‘ಎನ್ಎಸ್ಎಸ್ ಶಿಬಿರಗಳು ಹಸಿವಿನ ಮಹತ್ವ, ಸಮಯ ಪಾಲನೆ ಕುರಿತು ತಿಳಿಸಿಕೊಡುತ್ತವೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರುವ ಕಾರ್ಯಾಗಾರಗಳಾಗಿವೆ’ ಎಂದು ಸಹ ಪ್ರಾಧ್ಯಾಪಕ ಕರಿಗೂಳೇಶ್ವರ ಹೇಳಿದರು.</p>.<p>ತಾಲ್ಲೂಕಿನ ಔರಾದ (ಬಿ) ಗ್ರಾಮದ ಸ್ವಾಮಿ ಸಮರ್ಥ ದೇವಸ್ಥಾನದ ಆವರಣದಲ್ಲಿ ಎನ್.ವಿ ಪದವಿ ಮಹಾವಿದ್ಯಾಲಯ, ಐಕ್ಯೂಎಸಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಹಯೋಗದಲ್ಲಿ ನಡೆದ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಇಂದು ಹೆಚ್ಚಿನ ಮಹಾವಿದ್ಯಾಲಯಗಳಲ್ಲಿ ಎನ್ಎಸ್ಎಸ್ ಘಟಕಗಳಿವೆ. ಆದರೆ, ಎನ್.ವಿ.ಕಾಲೇಜಿನ ಶಿಬಿರಾರ್ಥಿಗಳು ಅಳವಡಿಸಿಕೊಂಡಿರುವ ಸೇವಾ ಮನೋಭಾವ ಅನುಕರಣೀಯ ಹಾಗೂ ಶ್ಲಾಘನೀಯ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನೂತನ ವಿದ್ಯಾಲಯ ಸಂಸ್ಥೆಯ ಕಾಲೇಜು ಶೈಕ್ಷಣಿಕ ಮಂಡಳಿಯ ಸದಸ್ಯ ಸದಾಶಿವ ಆರ್. ಜಿಡಗೀಕರ್ ಮಾತನಾಡಿ, ‘ಶಿಬಿರಾರ್ಥಿಗಳು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂಥ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ನೆರವಾಗುತ್ತವೆ’ ಎಂದರು.</p>.<p>ಮೋಹಿನಿ ಸದಾಶಿವ ಜಿಡಗೀಕರ್ ಮಾತನಾಡಿದರು. ಎನ್ವಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಎನ್.ಎಸ್.ಎಸ್ ಅಧಿಕಾರಿ ದಯಾನಂದ ಎಂ.ಶಾಸ್ತ್ರಿ ವಂದಿಸಿದರು. ಪ್ರೊ.ಶ್ರೀಕಾಂತ ಪಂಡಿತ ಸ್ವಾಗತಿಸಿದರು. ಮಲ್ಲಿನಾಥ ಎಸ್.ತಳವಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-34-1121697332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಎನ್ಎಸ್ಎಸ್ ಶಿಬಿರಗಳು ಹಸಿವಿನ ಮಹತ್ವ, ಸಮಯ ಪಾಲನೆ ಕುರಿತು ತಿಳಿಸಿಕೊಡುತ್ತವೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರುವ ಕಾರ್ಯಾಗಾರಗಳಾಗಿವೆ’ ಎಂದು ಸಹ ಪ್ರಾಧ್ಯಾಪಕ ಕರಿಗೂಳೇಶ್ವರ ಹೇಳಿದರು.</p>.<p>ತಾಲ್ಲೂಕಿನ ಔರಾದ (ಬಿ) ಗ್ರಾಮದ ಸ್ವಾಮಿ ಸಮರ್ಥ ದೇವಸ್ಥಾನದ ಆವರಣದಲ್ಲಿ ಎನ್.ವಿ ಪದವಿ ಮಹಾವಿದ್ಯಾಲಯ, ಐಕ್ಯೂಎಸಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಹಯೋಗದಲ್ಲಿ ನಡೆದ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಇಂದು ಹೆಚ್ಚಿನ ಮಹಾವಿದ್ಯಾಲಯಗಳಲ್ಲಿ ಎನ್ಎಸ್ಎಸ್ ಘಟಕಗಳಿವೆ. ಆದರೆ, ಎನ್.ವಿ.ಕಾಲೇಜಿನ ಶಿಬಿರಾರ್ಥಿಗಳು ಅಳವಡಿಸಿಕೊಂಡಿರುವ ಸೇವಾ ಮನೋಭಾವ ಅನುಕರಣೀಯ ಹಾಗೂ ಶ್ಲಾಘನೀಯ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನೂತನ ವಿದ್ಯಾಲಯ ಸಂಸ್ಥೆಯ ಕಾಲೇಜು ಶೈಕ್ಷಣಿಕ ಮಂಡಳಿಯ ಸದಸ್ಯ ಸದಾಶಿವ ಆರ್. ಜಿಡಗೀಕರ್ ಮಾತನಾಡಿ, ‘ಶಿಬಿರಾರ್ಥಿಗಳು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂಥ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ನೆರವಾಗುತ್ತವೆ’ ಎಂದರು.</p>.<p>ಮೋಹಿನಿ ಸದಾಶಿವ ಜಿಡಗೀಕರ್ ಮಾತನಾಡಿದರು. ಎನ್ವಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಎನ್.ಎಸ್.ಎಸ್ ಅಧಿಕಾರಿ ದಯಾನಂದ ಎಂ.ಶಾಸ್ತ್ರಿ ವಂದಿಸಿದರು. ಪ್ರೊ.ಶ್ರೀಕಾಂತ ಪಂಡಿತ ಸ್ವಾಗತಿಸಿದರು. ಮಲ್ಲಿನಾಥ ಎಸ್.ತಳವಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-34-1121697332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>