<p>ಕಲಬುರಗಿ: ‘ಎನ್ಎಸ್ಎಸ್ ಎಂದರೆ ನಾನು ಸೇವೆಗೆ ಸದಾ ಸಿದ್ಧ ಎಂದರ್ಥ. ಶಿಬಿರದಲ್ಲಿ ಭಾಗವಹಿಸುವವರು ಸೇವೆಗೆ ಸದಾ ಸಿದ್ಧರಾಗಿರಬೇಕು’ ಎಂದು ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಮಾಜಶಾಸ್ತ ವಿಭಾಗದ ಮುಖ್ಯಸ್ಥ ಮಹೇಶಕುಮಾರ ಗಂವ್ಹಾರ ಹೇಳಿದರು.</p>.<p>ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿ,‘ನಿಸ್ವಾರ್ಥ ಸೇವೆಗೆ ಮತ್ತೊಂದು ಹೆಸರು ಎನ್ಎಸ್ಎಸ್’ ಎಂದರು.</p>.<p>ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪುಟ್ಟಮಣಿ ದೇವಿದಾಸ ಮಾತನಾಡಿ,‘ಗ್ರಾಮ ಸ್ವರಾಜ್ ಗಾಂಧೀಜಿ ಕನಸಾಗಿತ್ತು. ಎನ್ಎಸ್ಎಸ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಸೀಮಾ ಪಾಟೀಲ ಮಾತನಾಡಿದರು. ಎನ್ಎಸ್ಎಸ್ ಅಧಿಕಾರಿ ರಾಜಲಕ್ಷ್ಮಿ ಡಿ. ಸ್ವಾಗತಿಸಿದರು. ಕಲ್ಪನಾ ಡಿ.ಮಹೇಂದ್ರಕರ್ ಅತಿಥಿ ಪರಿಚಯ ಮಾಡಿದರು. ಲಕ್ಷ್ಮಿ ಎಚ್. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-34-1471459595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಎನ್ಎಸ್ಎಸ್ ಎಂದರೆ ನಾನು ಸೇವೆಗೆ ಸದಾ ಸಿದ್ಧ ಎಂದರ್ಥ. ಶಿಬಿರದಲ್ಲಿ ಭಾಗವಹಿಸುವವರು ಸೇವೆಗೆ ಸದಾ ಸಿದ್ಧರಾಗಿರಬೇಕು’ ಎಂದು ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಮಾಜಶಾಸ್ತ ವಿಭಾಗದ ಮುಖ್ಯಸ್ಥ ಮಹೇಶಕುಮಾರ ಗಂವ್ಹಾರ ಹೇಳಿದರು.</p>.<p>ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿ,‘ನಿಸ್ವಾರ್ಥ ಸೇವೆಗೆ ಮತ್ತೊಂದು ಹೆಸರು ಎನ್ಎಸ್ಎಸ್’ ಎಂದರು.</p>.<p>ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪುಟ್ಟಮಣಿ ದೇವಿದಾಸ ಮಾತನಾಡಿ,‘ಗ್ರಾಮ ಸ್ವರಾಜ್ ಗಾಂಧೀಜಿ ಕನಸಾಗಿತ್ತು. ಎನ್ಎಸ್ಎಸ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಸೀಮಾ ಪಾಟೀಲ ಮಾತನಾಡಿದರು. ಎನ್ಎಸ್ಎಸ್ ಅಧಿಕಾರಿ ರಾಜಲಕ್ಷ್ಮಿ ಡಿ. ಸ್ವಾಗತಿಸಿದರು. ಕಲ್ಪನಾ ಡಿ.ಮಹೇಂದ್ರಕರ್ ಅತಿಥಿ ಪರಿಚಯ ಮಾಡಿದರು. ಲಕ್ಷ್ಮಿ ಎಚ್. ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-34-1471459595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>