<p>ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದ ಶಿಕ್ಷಾ ಬಂದಿ ದತ್ತಾತ್ರಿ ಸುಭಾಷ ಅವರ ಮಗನ ಶೈಕ್ಷಣಿಕೆ ವೆಚ್ಚವನ್ನು ಭರಿಸಲು ಕಲಬುರಗಿಯ ಡಿವೈನ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಚಾರಿಟಬಲ್ ಟ್ರಸ್ಟ್ ಮುಂದಾಗಿವೆ.</p>.<p>ಶಿಕ್ಷಾ ಬಂದಿ ದತ್ತಾತ್ರಿ ಆರ್ಥಿಕವಾಗಿ ದುರ್ಬಲರಾದ ಕಾರಣ ತನ್ನ ಮಗನ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ (ಪ್ಯಾರಾ ಮೆಡಿಕಲ್ ಕೋರ್ಸ್) ಕಾಲೇಜಿನ ವೆಚ್ಚವನ್ನು ಭರಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾರಾಗೃಹದ ಪ್ರಭಾರ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ ಅವರು ಡಿವೈನ್ ಸ್ಕೂಲ್ ಆಫ್ ನರ್ಸಿಂಗ್ ಸಂಸ್ಥಾಪಕ ಡಾ.ಕಿರಣ್ ಜಾರ್ಜ್ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಚಾರಿಟಬಲ್ ಟ್ರಸ್ಟ್ ಸಂಸ್ಥೆಯವರನ್ನು ಸಂಪರ್ಕಿಸಿ, ಶಿಕ್ಷಾ ಬಂದಿಯ ಮಗನ 3 ವರ್ಷದ ಶೈಕ್ಷಣಿಕ ವೆಚ್ಚವನ್ನು ಭರಿಸಲು ಕೋರಿದ್ದರು. ಅದರಂತೆ ಅವರು ಮೊದಲನೇ ವರ್ಷದ ವಿದ್ಯಾಭ್ಯಾಸದ ವೆಚ್ಚಕ್ಕಾಗಿ ಬುಧವಾರ ಚೆಕ್ ನೀಡಿದರು.</p>.<p>‘ಆರ್ಥಿಕವಾಗಿ ದುರ್ಬಲರಾದ ಶಿಕ್ಷಾ ಬಂದಿಯ ಮಗನ ವಿದ್ಯಾಭ್ಯಾಸಕ್ಕಾಗಿ ನೆರವು ನೀಡಿರುವುದು ಮಾನವೀಯ ಮಾದರಿ ಕಾರ್ಯ’ ಎಂದು ಪ್ರಭಾರ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ ಶ್ಲಾಘಿಸಿದರು.</p>.<p>ಫಾದರ್ ಮಿರಿಂಡಾ, ಫಾದರ್ ಮಾಕ್ಸಿಮ್, ಕಿರಣ, ಕಾರಾಗೃಹದ ಸಹಾಯಕ ಅಧೀಕ್ಷಕ ಬಿ.ಸುರೇಶ್, ಜೈಲರ್ಗಳಾದ ಸಾಗರ ಪಾಟೀಲ, ಶ್ರೀಮಂತಗೌಡ ಪಾಟೀಲ, ಶಿಕ್ಷಕ ನಾಗರಾಜ ಮೂಲಗೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-19538834</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದ ಶಿಕ್ಷಾ ಬಂದಿ ದತ್ತಾತ್ರಿ ಸುಭಾಷ ಅವರ ಮಗನ ಶೈಕ್ಷಣಿಕೆ ವೆಚ್ಚವನ್ನು ಭರಿಸಲು ಕಲಬುರಗಿಯ ಡಿವೈನ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಚಾರಿಟಬಲ್ ಟ್ರಸ್ಟ್ ಮುಂದಾಗಿವೆ.</p>.<p>ಶಿಕ್ಷಾ ಬಂದಿ ದತ್ತಾತ್ರಿ ಆರ್ಥಿಕವಾಗಿ ದುರ್ಬಲರಾದ ಕಾರಣ ತನ್ನ ಮಗನ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ (ಪ್ಯಾರಾ ಮೆಡಿಕಲ್ ಕೋರ್ಸ್) ಕಾಲೇಜಿನ ವೆಚ್ಚವನ್ನು ಭರಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾರಾಗೃಹದ ಪ್ರಭಾರ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ ಅವರು ಡಿವೈನ್ ಸ್ಕೂಲ್ ಆಫ್ ನರ್ಸಿಂಗ್ ಸಂಸ್ಥಾಪಕ ಡಾ.ಕಿರಣ್ ಜಾರ್ಜ್ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಚಾರಿಟಬಲ್ ಟ್ರಸ್ಟ್ ಸಂಸ್ಥೆಯವರನ್ನು ಸಂಪರ್ಕಿಸಿ, ಶಿಕ್ಷಾ ಬಂದಿಯ ಮಗನ 3 ವರ್ಷದ ಶೈಕ್ಷಣಿಕ ವೆಚ್ಚವನ್ನು ಭರಿಸಲು ಕೋರಿದ್ದರು. ಅದರಂತೆ ಅವರು ಮೊದಲನೇ ವರ್ಷದ ವಿದ್ಯಾಭ್ಯಾಸದ ವೆಚ್ಚಕ್ಕಾಗಿ ಬುಧವಾರ ಚೆಕ್ ನೀಡಿದರು.</p>.<p>‘ಆರ್ಥಿಕವಾಗಿ ದುರ್ಬಲರಾದ ಶಿಕ್ಷಾ ಬಂದಿಯ ಮಗನ ವಿದ್ಯಾಭ್ಯಾಸಕ್ಕಾಗಿ ನೆರವು ನೀಡಿರುವುದು ಮಾನವೀಯ ಮಾದರಿ ಕಾರ್ಯ’ ಎಂದು ಪ್ರಭಾರ ಮುಖ್ಯ ಅಧೀಕ್ಷಕ ರಾಕೇಶ್ ಕಾಂಬಳೆ ಶ್ಲಾಘಿಸಿದರು.</p>.<p>ಫಾದರ್ ಮಿರಿಂಡಾ, ಫಾದರ್ ಮಾಕ್ಸಿಮ್, ಕಿರಣ, ಕಾರಾಗೃಹದ ಸಹಾಯಕ ಅಧೀಕ್ಷಕ ಬಿ.ಸುರೇಶ್, ಜೈಲರ್ಗಳಾದ ಸಾಗರ ಪಾಟೀಲ, ಶ್ರೀಮಂತಗೌಡ ಪಾಟೀಲ, ಶಿಕ್ಷಕ ನಾಗರಾಜ ಮೂಲಗೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-19538834</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>