<p>ಕಲಬುರಗಿ: ‘ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಛಲ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರಾ ಬಿ. ಹೇಳಿದರು.</p>.<p>ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯವು ಶನಿವಾರ ಹಮ್ಮಿಕೊಂಡಿದ್ದ ಕಲಾ ಅಕಾಡೆಮಿ ಸಮಾರೋಪ ಮತ್ತು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ, ಶಿಸ್ತು, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವ ಶಕ್ತಿಯಾಗಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಕಲಿಕೆಯ ಮನೋಭಾವ ಅಗತ್ಯವಿದೆ’ ಎಂದರು.</p>.<p>‘6ನೇ ತರಗತಿಯಲ್ಲಿರುವಾಗಲೇ ಕೊಕ್ಕೊ ಆಟದಲ್ಲಿ ನಿರಂತರ ಪಯತ್ನ ಪಟ್ಟು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳು ಲಭಿಸಿದವು. 2025ರಲ್ಲಿ ಕೊಕ್ಕೊ ವಿಶ್ವಕಪ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ’ ಎಂದು ತಿಳಿಸಿದರು.</p>.<p>ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ದಶರಥ ಮೇತ್ರೆ ಮಾತನಾಡಿ, ‘ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಗುರಿಯಿಂದ ವಿಚಲಿತರಾಗಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ರಾಮಕೃಷ್ಣ ರಡ್ಡಿ ಮಾತನಾಡಿ, ‘ಉನ್ನತ ಶಿಕ್ಷಣ, ಉದ್ಯೋಗ, ಉದ್ಯಮ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶಕುಮಾರ ನಂದಗಾಂವ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಾಧ್ಯಾಪಕ ಲಕ್ಷ್ಮಿಪುತ್ರ ಸ್ವಾಗತಿಸಿದರು. ಅನಿತಾ ಗೊಬ್ಬುರ್, ಹೆಬ್ಜಿಬಾ ನಿರೂಪಿಸಿದರು. ಆರತಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-34-644347101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಛಲ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರಾ ಬಿ. ಹೇಳಿದರು.</p>.<p>ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯವು ಶನಿವಾರ ಹಮ್ಮಿಕೊಂಡಿದ್ದ ಕಲಾ ಅಕಾಡೆಮಿ ಸಮಾರೋಪ ಮತ್ತು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ, ಶಿಸ್ತು, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವ ಶಕ್ತಿಯಾಗಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಕಲಿಕೆಯ ಮನೋಭಾವ ಅಗತ್ಯವಿದೆ’ ಎಂದರು.</p>.<p>‘6ನೇ ತರಗತಿಯಲ್ಲಿರುವಾಗಲೇ ಕೊಕ್ಕೊ ಆಟದಲ್ಲಿ ನಿರಂತರ ಪಯತ್ನ ಪಟ್ಟು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳು ಲಭಿಸಿದವು. 2025ರಲ್ಲಿ ಕೊಕ್ಕೊ ವಿಶ್ವಕಪ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ’ ಎಂದು ತಿಳಿಸಿದರು.</p>.<p>ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ದಶರಥ ಮೇತ್ರೆ ಮಾತನಾಡಿ, ‘ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಗುರಿಯಿಂದ ವಿಚಲಿತರಾಗಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ರಾಮಕೃಷ್ಣ ರಡ್ಡಿ ಮಾತನಾಡಿ, ‘ಉನ್ನತ ಶಿಕ್ಷಣ, ಉದ್ಯೋಗ, ಉದ್ಯಮ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶಕುಮಾರ ನಂದಗಾಂವ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಾಧ್ಯಾಪಕ ಲಕ್ಷ್ಮಿಪುತ್ರ ಸ್ವಾಗತಿಸಿದರು. ಅನಿತಾ ಗೊಬ್ಬುರ್, ಹೆಬ್ಜಿಬಾ ನಿರೂಪಿಸಿದರು. ಆರತಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-34-644347101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>