<p>ಕಲಬುರಗಿ: ‘ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು, ಪ್ರತಿದಿನ ದಿನಪತ್ರಿಕೆಗಳನ್ನು ಓದಬೇಕು’ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಸಂತೋಷ ಹುಂಪ್ಲಿ ಸಲಹೆ ನೀಡಿದರು.</p>.<p>ನಗರದ ಜೇವರ್ಗಿ ರಸ್ತೆಯಲ್ಲಿರುವ ಅಕ್ಕಮಹಾದೇವಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಹಯೋಗದಲ್ಲಿ ನಡೆದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ-ಪ್ರಜಾಪ್ರಭುತ್ವ ಉಳಿಸಿ’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>‘ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗುವುದರಿಂದ ವ್ಯಕ್ತಿತ್ವ ವಿಕಸನ, ಸಾಮಾಜಿಕ ಪ್ರಜ್ಞೆ ಮತ್ತು ನಾಯಕತ್ವದ ಗುಣ ಬೆಳೆಯುತ್ತದೆ’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಮೊರಗೆ ಪ್ರಕಾಶ ಮಾತನಾಡಿ, ‘ಈ ವಿಚಾರ ಸಂಕಿರಣ ಪ್ರಸ್ತುತ ಚುನಾವಣಾ ವ್ಯವಸ್ಥೆಯ ಕುರಿತು ಪ್ರತಿಯೊಬ್ಬರನ್ನೂ ಚಿಂತನೆಗೆ ಹಚ್ಚುವ ಕೆಲಸ ಮಾಡುತ್ತಿದೆ. ಇಂಥ ಕಾರ್ಯಕ್ರಮಗಳು ನಿರಂತರವಾಗಿ ನಡೆದಾಗ ಸಮಾಜದಲ್ಲಿ ಜಾಗೃತಿ ಉಂಟಾಗುತ್ತದೆ’ ಎಂದು ಹೇಳಿದರು.</p>.<p>ಸಿಬ್ಬಂದಿ ಘಟಕದ ಕಾರ್ಯದರ್ಶಿ ಎಸ್.ವಿ.ಬಿರಾದಾರ ಮಾತನಾಡಿದರು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಧುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿನಿಯರಾದ ಸುಜಾತಾ, ರಕ್ಷಿತಾ, ಐಶ್ವರ್ಯ, ಜಯಶ್ರೀ, ಸೃಷ್ಟಿ, ಅಂಕಿತಾ ವಿಚಾರ ಮಂಡಿಸಿದರು. ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.</p>.<p>ಮೀನಾಕ್ಷಿ, ಉಪನ್ಯಾಸಕರಾದ ಹನುಮಂತು, ಜಯಲಕ್ಷ್ಮಿ, ಹನುಮಂತು ಪಾಟೀಲ, ಜಯಶ್ರೀ, ಪೂಜಾ, ಬಸವರಾಜೇಶ್ವರಿ ಉಪಸ್ಥಿತರಿದ್ದರು.</p>.<p>ವಿದ್ಯಾರ್ಥಿನಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಐಶ್ವರ್ಯ ಪ್ರಾರ್ಥನೆ ಗೀತೆ ಹಾಡಿದರು. ಮಾಣಿಕೇಶ್ವರಿ ನಿರೂಪಿಸಿದರು. ಹಸೀನಾ ಬೇಗಂ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-34-1138179314</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು, ಪ್ರತಿದಿನ ದಿನಪತ್ರಿಕೆಗಳನ್ನು ಓದಬೇಕು’ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಸಂತೋಷ ಹುಂಪ್ಲಿ ಸಲಹೆ ನೀಡಿದರು.</p>.<p>ನಗರದ ಜೇವರ್ಗಿ ರಸ್ತೆಯಲ್ಲಿರುವ ಅಕ್ಕಮಹಾದೇವಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಹಯೋಗದಲ್ಲಿ ನಡೆದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ-ಪ್ರಜಾಪ್ರಭುತ್ವ ಉಳಿಸಿ’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>‘ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗುವುದರಿಂದ ವ್ಯಕ್ತಿತ್ವ ವಿಕಸನ, ಸಾಮಾಜಿಕ ಪ್ರಜ್ಞೆ ಮತ್ತು ನಾಯಕತ್ವದ ಗುಣ ಬೆಳೆಯುತ್ತದೆ’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಮೊರಗೆ ಪ್ರಕಾಶ ಮಾತನಾಡಿ, ‘ಈ ವಿಚಾರ ಸಂಕಿರಣ ಪ್ರಸ್ತುತ ಚುನಾವಣಾ ವ್ಯವಸ್ಥೆಯ ಕುರಿತು ಪ್ರತಿಯೊಬ್ಬರನ್ನೂ ಚಿಂತನೆಗೆ ಹಚ್ಚುವ ಕೆಲಸ ಮಾಡುತ್ತಿದೆ. ಇಂಥ ಕಾರ್ಯಕ್ರಮಗಳು ನಿರಂತರವಾಗಿ ನಡೆದಾಗ ಸಮಾಜದಲ್ಲಿ ಜಾಗೃತಿ ಉಂಟಾಗುತ್ತದೆ’ ಎಂದು ಹೇಳಿದರು.</p>.<p>ಸಿಬ್ಬಂದಿ ಘಟಕದ ಕಾರ್ಯದರ್ಶಿ ಎಸ್.ವಿ.ಬಿರಾದಾರ ಮಾತನಾಡಿದರು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಧುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿನಿಯರಾದ ಸುಜಾತಾ, ರಕ್ಷಿತಾ, ಐಶ್ವರ್ಯ, ಜಯಶ್ರೀ, ಸೃಷ್ಟಿ, ಅಂಕಿತಾ ವಿಚಾರ ಮಂಡಿಸಿದರು. ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.</p>.<p>ಮೀನಾಕ್ಷಿ, ಉಪನ್ಯಾಸಕರಾದ ಹನುಮಂತು, ಜಯಲಕ್ಷ್ಮಿ, ಹನುಮಂತು ಪಾಟೀಲ, ಜಯಶ್ರೀ, ಪೂಜಾ, ಬಸವರಾಜೇಶ್ವರಿ ಉಪಸ್ಥಿತರಿದ್ದರು.</p>.<p>ವಿದ್ಯಾರ್ಥಿನಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಐಶ್ವರ್ಯ ಪ್ರಾರ್ಥನೆ ಗೀತೆ ಹಾಡಿದರು. ಮಾಣಿಕೇಶ್ವರಿ ನಿರೂಪಿಸಿದರು. ಹಸೀನಾ ಬೇಗಂ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-34-1138179314</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>