<p>ಕಲಘಟಗಿ: ‘ಹದಿಹರೆಯದ ಮಕ್ಕಳಿಗೆ ಪಾಲಕರು ಹಾಗೂ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಶನಿವಾರ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರ’ ಕುರಿತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹದಿಹರೆಯದ ಮಕ್ಕಳು ಶಾರೀರಿಕ ಹಾಗೂ ಭಾವನಾತ್ಮಕ ಬದಲಾವಣೆಯಿಂದ ಆತಂಕ, ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಈ ಸಮಯದಲ್ಲಿ ದಾರಿ ತಪ್ಪುವ ಸಾಧ್ಯತೆ ಹೆಚ್ಚಾಗಿರುತ್ತದೆ. ದುಶ್ಚಟಗಳ ದಾಸರೂ ಆಗಬಹುದು’ ಎಂದರು.</p>.<p>ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಹದಿಹರೆಯದ ಮನೋರೋಗ ತಜ್ಞೆ ಸುಜ್ಞಾನಿದೇವಿ ಪಾಟೀಲ ಮಾತನಾಡಿ, ಸಂವಾದದ ಮೂಲಕ ಹದಿಹರೆಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎನ್.ಎಂ. ಸಂಗಮನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮಹೇಶ ಹೊರಕೇರಿ, ಕೆ.ಎಸ್. ಪಾಟೀಲ, ಮಂಜುನಾಥ ಕುರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-24-1161195765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಘಟಗಿ: ‘ಹದಿಹರೆಯದ ಮಕ್ಕಳಿಗೆ ಪಾಲಕರು ಹಾಗೂ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಶನಿವಾರ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರ’ ಕುರಿತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹದಿಹರೆಯದ ಮಕ್ಕಳು ಶಾರೀರಿಕ ಹಾಗೂ ಭಾವನಾತ್ಮಕ ಬದಲಾವಣೆಯಿಂದ ಆತಂಕ, ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಈ ಸಮಯದಲ್ಲಿ ದಾರಿ ತಪ್ಪುವ ಸಾಧ್ಯತೆ ಹೆಚ್ಚಾಗಿರುತ್ತದೆ. ದುಶ್ಚಟಗಳ ದಾಸರೂ ಆಗಬಹುದು’ ಎಂದರು.</p>.<p>ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಹದಿಹರೆಯದ ಮನೋರೋಗ ತಜ್ಞೆ ಸುಜ್ಞಾನಿದೇವಿ ಪಾಟೀಲ ಮಾತನಾಡಿ, ಸಂವಾದದ ಮೂಲಕ ಹದಿಹರೆಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎನ್.ಎಂ. ಸಂಗಮನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮಹೇಶ ಹೊರಕೇರಿ, ಕೆ.ಎಸ್. ಪಾಟೀಲ, ಮಂಜುನಾಥ ಕುರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-24-1161195765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>