<p>ಕಾಳಪ್ಪನಹಳ್ಳಿ (ಹೊಸಕೋಟೆ): ತಾಲ್ಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿಯಲ್ಲಿ ಷಡಕ್ಷರಿ ಶಾಸ್ತ್ರಿ ಕುಟುಂಬದಿಂದ ₹30 ಲಕ್ಷ ವೆಚ್ಚದಲ್ಲಿ ನೂತನ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಈಚೆಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಮಾತೃಕ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ, ಶಾಲಾ ಕಟ್ಟಡದ ದಾನಿ ಕೆ.ಆರ್. ಷಡಕ್ಷರಿ ಶಾಸ್ತ್ರಿ ಮಾತನಾಡಿ, ‘ನಮ್ಮ ತಂದೆ ರಾಚೂಟಪ್ಪಸ್ವಾಮಿ ಸ್ಮರಣಾರ್ಥ ಗ್ರಾಮಕ್ಕೆ ಶಾಲಾ ಕೊಠಡಿಯ ಅವಶ್ಯಕತೆ ಇರುವುದನ್ನು ಮನಗಂಡು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೆಂದು ಗ್ರಾಮದ ಷಡಕ್ಷರಿ ಶಾಸ್ತ್ರೀ ಅವರ ಕುಟುಂಬ ಲಕ್ಷಾಂತರ ಹಣ ಖರ್ಚು ಮಾಡಿ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ ಸಂಗತಿ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ದೇಶದ ಸಮಗ್ರ ಅಭಿವೃದ್ಧಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಈ ನಿಟ್ಟಿನಲ್ಲಿ ದಾನಿಗಳು ಖಾಸಗಿ ಶಾಲೆಗಿಂತ ಏನು ಕಡಿಮೆ ಇಲ್ಲ ಎನ್ನುವಂತೆ ಆಟ ಪಾಠಗಳಿಂದ ಕೂಡಿದ ಕಲಿಕೆಗೆ ಅನುವಾಗುವಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿರುವುದು ಮೆಚ್ಚುವ ಸಂಗತಿ. ಪ್ರತಿ ಗ್ರಾಮದಲ್ಲೂ ಈ ರೀತಿ ಇನ್ನಷ್ಟು ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಲು ಮುಂದಾಗಬೇಕಿದೆ ಎಂದು ಹೇಳಿದರು.</p>.<p>ಬಿ.ವಿ. ರಾಜಶೇಖರಗೌಡ, ರಾಜಶೇಖರ್, ಭೂ ಮಂಜೂರಾತಿ ಸಮಿತಿ ಸದಸ್ಯ ನಾರಾಯಣಸ್ವಾಮಿ, ಕೆ.ಆರ್. ಶಿವಣ್ಣ, ದೇವರಾಜ್, ಮಾಜಿ ಗ್ರಾ.ಪಂ. ಅಧ್ಯಕ್ಷರಾದ ಪ್ರಿಯಾಂಕ ರಮೇಶ್, ಮಂದೀಪ್ಗೌಡ, ಗುರುಬಸಪ್ಪ, ಮಂಜುನಾಥ್, ಈಶ್ವರಪ್ಪ, ನರಸಿಂಹಯ್ಯ, ಪಿಡಿಒ ಮುನಿಗಂಗಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-15-95043325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಪ್ಪನಹಳ್ಳಿ (ಹೊಸಕೋಟೆ): ತಾಲ್ಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿಯಲ್ಲಿ ಷಡಕ್ಷರಿ ಶಾಸ್ತ್ರಿ ಕುಟುಂಬದಿಂದ ₹30 ಲಕ್ಷ ವೆಚ್ಚದಲ್ಲಿ ನೂತನ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಈಚೆಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಮಾತೃಕ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ, ಶಾಲಾ ಕಟ್ಟಡದ ದಾನಿ ಕೆ.ಆರ್. ಷಡಕ್ಷರಿ ಶಾಸ್ತ್ರಿ ಮಾತನಾಡಿ, ‘ನಮ್ಮ ತಂದೆ ರಾಚೂಟಪ್ಪಸ್ವಾಮಿ ಸ್ಮರಣಾರ್ಥ ಗ್ರಾಮಕ್ಕೆ ಶಾಲಾ ಕೊಠಡಿಯ ಅವಶ್ಯಕತೆ ಇರುವುದನ್ನು ಮನಗಂಡು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೆಂದು ಗ್ರಾಮದ ಷಡಕ್ಷರಿ ಶಾಸ್ತ್ರೀ ಅವರ ಕುಟುಂಬ ಲಕ್ಷಾಂತರ ಹಣ ಖರ್ಚು ಮಾಡಿ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ ಸಂಗತಿ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ದೇಶದ ಸಮಗ್ರ ಅಭಿವೃದ್ಧಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಈ ನಿಟ್ಟಿನಲ್ಲಿ ದಾನಿಗಳು ಖಾಸಗಿ ಶಾಲೆಗಿಂತ ಏನು ಕಡಿಮೆ ಇಲ್ಲ ಎನ್ನುವಂತೆ ಆಟ ಪಾಠಗಳಿಂದ ಕೂಡಿದ ಕಲಿಕೆಗೆ ಅನುವಾಗುವಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿರುವುದು ಮೆಚ್ಚುವ ಸಂಗತಿ. ಪ್ರತಿ ಗ್ರಾಮದಲ್ಲೂ ಈ ರೀತಿ ಇನ್ನಷ್ಟು ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಲು ಮುಂದಾಗಬೇಕಿದೆ ಎಂದು ಹೇಳಿದರು.</p>.<p>ಬಿ.ವಿ. ರಾಜಶೇಖರಗೌಡ, ರಾಜಶೇಖರ್, ಭೂ ಮಂಜೂರಾತಿ ಸಮಿತಿ ಸದಸ್ಯ ನಾರಾಯಣಸ್ವಾಮಿ, ಕೆ.ಆರ್. ಶಿವಣ್ಣ, ದೇವರಾಜ್, ಮಾಜಿ ಗ್ರಾ.ಪಂ. ಅಧ್ಯಕ್ಷರಾದ ಪ್ರಿಯಾಂಕ ರಮೇಶ್, ಮಂದೀಪ್ಗೌಡ, ಗುರುಬಸಪ್ಪ, ಮಂಜುನಾಥ್, ಈಶ್ವರಪ್ಪ, ನರಸಿಂಹಯ್ಯ, ಪಿಡಿಒ ಮುನಿಗಂಗಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-15-95043325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>