<p>ಹೊಸಪೇಟೆ (ವಿಜಯನಗರ): ಕಲ್ಯಾಣ ಕರ್ನಾಟಕ ಪ್ರದೇಶ ಬಹಳಷ್ಟು ಹಿಂದುಳಿಯಲು ಈ ಭಾಗದ ರಾಜಕಾರಣಿಗಳು, ಅಧಿಕಾರಿಗಳು ಕಾರಣ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದ್ದು, ಯುವ ಎಂಜಿನಿಯರ್ಗಳು ಈ ಭಾಗದ ಪ್ರಗತಿಗೆ ಹೆಗಲು ನೀಡಬೇಕಾದ ಅಗತ್ಯ ಇದೆ ಎಂದು ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.</p>.<p>ಇಲ್ಲಿನ ಪ್ರೌಢದೇವರಾಯ ಎಂಜಿನಿಯರಿಂಗ್ ಕಾಲೇಜ್ನಲ್ಲಿ (ಪಿಡಿಐಟಿ) ಬುಧವಾರ ಹಮ್ಮಿಕೊಂಡ ‘ಸಿಂಚನ-2026’ ಪದವಿ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಿ ಅವರು ಮಾತನಾಡಿದರು.</p>.<p>‘ಯುವ ಪದವೀಧರರು ಈ ಭಾಗದಲ್ಲಿ ಸಣ್ಣ ಹಾಗೂ ಮಧ್ಯಮ ವರ್ಗದ ಕೈಗಾರಿಕೆಗಳನ್ನು ಮತ್ತು ಸ್ಟಾರ್ಟ್-ಅಪ್ಗಳನ್ನು ಆರಂಭಿಸಬೇಕು. ಇಲ್ಲಿ ಯಾವುದೇ ಸೌಕರ್ಯಗಳು ದೊರೆಯುವುದಿಲ್ಲ ಎಂದು ಕೈಚಾಚಿ ಕುಳಿತರೆ ಇನ್ನು ಹಲವು ವರ್ಷಗಳು ಕಳೆದರೂ ನಾವು ಹೀಗೆಯೇ ಹಿಂದುಳಿದೇ ಇರಬೇಕಾಗುತ್ತದೆ’ ಎಂದು ಅವರು ಕಿವಿಮಾತು ಹೇಳಿದರು.</p>.<p>‘ತಂತ್ರಜ್ಞಾನ ಮತ್ತು ವ್ಯಾಪಾರವು ದೇಶದ ಅಭಿವೃದ್ಧಿಯ ಎರಡು ಕಣ್ಣುಗಳಿದ್ದಂತೆ. ಇವೆರಡರಲ್ಲಿ ಯಾವುದೇ ಒಂದು ಪತನ ಹೊಂದಿದರೂ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪಿಡಿಐಟಿ ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಗುಡಿ ಮಂಜುನಾಥ್ ಮಾತನಾಡಿ, ಪದವಿ ಎನ್ನುವುದು ಕಲಿಕೆಯ ಅಂತ್ಯವಲ್ಲ, ಅದು ಜೀವನದ ಹೊಸ ಆರಂಭ. ವಿದ್ಯಾರ್ಥಿಗಳು ಜೀವನದಲ್ಲಿ ಪ್ರಾಮಾಣಿಕತೆ, ಆತ್ಮವಿಶ್ವಾಸ ಮತ್ತು ಪೋಷಕರಿಗೆ ಗೌರವ ಕೊಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಎನ್ಸಿಸಿ ಕೆಡೆಟ್ಗಳ ಸಮ್ಮುಖದಲ್ಲಿ ಪದವಿ ವಿದ್ಯಾರ್ಥಿಗಳ ಆಕರ್ಷಕ ಮೆರವಣಿಗೆ ನಡೆಯಿತು. ಕಾಲೇಜಿನ 400ಕ್ಕೂ ಹೆಚ್ಚು ಬಿ.ಇ. ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.</p>.<p>ಪ್ರಾಂಶುಪಾಲ ಪ್ರೊ.ರೋಹಿತ್ ಯು.ಎಂ., ಪ್ರತಿಜ್ಞಾ ವಿಧಿ ಬೋಧಿಸಿದರು. ಪದವಿ ದಿನಾಚರಣೆಯ ಸಂಯೋಜಕರಾದ ಪ್ರೊ. ಮಂಜುಳಾ ಎಸ್. ಡಿ., ಆಡಳಿತ ಮಂಡಳಿಯ ಸದಸ್ಯರಾದ ಐ.ಎನ್. ಸಂಗನಬಸಪ್ಪ, ಅನಿಲ್ ಆರ್. ಜವಳಿ, ಬಿ.ಚಂದ್ರಮೌಳಿ, ಉಪಪ್ರಾಂಶುಪಾಲರಾದ ಪ್ರೊ.ಪಾರ್ವತಿ ಕಡ್ಲಿ, ‘ಸಿಂಚನ-2026’ ಕಾರ್ಯಕ್ರಮದ ಸಂಯೋಜಕ ಪ್ರೊ. ರವಿಕುಮಾರ್ ಎಸ್. ಪಿ., ಇದ್ದರು.</p>.<p>ಸಂಜೆ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-1846897218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಕಲ್ಯಾಣ ಕರ್ನಾಟಕ ಪ್ರದೇಶ ಬಹಳಷ್ಟು ಹಿಂದುಳಿಯಲು ಈ ಭಾಗದ ರಾಜಕಾರಣಿಗಳು, ಅಧಿಕಾರಿಗಳು ಕಾರಣ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದ್ದು, ಯುವ ಎಂಜಿನಿಯರ್ಗಳು ಈ ಭಾಗದ ಪ್ರಗತಿಗೆ ಹೆಗಲು ನೀಡಬೇಕಾದ ಅಗತ್ಯ ಇದೆ ಎಂದು ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.</p>.<p>ಇಲ್ಲಿನ ಪ್ರೌಢದೇವರಾಯ ಎಂಜಿನಿಯರಿಂಗ್ ಕಾಲೇಜ್ನಲ್ಲಿ (ಪಿಡಿಐಟಿ) ಬುಧವಾರ ಹಮ್ಮಿಕೊಂಡ ‘ಸಿಂಚನ-2026’ ಪದವಿ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಿ ಅವರು ಮಾತನಾಡಿದರು.</p>.<p>‘ಯುವ ಪದವೀಧರರು ಈ ಭಾಗದಲ್ಲಿ ಸಣ್ಣ ಹಾಗೂ ಮಧ್ಯಮ ವರ್ಗದ ಕೈಗಾರಿಕೆಗಳನ್ನು ಮತ್ತು ಸ್ಟಾರ್ಟ್-ಅಪ್ಗಳನ್ನು ಆರಂಭಿಸಬೇಕು. ಇಲ್ಲಿ ಯಾವುದೇ ಸೌಕರ್ಯಗಳು ದೊರೆಯುವುದಿಲ್ಲ ಎಂದು ಕೈಚಾಚಿ ಕುಳಿತರೆ ಇನ್ನು ಹಲವು ವರ್ಷಗಳು ಕಳೆದರೂ ನಾವು ಹೀಗೆಯೇ ಹಿಂದುಳಿದೇ ಇರಬೇಕಾಗುತ್ತದೆ’ ಎಂದು ಅವರು ಕಿವಿಮಾತು ಹೇಳಿದರು.</p>.<p>‘ತಂತ್ರಜ್ಞಾನ ಮತ್ತು ವ್ಯಾಪಾರವು ದೇಶದ ಅಭಿವೃದ್ಧಿಯ ಎರಡು ಕಣ್ಣುಗಳಿದ್ದಂತೆ. ಇವೆರಡರಲ್ಲಿ ಯಾವುದೇ ಒಂದು ಪತನ ಹೊಂದಿದರೂ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪಿಡಿಐಟಿ ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಗುಡಿ ಮಂಜುನಾಥ್ ಮಾತನಾಡಿ, ಪದವಿ ಎನ್ನುವುದು ಕಲಿಕೆಯ ಅಂತ್ಯವಲ್ಲ, ಅದು ಜೀವನದ ಹೊಸ ಆರಂಭ. ವಿದ್ಯಾರ್ಥಿಗಳು ಜೀವನದಲ್ಲಿ ಪ್ರಾಮಾಣಿಕತೆ, ಆತ್ಮವಿಶ್ವಾಸ ಮತ್ತು ಪೋಷಕರಿಗೆ ಗೌರವ ಕೊಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಎನ್ಸಿಸಿ ಕೆಡೆಟ್ಗಳ ಸಮ್ಮುಖದಲ್ಲಿ ಪದವಿ ವಿದ್ಯಾರ್ಥಿಗಳ ಆಕರ್ಷಕ ಮೆರವಣಿಗೆ ನಡೆಯಿತು. ಕಾಲೇಜಿನ 400ಕ್ಕೂ ಹೆಚ್ಚು ಬಿ.ಇ. ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.</p>.<p>ಪ್ರಾಂಶುಪಾಲ ಪ್ರೊ.ರೋಹಿತ್ ಯು.ಎಂ., ಪ್ರತಿಜ್ಞಾ ವಿಧಿ ಬೋಧಿಸಿದರು. ಪದವಿ ದಿನಾಚರಣೆಯ ಸಂಯೋಜಕರಾದ ಪ್ರೊ. ಮಂಜುಳಾ ಎಸ್. ಡಿ., ಆಡಳಿತ ಮಂಡಳಿಯ ಸದಸ್ಯರಾದ ಐ.ಎನ್. ಸಂಗನಬಸಪ್ಪ, ಅನಿಲ್ ಆರ್. ಜವಳಿ, ಬಿ.ಚಂದ್ರಮೌಳಿ, ಉಪಪ್ರಾಂಶುಪಾಲರಾದ ಪ್ರೊ.ಪಾರ್ವತಿ ಕಡ್ಲಿ, ‘ಸಿಂಚನ-2026’ ಕಾರ್ಯಕ್ರಮದ ಸಂಯೋಜಕ ಪ್ರೊ. ರವಿಕುಮಾರ್ ಎಸ್. ಪಿ., ಇದ್ದರು.</p>.<p>ಸಂಜೆ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-1846897218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>