<p>ಕಮಲನಗರ: ‘ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಬೆಳೆಸಿಕೊಂಡು ಆತ್ಮಸ್ಥೈರ್ಯ, ಆತ್ಮಬಲದೊಂದಿಗೆ ಏಕಾಗ್ರತೆ ಅಳವಡಿಸಿಕೊಂಡು ಸಾಗಿದರೆ ಸಾಧನೆ ಖಚಿತ’ ಎಂದು ಪ್ರಾಚಾರ್ಯ ಶಿವಾಜಿ ಆರ್.ಎಚ್ ಹೇಳಿದರು.</p>.<p>ಪಟ್ಟಣದ ಶಾಂತಿವರ್ಧಕ ಪಿಯು ಕಾಲೇಜಿನಲ್ಲಿ ಸೋಮವಾರ ಕಾಲೇಜು ಪ್ರಾರಂಭೋತ್ಸವ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ಪಾಲಕ ಪ್ರತಿನಿಧಿ ಬಾಬುರಾವ ಪಾಟೀಲ ಹೊರಂಡಿ ಮಾತನಾಡಿ, ಇಂದಿನ ಯುವ ಜನ ಪುಸ್ತಕಕ್ಕೆ ಸೀಮಿತವಾಗದೆ, ಸಮಾಜದಲ್ಲಿನ ಓರೆಕೋರೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಮಾಜದಲ್ಲಿ ಬರುವ ನಕರಾತ್ಮಕ ಯೋಚನೆಗಳಿಗೆ ಆದ್ಯತೆ ನೀಡದೆ ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದರು.</p>.<p>ವಿಶ್ವನಾಥ ಕಿವಡೆ, ಓಂಕಾರ ಸೂರ್ಯವಂಶಿ, ಶಿವಶಂಕರ, ಶ್ರೀಕಾಂತ ಪ್ಯಾಗೆ, ಸುಭಾಷ ರಾಠೋಡ್, ಶರಣಗೌಡ ಪಾಟೀಲ, ಕಾದಂಬಿನಿ, ಬಸವಾಂಬಿಕಾ, ವೆಂಕಟ ಮೋರೆ, ಶಿವಶಂಕರ ಕಾಂಬಳೆ, ಚಂದ್ರಕಾಂತ ಭೈರೆ, ವಿಜಯಲಕ್ಷ್ಮೀ, ಯಲ್ಲಾಲಿಂಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p>ಅತಿಯಾ ಪ್ರಾರ್ಥನೆ ಗೀತೆ ಹಾಡಿದರು. ಓ.ಕೆ.ಸೂರ್ಯವಂಶಿ ಸ್ವಾಗತಿಸಿದರು. ಸುನೀಲ ಬಾರೋಳೆ ನಿರೂಪಿಸಿದರು. ಕಾಳಿದಾಸ ಬೌದ್ಧೆ ವಂದಿಸಿದರು. ವಿದ್ಯಾರ್ಥಿಗಳಿಗೆಲ್ಲರಿಗೂ 2026-27ನೇ ಶೈಕ್ಷಣಿಕ ಸಾಲಿನ ಮೊದಲ ದಿನದಂದು ಗುಲಾಬಿ ಹೂ, ಪೆನ್ ನೀಡಿ ಸಿಹಿ ತಿನ್ನಿಸಿ ತರಗತಿಗೆ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1985348758</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ‘ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಬೆಳೆಸಿಕೊಂಡು ಆತ್ಮಸ್ಥೈರ್ಯ, ಆತ್ಮಬಲದೊಂದಿಗೆ ಏಕಾಗ್ರತೆ ಅಳವಡಿಸಿಕೊಂಡು ಸಾಗಿದರೆ ಸಾಧನೆ ಖಚಿತ’ ಎಂದು ಪ್ರಾಚಾರ್ಯ ಶಿವಾಜಿ ಆರ್.ಎಚ್ ಹೇಳಿದರು.</p>.<p>ಪಟ್ಟಣದ ಶಾಂತಿವರ್ಧಕ ಪಿಯು ಕಾಲೇಜಿನಲ್ಲಿ ಸೋಮವಾರ ಕಾಲೇಜು ಪ್ರಾರಂಭೋತ್ಸವ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ಪಾಲಕ ಪ್ರತಿನಿಧಿ ಬಾಬುರಾವ ಪಾಟೀಲ ಹೊರಂಡಿ ಮಾತನಾಡಿ, ಇಂದಿನ ಯುವ ಜನ ಪುಸ್ತಕಕ್ಕೆ ಸೀಮಿತವಾಗದೆ, ಸಮಾಜದಲ್ಲಿನ ಓರೆಕೋರೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಮಾಜದಲ್ಲಿ ಬರುವ ನಕರಾತ್ಮಕ ಯೋಚನೆಗಳಿಗೆ ಆದ್ಯತೆ ನೀಡದೆ ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದರು.</p>.<p>ವಿಶ್ವನಾಥ ಕಿವಡೆ, ಓಂಕಾರ ಸೂರ್ಯವಂಶಿ, ಶಿವಶಂಕರ, ಶ್ರೀಕಾಂತ ಪ್ಯಾಗೆ, ಸುಭಾಷ ರಾಠೋಡ್, ಶರಣಗೌಡ ಪಾಟೀಲ, ಕಾದಂಬಿನಿ, ಬಸವಾಂಬಿಕಾ, ವೆಂಕಟ ಮೋರೆ, ಶಿವಶಂಕರ ಕಾಂಬಳೆ, ಚಂದ್ರಕಾಂತ ಭೈರೆ, ವಿಜಯಲಕ್ಷ್ಮೀ, ಯಲ್ಲಾಲಿಂಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p>ಅತಿಯಾ ಪ್ರಾರ್ಥನೆ ಗೀತೆ ಹಾಡಿದರು. ಓ.ಕೆ.ಸೂರ್ಯವಂಶಿ ಸ್ವಾಗತಿಸಿದರು. ಸುನೀಲ ಬಾರೋಳೆ ನಿರೂಪಿಸಿದರು. ಕಾಳಿದಾಸ ಬೌದ್ಧೆ ವಂದಿಸಿದರು. ವಿದ್ಯಾರ್ಥಿಗಳಿಗೆಲ್ಲರಿಗೂ 2026-27ನೇ ಶೈಕ್ಷಣಿಕ ಸಾಲಿನ ಮೊದಲ ದಿನದಂದು ಗುಲಾಬಿ ಹೂ, ಪೆನ್ ನೀಡಿ ಸಿಹಿ ತಿನ್ನಿಸಿ ತರಗತಿಗೆ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1985348758</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>