<p>ಕನಕಗಿರಿ: ಅಪೂರ್ಣ ದಾಖಲೆಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕ ಹುದ್ದೆ ಪಡೆದುಕೊಂಡ ವ್ಯಕ್ತಿಯ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಕಟ ಪೂರ್ವ ಅತಿಥಿ ಉಪನ್ಯಾಸಕರು ಕಾಲೇಜಿನ ಎಸ್ಒಪಿ ಪ್ರಾಧ್ಯಾಪಕರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರ್ಹತೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಕಾಲೇಜಿನ ಎಸ್ಒಪಿ ಸಮಿತಿಗೆ ಸರ್ಕಾರ ಅಧಿಕಾರ ವಹಿಸಿದೆ. ಅತಿಥಿ ಉಪನ್ಯಾಸಕರೊಬ್ಬರು ಅಪೂರ್ಣ ಪ್ರಮಾಣದ ದಾಖಲೆಗಳನ್ನು ಸಲ್ಲಿಸಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.</p>.<p>ಉಪನ್ಯಾಸಕನ ಅರ್ಹತೆಯ ಪ್ರಮಾಣ ಪತ್ರಗಳನ್ನು ಮಾಹಿತಿ ಹಕ್ಕಿನಲ್ಲಿ ಪಡೆದುಕೊಂಡಿದ್ದು, ಒಂದು ವರ್ಷದ ಸೇವಾನುಭವದ ಕೊರತೆ ಇದೆ. ಸಿಂಧನೂರು ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಥಮ ದರ್ಜೆ ಸಹಾಯಕರು ಸೇರಿ ದಾಖಲೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ನೇಮಕಗೊಂಡ ಉಪನ್ಯಾಸಕನ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ನಿಕಟಪೂರ್ವ ಅತಿಥಿ ಉಪನ್ಯಾಸಕರಾದ ಬಾಳಪ್ಪ ಸುಳೇಕಲ್, ಗೋಪಾಲರೆಡ್ಡಿ, ಎಸ್ಒಪಿ ಸಮಿತಿಯ ಸಹಾಯಕ ಪ್ರಾಧ್ಯಾಪಕ ರಕ್ಷಿತ್ ಎ, ವೀರೇಶ್ ಕೆಂಗಲ್, ಸರ್ವಮಂಗಳಮ್ಮ ಟಿ.ಆರ್, ಸಂಗಮೇಶ, ನಿಕಟಪೂರ್ವ ಅತಿಥಿ ಉಪನ್ಯಾಸಕ ಮಾರುತೇಶ, ಪ್ರಮುಖರಾದ ಕನಕಪ್ಪ ವಜ್ರಬಂಡಿ, ಕಿರಣಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-2014955759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಅಪೂರ್ಣ ದಾಖಲೆಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕ ಹುದ್ದೆ ಪಡೆದುಕೊಂಡ ವ್ಯಕ್ತಿಯ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಕಟ ಪೂರ್ವ ಅತಿಥಿ ಉಪನ್ಯಾಸಕರು ಕಾಲೇಜಿನ ಎಸ್ಒಪಿ ಪ್ರಾಧ್ಯಾಪಕರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರ್ಹತೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಕಾಲೇಜಿನ ಎಸ್ಒಪಿ ಸಮಿತಿಗೆ ಸರ್ಕಾರ ಅಧಿಕಾರ ವಹಿಸಿದೆ. ಅತಿಥಿ ಉಪನ್ಯಾಸಕರೊಬ್ಬರು ಅಪೂರ್ಣ ಪ್ರಮಾಣದ ದಾಖಲೆಗಳನ್ನು ಸಲ್ಲಿಸಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.</p>.<p>ಉಪನ್ಯಾಸಕನ ಅರ್ಹತೆಯ ಪ್ರಮಾಣ ಪತ್ರಗಳನ್ನು ಮಾಹಿತಿ ಹಕ್ಕಿನಲ್ಲಿ ಪಡೆದುಕೊಂಡಿದ್ದು, ಒಂದು ವರ್ಷದ ಸೇವಾನುಭವದ ಕೊರತೆ ಇದೆ. ಸಿಂಧನೂರು ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಥಮ ದರ್ಜೆ ಸಹಾಯಕರು ಸೇರಿ ದಾಖಲೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ನೇಮಕಗೊಂಡ ಉಪನ್ಯಾಸಕನ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ನಿಕಟಪೂರ್ವ ಅತಿಥಿ ಉಪನ್ಯಾಸಕರಾದ ಬಾಳಪ್ಪ ಸುಳೇಕಲ್, ಗೋಪಾಲರೆಡ್ಡಿ, ಎಸ್ಒಪಿ ಸಮಿತಿಯ ಸಹಾಯಕ ಪ್ರಾಧ್ಯಾಪಕ ರಕ್ಷಿತ್ ಎ, ವೀರೇಶ್ ಕೆಂಗಲ್, ಸರ್ವಮಂಗಳಮ್ಮ ಟಿ.ಆರ್, ಸಂಗಮೇಶ, ನಿಕಟಪೂರ್ವ ಅತಿಥಿ ಉಪನ್ಯಾಸಕ ಮಾರುತೇಶ, ಪ್ರಮುಖರಾದ ಕನಕಪ್ಪ ವಜ್ರಬಂಡಿ, ಕಿರಣಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-2014955759</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>