<p>ಕನಕಪುರ: ನಗರದ ಆರ್ಇಎಸ್ ಗ್ರಾಮೀಣ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಕಲಾಸಂಗಮ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮವನ್ನು ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸಿದರು.</p>.<p>ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಜಿ.ಎಸ್.ಶಿವರುದ್ರಪ್ಪ ಅವರು ಶಿಕ್ಷಕರಾಗಿದ್ದ ಸಂಸ್ಥೆ ಇದಾಗಿದ್ದು, 42 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಸಂಸ್ಥೆ ಇಂದು ದೊಡ್ಡ ಆಲದ ಮರದಂತೆ ಬೃಹದಾಕಾರವಾಗಿ ಬೆಳೆದಿದೆ ಎಂದರು.</p>.<p>ವಿದ್ಯಾರ್ಥಿಗಳು ಕಲಾಭಿಮಾನದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಾತನಾಡಿ, ವಿದ್ಯಾರ್ಥಿಗಳು ಹಲವು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಗಾಂಜಾ, ಕುಡಿತ, ಡ್ರಗ್ಸ್ಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಎಚ್.ಕೆ. ಶ್ರೀಕಂಠ ಮಾತನಾಡಿ, ಕಲಾಸಂಗಮ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಜಾನಪದ, ಸಂಗೀತ, ಸಿನಿಮಾ ಕ್ಷೇತ್ರಗಳಿಂದ ಸಾಧಕರನ್ನ ಕರೆತರಲಾಗಿದೆ ಎಂದರು.</p>.<p>ಹಾಸ್ಯ ಕಲಾವಿದ ಅಪ್ಪಣ್ಣ ರಾಮದುರ್ಗ ಹಾಸ್ಯಗಳಿಂದ ವಿದ್ಯಾರ್ಥಿಗಳನ್ನು ರಂಜಿಸಿದರು.</p>.<p>ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಎನ್ಎಸ್ಎಸ್, ಎನ್ಸಿಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಎಂ.ಎಸ್.ಕೆಂಪೇಗೌಡ, ಅಪ್ಪಾಜಿ, ಸಂಚಾಲಕಿ ಸುಮಲತಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-116380543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ನಗರದ ಆರ್ಇಎಸ್ ಗ್ರಾಮೀಣ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಕಲಾಸಂಗಮ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮವನ್ನು ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸಿದರು.</p>.<p>ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಜಿ.ಎಸ್.ಶಿವರುದ್ರಪ್ಪ ಅವರು ಶಿಕ್ಷಕರಾಗಿದ್ದ ಸಂಸ್ಥೆ ಇದಾಗಿದ್ದು, 42 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಸಂಸ್ಥೆ ಇಂದು ದೊಡ್ಡ ಆಲದ ಮರದಂತೆ ಬೃಹದಾಕಾರವಾಗಿ ಬೆಳೆದಿದೆ ಎಂದರು.</p>.<p>ವಿದ್ಯಾರ್ಥಿಗಳು ಕಲಾಭಿಮಾನದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಾತನಾಡಿ, ವಿದ್ಯಾರ್ಥಿಗಳು ಹಲವು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಗಾಂಜಾ, ಕುಡಿತ, ಡ್ರಗ್ಸ್ಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಎಚ್.ಕೆ. ಶ್ರೀಕಂಠ ಮಾತನಾಡಿ, ಕಲಾಸಂಗಮ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಜಾನಪದ, ಸಂಗೀತ, ಸಿನಿಮಾ ಕ್ಷೇತ್ರಗಳಿಂದ ಸಾಧಕರನ್ನ ಕರೆತರಲಾಗಿದೆ ಎಂದರು.</p>.<p>ಹಾಸ್ಯ ಕಲಾವಿದ ಅಪ್ಪಣ್ಣ ರಾಮದುರ್ಗ ಹಾಸ್ಯಗಳಿಂದ ವಿದ್ಯಾರ್ಥಿಗಳನ್ನು ರಂಜಿಸಿದರು.</p>.<p>ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಎನ್ಎಸ್ಎಸ್, ಎನ್ಸಿಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಎಂ.ಎಸ್.ಕೆಂಪೇಗೌಡ, ಅಪ್ಪಾಜಿ, ಸಂಚಾಲಕಿ ಸುಮಲತಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-116380543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>