<p>ಚನ್ನಗಿರಿ: ‘ಕನ್ನಡ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಸಂವರ್ಧನೆಗೆ ಶತಮಾನಗಳಿಂದಲೂ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸೇವೆ ಶ್ಲಾಘನೀಯವಾದುದು’ ಎಂದು ಸಂಸ್ಕೃತಿ ಚಿಂತಕ ಎಂ.ಯು.ಚನ್ನಬಸಪ್ಪ ತಿಳಿಸಿದರು.</p>.<p>ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗುವ ಸಾಹಿತ್ಯ ಸಮ್ಮೇಳನ, ದತ್ತಿ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರ ಸಂಕಿರಣ, ಪ್ರಗತಿಪರ, ದಲಿತಪರ, ಕೃಷಿಪರ ಹಾಗೂ ಮಹಿಳಾ ಚಿಂತನಾ ಗೋಷ್ಠಿಗಳು ಸರ್ವಕಾಲಕ್ಕೂ ಮಹತ್ವಪೂರ್ಣ ಆಗಿವೆ ಎಂದರು.</p>.<p>‘ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಕನ್ನಡ ಸಾರಸ್ವತ ಲೋಕದ ನಾಡಗುಡಿ ಎಂದೇ ಜನಮನ್ನಣೆ ಪಡೆದಿದೆ. ನುಡಿ, ಗಡಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಹಾಗೂ ಪ್ರಭುತ್ವವನ್ನು ಸತತವಾಗಿ ಎಚ್ಚರದಲ್ಲಿಡುವ ಕಾಯಕವನ್ನು ಮಾಡುತ್ತಿದೆ’ ಎಂದು ಎಲ್.ಜಿ. ಮಧುಕುಮಾರ್ ತಿಳಿಸಿದರು.</p>.<p>ನಿವೃತ್ತ ನೌಕರರ ಸಂಘದ ಅಧ್ಯಕ್ಷ ಜಿ.ಎಂ. ಉಜ್ಜನಪ್ಪ, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ. ಚಿನ್ನಸ್ವಾಮಿ, ಬಿ.ಈ.ಸಿದ್ದಪ್ಪ, ಮಾದೇನಹಳ್ಳಿ ಓಂಕಾರಮೂರ್ತಿ, ಮಲ್ಲಿಕಾರ್ಜುನ್, ಮಣ್ಣಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಇಸ್ಮಾಯಿಲ್, ರುದ್ರಪ್ಪ, ರವಿಪ್ರಕಾಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-43-1824024855</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ‘ಕನ್ನಡ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಸಂವರ್ಧನೆಗೆ ಶತಮಾನಗಳಿಂದಲೂ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸೇವೆ ಶ್ಲಾಘನೀಯವಾದುದು’ ಎಂದು ಸಂಸ್ಕೃತಿ ಚಿಂತಕ ಎಂ.ಯು.ಚನ್ನಬಸಪ್ಪ ತಿಳಿಸಿದರು.</p>.<p>ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗುವ ಸಾಹಿತ್ಯ ಸಮ್ಮೇಳನ, ದತ್ತಿ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರ ಸಂಕಿರಣ, ಪ್ರಗತಿಪರ, ದಲಿತಪರ, ಕೃಷಿಪರ ಹಾಗೂ ಮಹಿಳಾ ಚಿಂತನಾ ಗೋಷ್ಠಿಗಳು ಸರ್ವಕಾಲಕ್ಕೂ ಮಹತ್ವಪೂರ್ಣ ಆಗಿವೆ ಎಂದರು.</p>.<p>‘ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಕನ್ನಡ ಸಾರಸ್ವತ ಲೋಕದ ನಾಡಗುಡಿ ಎಂದೇ ಜನಮನ್ನಣೆ ಪಡೆದಿದೆ. ನುಡಿ, ಗಡಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಹಾಗೂ ಪ್ರಭುತ್ವವನ್ನು ಸತತವಾಗಿ ಎಚ್ಚರದಲ್ಲಿಡುವ ಕಾಯಕವನ್ನು ಮಾಡುತ್ತಿದೆ’ ಎಂದು ಎಲ್.ಜಿ. ಮಧುಕುಮಾರ್ ತಿಳಿಸಿದರು.</p>.<p>ನಿವೃತ್ತ ನೌಕರರ ಸಂಘದ ಅಧ್ಯಕ್ಷ ಜಿ.ಎಂ. ಉಜ್ಜನಪ್ಪ, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ. ಚಿನ್ನಸ್ವಾಮಿ, ಬಿ.ಈ.ಸಿದ್ದಪ್ಪ, ಮಾದೇನಹಳ್ಳಿ ಓಂಕಾರಮೂರ್ತಿ, ಮಲ್ಲಿಕಾರ್ಜುನ್, ಮಣ್ಣಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಇಸ್ಮಾಯಿಲ್, ರುದ್ರಪ್ಪ, ರವಿಪ್ರಕಾಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-43-1824024855</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>