<p>ಕಾರಟಗಿ: ‘ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಜೊತೆಗೆ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣ ನೀಡಲಾಗುತ್ತಿದೆ. ಎಸ್ಡಿಎಂಸಿ ಸದಸ್ಯರು, ಪಾಲಕರು ಅಧಿಕ ಸಂಖ್ಯೆಯ ದಾಖಲೆಗೆ ಸಹಕಾರ ನೀಡಬೇಕು’ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪುರ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಿ ಮಾತನಾಡಿದರು.</p>.<p>ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮುಖ್ಯಗುರು ಅನುಸೂಯ ಕಂಚಿಮಠ ಮಾತನಾಡಿ, ‘5 ವರ್ಷ 8 ತಿಂಗಳ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿರಿ. ನಮ್ಮಲ್ಲಿ ವೈಯಕ್ತಿಕ ಕಾಳಜಿ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುವುದು. ಪಾಲಕರು ವಿಶೇಷವಾಗಿ ಬಾಲಕಿಯರಿಗಾಗಿ ಇರುವ ನಮ್ಮ ಶಾಲೆಗೆ ದಾಖಲಾತಿ ಮಾಡಬೇಕು’ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ‘ಸರ್ಕಾರದ ಸೌಲಭ್ಯಗಳಲ್ಲದೇ, ನಮ್ಮಲ್ಲಿಯ ಗುಣಮಟ್ಟದ ಶಿಕ್ಷಣವನ್ನು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.</p>.<p>ಆರಂಭದಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಹೂಗುಚ್ಛ ನೀಡಿ, ಶಾಲಾ ಪ್ರಾರಂಭೋತ್ಸವಕ್ಕೆ ಸ್ವಾಗತಿಸಿಕೊಳ್ಳಲಾಯಿತು.</p>.<p>ಪಾಲಕರಾದ ಕವಿತಾ, ಶಿಕ್ಷಕ ರಾಮಣ್ಣ ಹಳ್ಳಿಕೇರಿ, ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-35-1304082873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ‘ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಜೊತೆಗೆ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣ ನೀಡಲಾಗುತ್ತಿದೆ. ಎಸ್ಡಿಎಂಸಿ ಸದಸ್ಯರು, ಪಾಲಕರು ಅಧಿಕ ಸಂಖ್ಯೆಯ ದಾಖಲೆಗೆ ಸಹಕಾರ ನೀಡಬೇಕು’ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪುರ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಿ ಮಾತನಾಡಿದರು.</p>.<p>ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮುಖ್ಯಗುರು ಅನುಸೂಯ ಕಂಚಿಮಠ ಮಾತನಾಡಿ, ‘5 ವರ್ಷ 8 ತಿಂಗಳ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿರಿ. ನಮ್ಮಲ್ಲಿ ವೈಯಕ್ತಿಕ ಕಾಳಜಿ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುವುದು. ಪಾಲಕರು ವಿಶೇಷವಾಗಿ ಬಾಲಕಿಯರಿಗಾಗಿ ಇರುವ ನಮ್ಮ ಶಾಲೆಗೆ ದಾಖಲಾತಿ ಮಾಡಬೇಕು’ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ‘ಸರ್ಕಾರದ ಸೌಲಭ್ಯಗಳಲ್ಲದೇ, ನಮ್ಮಲ್ಲಿಯ ಗುಣಮಟ್ಟದ ಶಿಕ್ಷಣವನ್ನು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.</p>.<p>ಆರಂಭದಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಹೂಗುಚ್ಛ ನೀಡಿ, ಶಾಲಾ ಪ್ರಾರಂಭೋತ್ಸವಕ್ಕೆ ಸ್ವಾಗತಿಸಿಕೊಳ್ಳಲಾಯಿತು.</p>.<p>ಪಾಲಕರಾದ ಕವಿತಾ, ಶಿಕ್ಷಕ ರಾಮಣ್ಣ ಹಳ್ಳಿಕೇರಿ, ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-35-1304082873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>