<p>ಬ್ರಹ್ಮಾವರ: ಇಲ್ಲಿನ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಆರೋಹ 2026’ ಸಮಾರೋಪ ಸಮಾರಂಭ ಈಚೆಗೆ ಜರುಗಿತು.</p>.<p>ಕಾರ್ಕಳದ ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನ ಪಡೆದು ₹40 ಸಾವಿರ ನಗದು ಹಾಗೂ ಟ್ರೋಫಿ ಗೆದ್ದುಕೊಂಡಿತು. ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜು ದ್ವಿತೀಯ, (₹30 ಸಾವಿರ ನಗದು, ಟ್ರೋಫಿ), ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜು ತೃತೀಯ (₹20 ಸಾವಿರ ನಗದು, ಟ್ರೋಫಿ) ಬಹುಮಾನ ಪಡೆದವು.</p>.<p>ಕಾಲೇಜಿನ ಹಳೆ ವಿದ್ಯಾರ್ಥಿ, ಕಿರುತೆರೆ ನಟ ಪುನೀತ್ ಶೆಟ್ಟಿ ಮಾತನಾಡಿ, ‘ನಾನು ಇದೇ ಕಾಲೇಜಿನಲ್ಲಿ ಓದುತ್ತಿದ್ದಾಗ ಆರೋಹ ಕಾರ್ಯಕ್ರಮದ ನೆನಪುಗಳು ಹಸಿರಾಗಿವೆ. ವಿದ್ಯಾರ್ಥಿಗಳು ಬದುಕಿನಲ್ಲಿ ದೊಡ್ಡ ಕನಸುಗಳನ್ನು ಕಾಣಬೇಕು. ಅವುಗಳನ್ನು ಛಲದಿಂದ ಬೆನ್ನತ್ತಿ ಹೋದರೆ ಯಶಸ್ಸು ಪಡೆಯಲು ಸಾಧ್ಯ’ ಎಂದರು.</p>.<p>ಕೃಷಿಕ ಜಯರಾಮ ಶೆಟ್ಟಿ ಅವರು ವಿದ್ಯಾರ್ಥಿಗಳ ಸಾಂಘಿಕ ಪ್ರಯತ್ನ, ಪ್ರತಿಭೆಯನ್ನು ಶ್ಲಾಘಿಸಿದರು. ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನಿಸ್ ಬಾಂಜೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ವಿಜಯಾ ಶುಭ ಹಾರೈಸಿದರು.</p>.<p>ವಿದುಷಿ ದೀಕ್ಷಾ ವಿ, ನಿತಿನ್ ಶೆಟ್ಟಿ, ಗೋಪಾಲ ಗಾಣಿಗ ತೀರ್ಪುಗಾರರಾಗಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಮೇಶ್ ಆಚಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-439774725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಇಲ್ಲಿನ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಆರೋಹ 2026’ ಸಮಾರೋಪ ಸಮಾರಂಭ ಈಚೆಗೆ ಜರುಗಿತು.</p>.<p>ಕಾರ್ಕಳದ ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನ ಪಡೆದು ₹40 ಸಾವಿರ ನಗದು ಹಾಗೂ ಟ್ರೋಫಿ ಗೆದ್ದುಕೊಂಡಿತು. ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜು ದ್ವಿತೀಯ, (₹30 ಸಾವಿರ ನಗದು, ಟ್ರೋಫಿ), ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜು ತೃತೀಯ (₹20 ಸಾವಿರ ನಗದು, ಟ್ರೋಫಿ) ಬಹುಮಾನ ಪಡೆದವು.</p>.<p>ಕಾಲೇಜಿನ ಹಳೆ ವಿದ್ಯಾರ್ಥಿ, ಕಿರುತೆರೆ ನಟ ಪುನೀತ್ ಶೆಟ್ಟಿ ಮಾತನಾಡಿ, ‘ನಾನು ಇದೇ ಕಾಲೇಜಿನಲ್ಲಿ ಓದುತ್ತಿದ್ದಾಗ ಆರೋಹ ಕಾರ್ಯಕ್ರಮದ ನೆನಪುಗಳು ಹಸಿರಾಗಿವೆ. ವಿದ್ಯಾರ್ಥಿಗಳು ಬದುಕಿನಲ್ಲಿ ದೊಡ್ಡ ಕನಸುಗಳನ್ನು ಕಾಣಬೇಕು. ಅವುಗಳನ್ನು ಛಲದಿಂದ ಬೆನ್ನತ್ತಿ ಹೋದರೆ ಯಶಸ್ಸು ಪಡೆಯಲು ಸಾಧ್ಯ’ ಎಂದರು.</p>.<p>ಕೃಷಿಕ ಜಯರಾಮ ಶೆಟ್ಟಿ ಅವರು ವಿದ್ಯಾರ್ಥಿಗಳ ಸಾಂಘಿಕ ಪ್ರಯತ್ನ, ಪ್ರತಿಭೆಯನ್ನು ಶ್ಲಾಘಿಸಿದರು. ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನಿಸ್ ಬಾಂಜೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ವಿಜಯಾ ಶುಭ ಹಾರೈಸಿದರು.</p>.<p>ವಿದುಷಿ ದೀಕ್ಷಾ ವಿ, ನಿತಿನ್ ಶೆಟ್ಟಿ, ಗೋಪಾಲ ಗಾಣಿಗ ತೀರ್ಪುಗಾರರಾಗಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಮೇಶ್ ಆಚಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-439774725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>