<p>ಕಾರ್ಕಳ: ಇಲ್ಲಿನ ಜೇಸಿ ಇಂಟರ್ನ್ಯಾಷನಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾರದಾ ದೇವಿ ವಿಗ್ರಹ ಮೆರವಣಿಗೆ, ಮಕ್ಕಳಿಗೆ ಆರತಿ ಬೆಳಗಿ ತಿಲಕವಿಟ್ಟು, ಚೆಂಡೆ, ಬ್ಯಾಂಡ್ ಸೆಟ್ನೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಗುತ್ತಿಗೆದಾರ ವಾದಿರಾಜ ಶೆಟ್ಟಿ ಮಾತನಾಡಿ, ಜೇಸಿ ಶಾಲೆ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುತ್ತದೆ ಎಂದರು</p>.<p>‘ಚರಿತ್ರೆ’ ಸಹ ಸಂಪಾದಕ ನಿತಿನ್ ಪೂಜಾರಿ, ಜೇಸಿ ಶಾಲೆ ಸಂಸ್ಕೃತಿ ಮತ್ತು ಉತ್ತಮ ಕಲಿಕೆಗೆ ಅಡಿಪಾಯ ಹಾಕಿದೆ. ಮಕ್ಕಳಿಗೆ ಬಡತನದ ಕುರಿತು ಕಲಿಸಿದರೆ ಜೀವನದಲ್ಲಿ ಸಹಾಯಕವಾಗುತ್ತದೆ ಎಂದರು.</p>.<p>ಅವಿನಾಶ್ ಪಿ. ಶೆಟ್ಟಿ ಮಾತನಾಡಿ, ತಂದೆ– ತಾಯಿ, ಶಿಕ್ಷಕರಿಗೆ ಗೌರವ ಕೊಡಿ. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್ ವತಿಯಿಂದ ಶಾಲಾ ವಾರ್ಷಿಕೋತ್ಸವ ಸಂದರ್ಭ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಹೇಳಿದರು.</p>.<p>ಶಾಲಾ ಅಧ್ಯಕ್ಷ ಜೇಸಿ ಚಿತ್ತರಂಜನ್ ಶೆಟ್ಟಿ ಅವರು ಮಾತನಾಡಿದರು. ಮುಖ್ಯಶಿಕ್ಷಕ ಶಂಕರನ್ ಪಿ, ಆಡಳಿತಾಧಿಕಾರಿ ಪ್ರಣೀತ್, ಕಾರ್ಕಳ ಎಜುಕೇಶನ್ ಸೊಸೈಟಿಯ ಜಯಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-145640332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಕಳ: ಇಲ್ಲಿನ ಜೇಸಿ ಇಂಟರ್ನ್ಯಾಷನಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾರದಾ ದೇವಿ ವಿಗ್ರಹ ಮೆರವಣಿಗೆ, ಮಕ್ಕಳಿಗೆ ಆರತಿ ಬೆಳಗಿ ತಿಲಕವಿಟ್ಟು, ಚೆಂಡೆ, ಬ್ಯಾಂಡ್ ಸೆಟ್ನೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಗುತ್ತಿಗೆದಾರ ವಾದಿರಾಜ ಶೆಟ್ಟಿ ಮಾತನಾಡಿ, ಜೇಸಿ ಶಾಲೆ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುತ್ತದೆ ಎಂದರು</p>.<p>‘ಚರಿತ್ರೆ’ ಸಹ ಸಂಪಾದಕ ನಿತಿನ್ ಪೂಜಾರಿ, ಜೇಸಿ ಶಾಲೆ ಸಂಸ್ಕೃತಿ ಮತ್ತು ಉತ್ತಮ ಕಲಿಕೆಗೆ ಅಡಿಪಾಯ ಹಾಕಿದೆ. ಮಕ್ಕಳಿಗೆ ಬಡತನದ ಕುರಿತು ಕಲಿಸಿದರೆ ಜೀವನದಲ್ಲಿ ಸಹಾಯಕವಾಗುತ್ತದೆ ಎಂದರು.</p>.<p>ಅವಿನಾಶ್ ಪಿ. ಶೆಟ್ಟಿ ಮಾತನಾಡಿ, ತಂದೆ– ತಾಯಿ, ಶಿಕ್ಷಕರಿಗೆ ಗೌರವ ಕೊಡಿ. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್ ವತಿಯಿಂದ ಶಾಲಾ ವಾರ್ಷಿಕೋತ್ಸವ ಸಂದರ್ಭ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಹೇಳಿದರು.</p>.<p>ಶಾಲಾ ಅಧ್ಯಕ್ಷ ಜೇಸಿ ಚಿತ್ತರಂಜನ್ ಶೆಟ್ಟಿ ಅವರು ಮಾತನಾಡಿದರು. ಮುಖ್ಯಶಿಕ್ಷಕ ಶಂಕರನ್ ಪಿ, ಆಡಳಿತಾಧಿಕಾರಿ ಪ್ರಣೀತ್, ಕಾರ್ಕಳ ಎಜುಕೇಶನ್ ಸೊಸೈಟಿಯ ಜಯಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-145640332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>