<p><strong>ಬೆಂಗಳೂರು:</strong> ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್ಗಳ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.13 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.</p><p>ಯುಜಿಸಿಇಟಿ ಕೋರ್ಸ್ಗಳಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹವರಿಗೆ ಯಾವುದೇ ಛಾಯ್ಸ್ ಆಯ್ಕೆಗೂ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಸೀಟು ಹಂಚಿಕೆಯಾದವರು ಇದುವರೆಗೂ ಶುಲ್ಕ ಪಾವತಿ ಮಾಡದೇ ಇದ್ದರೆ ಸೆ.13ರಂದು ಮಧ್ಯಾಹ್ನ 2.30ರೊಳಗೆ ಕಟ್ಟಬೇಕು. ಅದೇ ದಿನ ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.</p><p>ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶದ ನಂತರ ಪ್ರಕಟಿಸಲಾಗುತ್ತದೆ. ಅಲ್ಲಿಯವರೆಗೂ ಕಾದು ನೋಡಲು ಅವರು ಸಲಹೆ ನೀಡಿದ್ದಾರೆ.</p><p>ಹಂಚಿಕೆಯಾಗದೆ ಉಳಿದಿರುವ 14,940 ಎಂಜಿನಿಯರಿಂಗ್ ಹಾಗೂ 413 ಆರ್ಕಿಟೆಕ್ಚರ್ ಕೋರ್ಸ್ ಗಳ ಸೀಟುಗಳನ್ನು ಆಯಾ ಕಾಲೇಜುಗಳಿಗೆ ಹಸ್ತಾಂತರಿಸಲಾಗಿದೆ. ಪ್ರವೇಶಕ್ಕೆ ಅಂತಿಮ ದಿನಾಂಕದ ನಂತರ ಉಳಿಯುವ ಹಂಚಿಕೆಯಾದ ಸೀಟುಗಳನ್ನೂ ಕೊನೆ ದಿನಾಂಕದ ನಂತರ ಕಾಲೇಜುಗಳಿಗೆ ನೀಡಲಾಗುವುದು ಎಂದರು.</p><p><strong>ವೈದ್ಯಕೀಯಕ್ಕೂ ಅವಕಾಶ:</strong></p><p>ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಹಂಚಿಕೆಯಾಗಿರುವವರು ಕೂಡ ನಂತರದ ಸುತ್ತುಗಳಲ್ಲಿ ಕಾಷನ್ ಡೆಪಾಸಿಟ್ ಕಟ್ಟಿ, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು. ಒಂದು ವೇಳೆ ವೈದ್ಯಕೀಯ ಸೀಟು ಹಂಚಿಕೆಯಾದರೆ ಅಂತಹವರಿಗೆ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್ಗಳ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.13 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.</p><p>ಯುಜಿಸಿಇಟಿ ಕೋರ್ಸ್ಗಳಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹವರಿಗೆ ಯಾವುದೇ ಛಾಯ್ಸ್ ಆಯ್ಕೆಗೂ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಸೀಟು ಹಂಚಿಕೆಯಾದವರು ಇದುವರೆಗೂ ಶುಲ್ಕ ಪಾವತಿ ಮಾಡದೇ ಇದ್ದರೆ ಸೆ.13ರಂದು ಮಧ್ಯಾಹ್ನ 2.30ರೊಳಗೆ ಕಟ್ಟಬೇಕು. ಅದೇ ದಿನ ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.</p><p>ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶದ ನಂತರ ಪ್ರಕಟಿಸಲಾಗುತ್ತದೆ. ಅಲ್ಲಿಯವರೆಗೂ ಕಾದು ನೋಡಲು ಅವರು ಸಲಹೆ ನೀಡಿದ್ದಾರೆ.</p><p>ಹಂಚಿಕೆಯಾಗದೆ ಉಳಿದಿರುವ 14,940 ಎಂಜಿನಿಯರಿಂಗ್ ಹಾಗೂ 413 ಆರ್ಕಿಟೆಕ್ಚರ್ ಕೋರ್ಸ್ ಗಳ ಸೀಟುಗಳನ್ನು ಆಯಾ ಕಾಲೇಜುಗಳಿಗೆ ಹಸ್ತಾಂತರಿಸಲಾಗಿದೆ. ಪ್ರವೇಶಕ್ಕೆ ಅಂತಿಮ ದಿನಾಂಕದ ನಂತರ ಉಳಿಯುವ ಹಂಚಿಕೆಯಾದ ಸೀಟುಗಳನ್ನೂ ಕೊನೆ ದಿನಾಂಕದ ನಂತರ ಕಾಲೇಜುಗಳಿಗೆ ನೀಡಲಾಗುವುದು ಎಂದರು.</p><p><strong>ವೈದ್ಯಕೀಯಕ್ಕೂ ಅವಕಾಶ:</strong></p><p>ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಹಂಚಿಕೆಯಾಗಿರುವವರು ಕೂಡ ನಂತರದ ಸುತ್ತುಗಳಲ್ಲಿ ಕಾಷನ್ ಡೆಪಾಸಿಟ್ ಕಟ್ಟಿ, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು. ಒಂದು ವೇಳೆ ವೈದ್ಯಕೀಯ ಸೀಟು ಹಂಚಿಕೆಯಾದರೆ ಅಂತಹವರಿಗೆ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>