<p>ಕಾರವಾರ: ‘ಅಸ್ಪೃಶ್ಯತೆ ಅನುಭವಿಸಿದ್ದ ಕಾರಣಕ್ಕೆ ಆ ಪಿಡುಗು ಹೋಗಲಾಡಿಸಲು ದೇಶದಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಡಾ.ಬಾಬು ಜಗಜೀವನ ರಾಂ ಅನುಷ್ಠಾನಕ್ಕೆ ತಂದರು. ಸಮಾನತೆಯ ಅವರ ಧ್ಯೇಯ ಈಡೇರಿಸುವ ಸಂಕಲ್ಪವನ್ನು ಸಮಾಜ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ನಡೆದ ಬಾಬು ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಸ್ಥಾನಮಾನ ಪಡೆಯಬಹುದು. ಸಮಾಜದ ಎಲ್ಲ ವರ್ಗಗಳು ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶ ಪಡೆಯಬಹುದು ಎಂದು ಜಗಜೀವನ ರಾಂ ಪ್ರತಿಪಾದಿಸಿದ್ದರು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್ ಮಾತನಾಡಿ, ‘ಕಾರ್ಮಿಕರ ಹಿತ ರಕ್ಷಣೆಗಾಗಿ ಕನಿಷ್ಠ ವೇತನ ಕಾಯ್ದೆ, ದೇಶದಾದ್ಯಂತ ಕೃಷಿ ವಿಜ್ಞಾನ ಕೇಂದ್ರಗಳ ಸ್ಥಾಪನೆ ಸೇರಿದಂತೆ ಹಲವು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಗಜೀವನ ರಾಂ ಅನುಷ್ಠಾನಗೊಳಿಸಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ, ‘ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಮಾನತೆಗೂ ಅವರು ಹೋರಾಡಿದ್ದರು. ಸಮಾಜ ಪರಿವರ್ತನೆಯ ತುಡಿತ ಹೊಂದಿದ್ದ ಅವರು ದೇಶದ ಪ್ರಗತಿಯೇ ಪ್ರತಿಯೊಬ್ಬರ ಪ್ರಗತಿ ಎಂದು ನಂಬಿದ್ದರು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಕೆ.ಉಮೇಶ್, ದಲಿತ ಸಂಘಟನೆಗಳ ಪ್ರಮುಖರಾದ ದೀಪಕ್ ಕುಡಾಳಕರ, ನಾಗರಾಜ ತಳವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-20-2012989913</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಅಸ್ಪೃಶ್ಯತೆ ಅನುಭವಿಸಿದ್ದ ಕಾರಣಕ್ಕೆ ಆ ಪಿಡುಗು ಹೋಗಲಾಡಿಸಲು ದೇಶದಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಡಾ.ಬಾಬು ಜಗಜೀವನ ರಾಂ ಅನುಷ್ಠಾನಕ್ಕೆ ತಂದರು. ಸಮಾನತೆಯ ಅವರ ಧ್ಯೇಯ ಈಡೇರಿಸುವ ಸಂಕಲ್ಪವನ್ನು ಸಮಾಜ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ನಡೆದ ಬಾಬು ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಸ್ಥಾನಮಾನ ಪಡೆಯಬಹುದು. ಸಮಾಜದ ಎಲ್ಲ ವರ್ಗಗಳು ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶ ಪಡೆಯಬಹುದು ಎಂದು ಜಗಜೀವನ ರಾಂ ಪ್ರತಿಪಾದಿಸಿದ್ದರು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್ ಮಾತನಾಡಿ, ‘ಕಾರ್ಮಿಕರ ಹಿತ ರಕ್ಷಣೆಗಾಗಿ ಕನಿಷ್ಠ ವೇತನ ಕಾಯ್ದೆ, ದೇಶದಾದ್ಯಂತ ಕೃಷಿ ವಿಜ್ಞಾನ ಕೇಂದ್ರಗಳ ಸ್ಥಾಪನೆ ಸೇರಿದಂತೆ ಹಲವು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಗಜೀವನ ರಾಂ ಅನುಷ್ಠಾನಗೊಳಿಸಿದ್ದರು’ ಎಂದರು.</p>.<p>ಉಪನ್ಯಾಸ ನೀಡಿದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ, ‘ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಮಾನತೆಗೂ ಅವರು ಹೋರಾಡಿದ್ದರು. ಸಮಾಜ ಪರಿವರ್ತನೆಯ ತುಡಿತ ಹೊಂದಿದ್ದ ಅವರು ದೇಶದ ಪ್ರಗತಿಯೇ ಪ್ರತಿಯೊಬ್ಬರ ಪ್ರಗತಿ ಎಂದು ನಂಬಿದ್ದರು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಕೆ.ಉಮೇಶ್, ದಲಿತ ಸಂಘಟನೆಗಳ ಪ್ರಮುಖರಾದ ದೀಪಕ್ ಕುಡಾಳಕರ, ನಾಗರಾಜ ತಳವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-20-2012989913</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>