<p>ಕೆರೂರ: ‘ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿಯೂ ದ್ವಿಭಾಷಾ ಮಾಧ್ಯಮ ಕಲಿಕೆ ಆರಂಭವಾಗಲಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಅವರು ಶಿಕ್ಷಕರಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕೆರೂರ ವಲಯದ ಶಾಲೆಯ ಶಿಕ್ಷಕರು ದ್ವಿಭಾಷಾ ಮಾಧ್ಯಮ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಶೈಕ್ಷಣಿಕ ಸೌಲಭ್ಯ ಹೊಂದಿದೆ. ಇದನ್ನು ವಿದ್ಯಾರ್ಥಿಪೋಷಕರಿಗೆ ಮನವರಿಕೆ ಮಾಡಿ, ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿ ಸಲು ತಿಳಿಸಬೇಕು’ ಎಂದು ಹೇಳಿದರು.</p>.<p>ನೋಡಲ್ ಅಧಿಕಾರಿ ಜೆ.ಎ.ಶೇಖ್ ಮಾತನಾಡಿದರು. ಎಚ್.ಬಿ. ಗುಣ್ಣನ್ನವರ ಸ್ವಾಗತಿಸಿದರು, ವಿಜಯಕುಮಾರ್ ಹಿರೇಮಠ ಪ್ರಾರ್ಥಿಸಿದರು, ಶಾರದಾ ಹುಲ್ಯಾಳ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-526723769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ‘ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿಯೂ ದ್ವಿಭಾಷಾ ಮಾಧ್ಯಮ ಕಲಿಕೆ ಆರಂಭವಾಗಲಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಅವರು ಶಿಕ್ಷಕರಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕೆರೂರ ವಲಯದ ಶಾಲೆಯ ಶಿಕ್ಷಕರು ದ್ವಿಭಾಷಾ ಮಾಧ್ಯಮ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಶೈಕ್ಷಣಿಕ ಸೌಲಭ್ಯ ಹೊಂದಿದೆ. ಇದನ್ನು ವಿದ್ಯಾರ್ಥಿಪೋಷಕರಿಗೆ ಮನವರಿಕೆ ಮಾಡಿ, ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿ ಸಲು ತಿಳಿಸಬೇಕು’ ಎಂದು ಹೇಳಿದರು.</p>.<p>ನೋಡಲ್ ಅಧಿಕಾರಿ ಜೆ.ಎ.ಶೇಖ್ ಮಾತನಾಡಿದರು. ಎಚ್.ಬಿ. ಗುಣ್ಣನ್ನವರ ಸ್ವಾಗತಿಸಿದರು, ವಿಜಯಕುಮಾರ್ ಹಿರೇಮಠ ಪ್ರಾರ್ಥಿಸಿದರು, ಶಾರದಾ ಹುಲ್ಯಾಳ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-526723769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>