<p>ಕೆಜಿಎಫ್: ಸರ್ಕಾರಿ ಶಾಲೆಗಳಲ್ಲಿ ಸಿಗುವ ಪ್ರಯೋಜನಗಳನ್ನು ಸಾರ್ವಜನಿಕರಿಗೆ ವಿವರಿಸಿ, ದಾಖಲಾತಿ ಮಾಡುವಂತೆ ಪ್ರೇರೇಪಿಸಲು ಶಾಲಾ ಶಿಕ್ಷಣ ಇಲಾಖೆಯಿಂದ ಶನಿವಾರ ಆಂಡರಸನ್ಪೇಟೆ ಸುತ್ತಮುತ್ತ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತಿದೆ. ಇಂಗ್ಲಿಷ್ ಕಲಿಕೆಗೆ ಒತ್ತು ನೀಡಲು ಈ ಬಾರಿಯಿಂದ ದ್ವಿಭಾಷಾ ಮಾಧ್ಯಮವನ್ನು ಪ್ರಾರಂಭಿಸಲಾಗಿದೆ. ನುರಿತ ಶಿಕ್ಷಕರು, ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.</p>.<p>ಗೋಣಮಾಕನಹಳ್ಳಿ, ಗೊಲ್ಲಹಳ್ಳಿ, ಭಾರತೀಪುರಂ, ಸೂಸೈಪಾಳ್ಯ ಪ್ರದೇಶಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.</p>.<p>ಮುಖ್ಯ ಶಿಕ್ಷಕರಾದ ಸೈದಾಬಿ, ಜಯಶಾಂತಿ, ನಾಗಮ್ಮ, ಶಂಕರ್, ವಿವಿಧ ಶಾಲೆಗಳ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-197623105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಸರ್ಕಾರಿ ಶಾಲೆಗಳಲ್ಲಿ ಸಿಗುವ ಪ್ರಯೋಜನಗಳನ್ನು ಸಾರ್ವಜನಿಕರಿಗೆ ವಿವರಿಸಿ, ದಾಖಲಾತಿ ಮಾಡುವಂತೆ ಪ್ರೇರೇಪಿಸಲು ಶಾಲಾ ಶಿಕ್ಷಣ ಇಲಾಖೆಯಿಂದ ಶನಿವಾರ ಆಂಡರಸನ್ಪೇಟೆ ಸುತ್ತಮುತ್ತ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತಿದೆ. ಇಂಗ್ಲಿಷ್ ಕಲಿಕೆಗೆ ಒತ್ತು ನೀಡಲು ಈ ಬಾರಿಯಿಂದ ದ್ವಿಭಾಷಾ ಮಾಧ್ಯಮವನ್ನು ಪ್ರಾರಂಭಿಸಲಾಗಿದೆ. ನುರಿತ ಶಿಕ್ಷಕರು, ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.</p>.<p>ಗೋಣಮಾಕನಹಳ್ಳಿ, ಗೊಲ್ಲಹಳ್ಳಿ, ಭಾರತೀಪುರಂ, ಸೂಸೈಪಾಳ್ಯ ಪ್ರದೇಶಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.</p>.<p>ಮುಖ್ಯ ಶಿಕ್ಷಕರಾದ ಸೈದಾಬಿ, ಜಯಶಾಂತಿ, ನಾಗಮ್ಮ, ಶಂಕರ್, ವಿವಿಧ ಶಾಲೆಗಳ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-197623105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>