<p>ಕೆಜಿಎಫ್: ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಎಂ.ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ರಾಬರ್ಟಸನ್ಪೇಟೆಯ ಸರ್ಕಾರಿ ಮಹಿಳಾ ಜ್ಯೂನಿಯರ್ ಕಾಲೇಜಿನಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಟಾರ್ಜನ್ ಘೋಷಿಸಿದರು.</p>.<p>ಉಪಾಧ್ಯಕ್ಷ ಎಸ್.ಎಂ.ತ್ಯಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ವಿ.ಶ್ರೀನಿವಾಸ್, ಸಹ ಕಾರ್ಯದರ್ಶಿ ಛಾಯಾದೇವಿ, ಖಜಾಂಚಿ ಕೆ.ಶ್ರೀನಿವಾಸ್, ಮಹಿಳಾ ಉಪಾಧ್ಯಕ್ಷೆ ಟಿ.ಭಾರತಿ ಆಯ್ಕೆಯಾಗಿದ್ದಾರೆ. ಆರ್.ನಾಗವೇಣಿ ಮತ್ತು ಜಿ.ಶ್ರೀನಿವಾಸಮೂರ್ತಿ ಅವರನ್ನು ಜಿಲ್ಲಾ ಸಮಿತಿಗೆ ನೇಮಕ ಮಾಡಲಾಗಿದೆ.</p>.<p>ಶಿಕ್ಷಕರ ಸಂಘಕ್ಕೆ ಎರಡು ಬಣಗಳು ತೀವ್ರ ಪೈಪೋಟಿ ಸಾಧಿಸಿದ್ದವು. ನಂತರ ಶಾಸಕಿ ಎಂ.ರೂಪಕಲಾ ಅವರು ಎರಡೂ ಬಣಗಳ ಜೊತೆ ಸಂಧಾನ ಮಾಡಿ ಎರಡೂ ಬಣಗಳಿಗೆ ಅಧಿಕಾರ ಹಂಚಿಕೆ ಸೂತ್ರ ಇಟ್ಟಿದ್ದರು. ಈ ಸೂತ್ರದ ಅಡಿಯಲ್ಲಿ ನಾರಾಯಣಸ್ವಾಮಿ ಅವರು ಎರಡೂವರೆ ವರ್ಷಗಳ ಕಾಲ ಅಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಂದು ಗುಂಪಿನವರು ಅಧ್ಯಕ್ಷರಾಗುತ್ತಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-18-1954572133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಎಂ.ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ರಾಬರ್ಟಸನ್ಪೇಟೆಯ ಸರ್ಕಾರಿ ಮಹಿಳಾ ಜ್ಯೂನಿಯರ್ ಕಾಲೇಜಿನಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಟಾರ್ಜನ್ ಘೋಷಿಸಿದರು.</p>.<p>ಉಪಾಧ್ಯಕ್ಷ ಎಸ್.ಎಂ.ತ್ಯಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ವಿ.ಶ್ರೀನಿವಾಸ್, ಸಹ ಕಾರ್ಯದರ್ಶಿ ಛಾಯಾದೇವಿ, ಖಜಾಂಚಿ ಕೆ.ಶ್ರೀನಿವಾಸ್, ಮಹಿಳಾ ಉಪಾಧ್ಯಕ್ಷೆ ಟಿ.ಭಾರತಿ ಆಯ್ಕೆಯಾಗಿದ್ದಾರೆ. ಆರ್.ನಾಗವೇಣಿ ಮತ್ತು ಜಿ.ಶ್ರೀನಿವಾಸಮೂರ್ತಿ ಅವರನ್ನು ಜಿಲ್ಲಾ ಸಮಿತಿಗೆ ನೇಮಕ ಮಾಡಲಾಗಿದೆ.</p>.<p>ಶಿಕ್ಷಕರ ಸಂಘಕ್ಕೆ ಎರಡು ಬಣಗಳು ತೀವ್ರ ಪೈಪೋಟಿ ಸಾಧಿಸಿದ್ದವು. ನಂತರ ಶಾಸಕಿ ಎಂ.ರೂಪಕಲಾ ಅವರು ಎರಡೂ ಬಣಗಳ ಜೊತೆ ಸಂಧಾನ ಮಾಡಿ ಎರಡೂ ಬಣಗಳಿಗೆ ಅಧಿಕಾರ ಹಂಚಿಕೆ ಸೂತ್ರ ಇಟ್ಟಿದ್ದರು. ಈ ಸೂತ್ರದ ಅಡಿಯಲ್ಲಿ ನಾರಾಯಣಸ್ವಾಮಿ ಅವರು ಎರಡೂವರೆ ವರ್ಷಗಳ ಕಾಲ ಅಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಂದು ಗುಂಪಿನವರು ಅಧ್ಯಕ್ಷರಾಗುತ್ತಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-18-1954572133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>