<p>ಮಡಿಕೇರಿ: ‘ಕೊಡಗು ಜಿಲ್ಲೆಗೆ ಪ್ರತ್ಯೇಕ ಸಾಂಸ್ಕೃತಿಕ ನೀತಿ ರೂಪಿಸಬೇಕು’ ಎಂದು ಸಾಹಿತಿ ಅಬ್ದುಲ್ ರಶೀದ್ ಶುಕ್ರವಾರ ಇಲ್ಲಿ ಒತ್ತಾಯಿಸಿದರು.</p>.<p>ಸುಂಟಿಕೊಪ್ಪದಲ್ಲಿ ನಡೆದ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.</p>.<p>‘ಕೊಡಗಿನಲ್ಲಿ ಕನ್ನಡ ಉಳಿಸುವುದೆಂದರೆ ಇಲ್ಲಿನ ಕೊಡವ, ಅರೆಭಾಷೆ, ಜೇನುಕುರುಬ, ಮೇದ, ಬೆಟ್ಟಕುರುಬ, ಯರವ, ಅಡಿಯ, ಪಣಿಯ, ದೇವಸೋಲಿಗ, ಜೇನುಮಲೆ ಕುಡಿಯ, ಪೂಮಲೆ ಕುಡಿಯ ಇತ್ಯಾದಿ ಭಾಷೆಗಳನ್ನು ಉಳಿಸುವುದು ಎಂದರ್ಥ. ಇವುಗಳನ್ನು ಬಳಸುವ ಸಮುದಾಯದ ಮಕ್ಕಳಲ್ಲಿ ಈ ಭಾಷೆಗಳ ಕುರಿತ ಕುತೂಹಲ ಆಸಕ್ತಿ ಮತ್ತು ಹೆಮ್ಮೆಯನ್ನು ಮೂಡಿಸುವ ಕೆಲಸವಾಗಬೇಕು. ಆಶ್ರಮ ಶಾಲೆಗಳಲ್ಲಿ ಈ ಭಾಷೆಗಳ ಮಾಹಿತಿ, ಕಲಿಕೆ ಕೊಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೊಡಗು ಕೇಂದ್ರೀಕೃತವಾದ ಮಾದರಿ ಸೂತ್ರಗಳನ್ನು ನಿರೂಪಿಸಬೇಕು. ಕೊಡಗಿನಲ್ಲಿ ವಿಲಾಸಿ ಪ್ರವಾಸೋದ್ಯಮದ ನಿಯಂತ್ರಣಕ್ಕೂ ನೀತಿ ರೂಪಿಸಬೇಕು’ ಎಂದೂ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-51-1335418086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಕೊಡಗು ಜಿಲ್ಲೆಗೆ ಪ್ರತ್ಯೇಕ ಸಾಂಸ್ಕೃತಿಕ ನೀತಿ ರೂಪಿಸಬೇಕು’ ಎಂದು ಸಾಹಿತಿ ಅಬ್ದುಲ್ ರಶೀದ್ ಶುಕ್ರವಾರ ಇಲ್ಲಿ ಒತ್ತಾಯಿಸಿದರು.</p>.<p>ಸುಂಟಿಕೊಪ್ಪದಲ್ಲಿ ನಡೆದ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.</p>.<p>‘ಕೊಡಗಿನಲ್ಲಿ ಕನ್ನಡ ಉಳಿಸುವುದೆಂದರೆ ಇಲ್ಲಿನ ಕೊಡವ, ಅರೆಭಾಷೆ, ಜೇನುಕುರುಬ, ಮೇದ, ಬೆಟ್ಟಕುರುಬ, ಯರವ, ಅಡಿಯ, ಪಣಿಯ, ದೇವಸೋಲಿಗ, ಜೇನುಮಲೆ ಕುಡಿಯ, ಪೂಮಲೆ ಕುಡಿಯ ಇತ್ಯಾದಿ ಭಾಷೆಗಳನ್ನು ಉಳಿಸುವುದು ಎಂದರ್ಥ. ಇವುಗಳನ್ನು ಬಳಸುವ ಸಮುದಾಯದ ಮಕ್ಕಳಲ್ಲಿ ಈ ಭಾಷೆಗಳ ಕುರಿತ ಕುತೂಹಲ ಆಸಕ್ತಿ ಮತ್ತು ಹೆಮ್ಮೆಯನ್ನು ಮೂಡಿಸುವ ಕೆಲಸವಾಗಬೇಕು. ಆಶ್ರಮ ಶಾಲೆಗಳಲ್ಲಿ ಈ ಭಾಷೆಗಳ ಮಾಹಿತಿ, ಕಲಿಕೆ ಕೊಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೊಡಗು ಕೇಂದ್ರೀಕೃತವಾದ ಮಾದರಿ ಸೂತ್ರಗಳನ್ನು ನಿರೂಪಿಸಬೇಕು. ಕೊಡಗಿನಲ್ಲಿ ವಿಲಾಸಿ ಪ್ರವಾಸೋದ್ಯಮದ ನಿಯಂತ್ರಣಕ್ಕೂ ನೀತಿ ರೂಪಿಸಬೇಕು’ ಎಂದೂ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-51-1335418086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>