<p>ಮಡಿಕೇರಿ:ಕೊಡಗು ಜಿಲ್ಲೆಯ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನವು ಏಪ್ರಿಲ್ 28ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ.</p>.<p>ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಗು ಬ್ಯಾರೀಸ್ ವೆಲ್ ಫೇರ್ ಟ್ರಸ್ಟ್ನ ಸಹಯೋಗದೊಂದಿಗೆ ನಡೆಸುತ್ತಿರುವ ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಬಿ.ಎ. ಷಂಶುದ್ದೀನ್ ವಹಿಸಲಿದ್ದಾರೆ.</p>.<p>ಬೆಳಿಗ್ಗೆ 9.30ಕ್ಕೆ ಕ್ರೆಸೆಂಟ್ ಶಾಲೆಯಿಂದ ಕಾವೇರಿ ಹಾಲ್ ತನಕ ಸಮ್ಮೇಳನಾಧ್ಯಕ್ಷರ ಮರವಣಿಗೆ ನಡೆಯಲಿದ್ದು, ನಗರಸಭೆಯ ಸದಸ್ಯ ಅಮೀನ್ ಮೋಹಿನ್ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಯು.ಎಚ್.ಉಮರ್ 10.15ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.</p>.<p>ಬೆಳಿಗ್ಗೆ 10.30ಕ್ಕೆ ವಿಧಾನ ಪರಿಷತ್ನ ಮಾಜಿ ಸದಸ್ಯ ಬಿ.ಎಂ.ಫಾರೂಕ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2ರಿಂದ 3 ಗಂಟೆಯವರೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ನಿರೂಪಿಸಲಿದ್ದು, ಪತ್ರಕರ್ತ ಹಂಝ ಮಲಾರ್, ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ತೌಸೀಫ್ ಅಹ್ಮದ್ ಮಡಿಕೇರಿ, ವೈದ್ಯರಾದ ಆಫೀನ್ ಚರ್ಚಾಗೋಷ್ಠಿಯಲ್ಲಿ ಭಾಗವಹಿಸುವರು.</p>.<p>ಮಧ್ಯಾಹ್ನ 3ರಿಂದ 4ರವರೆಗೆ ಬ್ಯಾರಿ ಕವಿಗೋಷ್ಠಿ ನಡೆಯಲಿದ್ದು, ಸಂಜೆ 4.30ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದು, 11 ಮಂದಿ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ.</p>.<p>ಈ ಮಧ್ಯೆ ದಫ್, ಒಪ್ಪನೆ ಪಾಟ್, ಕೋಲ್ಕಲಿ, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ಬ್ಯಾರಿ ಪ್ರಹಸನಗಳೂ ನಡೆಯಲಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-51-1138646773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ:ಕೊಡಗು ಜಿಲ್ಲೆಯ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನವು ಏಪ್ರಿಲ್ 28ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ.</p>.<p>ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಗು ಬ್ಯಾರೀಸ್ ವೆಲ್ ಫೇರ್ ಟ್ರಸ್ಟ್ನ ಸಹಯೋಗದೊಂದಿಗೆ ನಡೆಸುತ್ತಿರುವ ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಬಿ.ಎ. ಷಂಶುದ್ದೀನ್ ವಹಿಸಲಿದ್ದಾರೆ.</p>.<p>ಬೆಳಿಗ್ಗೆ 9.30ಕ್ಕೆ ಕ್ರೆಸೆಂಟ್ ಶಾಲೆಯಿಂದ ಕಾವೇರಿ ಹಾಲ್ ತನಕ ಸಮ್ಮೇಳನಾಧ್ಯಕ್ಷರ ಮರವಣಿಗೆ ನಡೆಯಲಿದ್ದು, ನಗರಸಭೆಯ ಸದಸ್ಯ ಅಮೀನ್ ಮೋಹಿನ್ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಯು.ಎಚ್.ಉಮರ್ 10.15ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.</p>.<p>ಬೆಳಿಗ್ಗೆ 10.30ಕ್ಕೆ ವಿಧಾನ ಪರಿಷತ್ನ ಮಾಜಿ ಸದಸ್ಯ ಬಿ.ಎಂ.ಫಾರೂಕ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2ರಿಂದ 3 ಗಂಟೆಯವರೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ನಿರೂಪಿಸಲಿದ್ದು, ಪತ್ರಕರ್ತ ಹಂಝ ಮಲಾರ್, ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ತೌಸೀಫ್ ಅಹ್ಮದ್ ಮಡಿಕೇರಿ, ವೈದ್ಯರಾದ ಆಫೀನ್ ಚರ್ಚಾಗೋಷ್ಠಿಯಲ್ಲಿ ಭಾಗವಹಿಸುವರು.</p>.<p>ಮಧ್ಯಾಹ್ನ 3ರಿಂದ 4ರವರೆಗೆ ಬ್ಯಾರಿ ಕವಿಗೋಷ್ಠಿ ನಡೆಯಲಿದ್ದು, ಸಂಜೆ 4.30ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದು, 11 ಮಂದಿ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ.</p>.<p>ಈ ಮಧ್ಯೆ ದಫ್, ಒಪ್ಪನೆ ಪಾಟ್, ಕೋಲ್ಕಲಿ, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ಬ್ಯಾರಿ ಪ್ರಹಸನಗಳೂ ನಡೆಯಲಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-51-1138646773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>