<p>ಮಡಿಕೇರಿ: ಬಂದೂಕಿನಿಂದ ಹಾರಿದ ಗುಂಡು ಯಾವ ರೀತಿ ತನ್ನ ಗುರಿಯನ್ನು ತಲುಪುತ್ತದೆಯೋ ಅದೇ ರೀತಿಯಲ್ಲಿ ಎನ್ಸಿಸಿ ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನೂ ತಲುಪಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಅಶೋಕ ಸಂಗಪ್ಪ ಆಲೂರ ಹೇಳಿದರು.</p>.<p>ಇಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಎನ್ಸಿಸಿ ಕೆಡೆಟ್ಗಳಿಗಾಗಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ₹ 5.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಅನ್ನು 19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಅವರೊಂದಿಗೆ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎನ್ಸಿಸಿ ಕೆಡೆಟ್ಗಳಾಗಿ ಶಿಸ್ತು ಮತ್ತು ದೇಶ ಭಕ್ತಿಯನ್ನೂ ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಎನ್ಸಿಸಿ ಸೇರ್ಪಡೆಯಾಗಬೇಕು. ದೇಶದ ರಕ್ಷಣೆಗೆ ಅಗತ್ಯವಾದಾಗ ದೇಶ ಸೇವೆಗೂ ಮುಂದಾಗಬೇಕು ಎಂದರು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಹತ್ತಾರು ಕೊಡುಗೆಗಳನ್ನು ನೀಡಿದೆ’ ಎಂದು ಶ್ಲಾಘಿಸಿದರು.</p>.<p>19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಮಾತನಾಡಿ, ‘ಮಡಿಕೇರಿಯ ಮುತ್ತಮುತ್ತಲಿನ ಪ್ರದೇಶದಲ್ಲಿ ಎನ್ಸಿಸಿ ಕೆಡೆಟ್ಗಳಿಗೆ ಫೈರಿಂಗ್ ರೇಂಜ್ ಇಲ್ಲದಾಗಿತ್ತು. 19ನೇ ಕರ್ನಾಟಕ ಎನ್ಸಿಸಿ ಬೆಟಾಲಿಯನ್ಗೆ ಈ ರೈಫಲ್ ಫೈರಿಂಗ್ ರೇಂಜ್ ಅಮೂಲ್ಯವಾಗಿದ್ದು, ಕೆಡೆಟ್ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಫೈರಿಂಗ್ ರೇಂಜ್ನ ಅಗತ್ಯತೆಯನ್ನು ಮನಗಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಪಕ್ಕದಲ್ಲೇ ಎನ್ಸಿಸಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಕರ್ನಲ್ ರೆಜಿತ್ ಮುಕುಂದನ್ ಶ್ಲಾಘಿಸಿದರು.</p>.<p>ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿಯೇ ಭವಿಷ್ಯದ ಬಗ್ಗೆ ನಿಖರ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಈ ಹಿಂದೆ ಜಿಲ್ಲೆಯಲ್ಲಿದ್ದ ಫೈರಿಂಗ್ ರೇಂಜ್ಗಳು ಪ್ರಸ್ತುತ ಒತ್ತುವರಿಗೆ ತುತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ವಕೀಲರಾದ ಮುಂಡಂಡ ಸುದೈಯ್ ನಾಣಯ್ಯ ಮಾತನಾಡಿ, ಈ ಫೈರಿಂಗ್ ರೇಂಜ್ನಲ್ಲಿ ರಾಜ್ಯ, ರಾಷ್ಟ್ರಮಟ್ಟದ ಶೂಟಿಂಗ್ ಕ್ರೀಡೆಗಳಿಗೆ ತರಬೇತಿಯನ್ನು ನೀಡುವ ಕುರಿತು ಚಿಂತಿಸೇಕು ಎಂದರು.</p>.<p>ಹಳೇ ವಿದ್ಯಾರ್ಥಿ ಸಂಘದ ಮುಖಂಡರಾದ ಬೊಟ್ಟಂಗಡ ಗಣಪತಿ, ಶ್ಯಾಮ್, ಚಂದನ್ ನಂದರಬೆಟ್ಟು, ರಶ್ಮಿ ಮೇದಪ್ಪ, ದಮಯಂತಿ, ಕಾಲೇಜಿನ ಉಪನ್ಯಾಸಕರಾದ ರವಿಶಂಕರ್, ಕೃಷ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1421603790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಬಂದೂಕಿನಿಂದ ಹಾರಿದ ಗುಂಡು ಯಾವ ರೀತಿ ತನ್ನ ಗುರಿಯನ್ನು ತಲುಪುತ್ತದೆಯೋ ಅದೇ ರೀತಿಯಲ್ಲಿ ಎನ್ಸಿಸಿ ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನೂ ತಲುಪಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಅಶೋಕ ಸಂಗಪ್ಪ ಆಲೂರ ಹೇಳಿದರು.</p>.<p>ಇಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಎನ್ಸಿಸಿ ಕೆಡೆಟ್ಗಳಿಗಾಗಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ₹ 5.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಅನ್ನು 19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಅವರೊಂದಿಗೆ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎನ್ಸಿಸಿ ಕೆಡೆಟ್ಗಳಾಗಿ ಶಿಸ್ತು ಮತ್ತು ದೇಶ ಭಕ್ತಿಯನ್ನೂ ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಎನ್ಸಿಸಿ ಸೇರ್ಪಡೆಯಾಗಬೇಕು. ದೇಶದ ರಕ್ಷಣೆಗೆ ಅಗತ್ಯವಾದಾಗ ದೇಶ ಸೇವೆಗೂ ಮುಂದಾಗಬೇಕು ಎಂದರು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಹತ್ತಾರು ಕೊಡುಗೆಗಳನ್ನು ನೀಡಿದೆ’ ಎಂದು ಶ್ಲಾಘಿಸಿದರು.</p>.<p>19ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಮಾತನಾಡಿ, ‘ಮಡಿಕೇರಿಯ ಮುತ್ತಮುತ್ತಲಿನ ಪ್ರದೇಶದಲ್ಲಿ ಎನ್ಸಿಸಿ ಕೆಡೆಟ್ಗಳಿಗೆ ಫೈರಿಂಗ್ ರೇಂಜ್ ಇಲ್ಲದಾಗಿತ್ತು. 19ನೇ ಕರ್ನಾಟಕ ಎನ್ಸಿಸಿ ಬೆಟಾಲಿಯನ್ಗೆ ಈ ರೈಫಲ್ ಫೈರಿಂಗ್ ರೇಂಜ್ ಅಮೂಲ್ಯವಾಗಿದ್ದು, ಕೆಡೆಟ್ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಫೈರಿಂಗ್ ರೇಂಜ್ನ ಅಗತ್ಯತೆಯನ್ನು ಮನಗಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಪಕ್ಕದಲ್ಲೇ ಎನ್ಸಿಸಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಕರ್ನಲ್ ರೆಜಿತ್ ಮುಕುಂದನ್ ಶ್ಲಾಘಿಸಿದರು.</p>.<p>ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿಯೇ ಭವಿಷ್ಯದ ಬಗ್ಗೆ ನಿಖರ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಈ ಹಿಂದೆ ಜಿಲ್ಲೆಯಲ್ಲಿದ್ದ ಫೈರಿಂಗ್ ರೇಂಜ್ಗಳು ಪ್ರಸ್ತುತ ಒತ್ತುವರಿಗೆ ತುತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ವಕೀಲರಾದ ಮುಂಡಂಡ ಸುದೈಯ್ ನಾಣಯ್ಯ ಮಾತನಾಡಿ, ಈ ಫೈರಿಂಗ್ ರೇಂಜ್ನಲ್ಲಿ ರಾಜ್ಯ, ರಾಷ್ಟ್ರಮಟ್ಟದ ಶೂಟಿಂಗ್ ಕ್ರೀಡೆಗಳಿಗೆ ತರಬೇತಿಯನ್ನು ನೀಡುವ ಕುರಿತು ಚಿಂತಿಸೇಕು ಎಂದರು.</p>.<p>ಹಳೇ ವಿದ್ಯಾರ್ಥಿ ಸಂಘದ ಮುಖಂಡರಾದ ಬೊಟ್ಟಂಗಡ ಗಣಪತಿ, ಶ್ಯಾಮ್, ಚಂದನ್ ನಂದರಬೆಟ್ಟು, ರಶ್ಮಿ ಮೇದಪ್ಪ, ದಮಯಂತಿ, ಕಾಲೇಜಿನ ಉಪನ್ಯಾಸಕರಾದ ರವಿಶಂಕರ್, ಕೃಷ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1421603790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>