<p>ಕೋಲಾರ: ಬಸವಣ್ಣ ಅವರ ಆಶಯದಂತೆ ಸಮ ಸಮಾಜ ನಿರ್ಮಾಣದ ಪ್ರಯತ್ನವಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ‘ಅನುಭವ ಮಂಟಪ ವೇದಿಕೆ’ ರಚಿಸಿರುವುದು ಶ್ಲಾಘನೀಯ ಕಾರ್ಯ ಎಂದು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬಣ್ಣಿಸಿದರು.</p>.<p>ತಾಲ್ಲೂಕಿನ ಮಂಗಸಂದ್ರದ ಸುವರ್ಣಗಂಗೆ ಕ್ಯಾಂಪಸ್ನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಅನುಭವ ಮಂಟಪ ವೇದಿಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ಅನುಭವ ಮಂಟಪ ವೇದಿಕೆ ಮೂಲಕ ಬಸವ ತತ್ವಗಳ ಚರ್ಚೆ ನಡೆಸಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣ ಅವರ ಸ್ಮರಣೆ ಜತೆಗೆ ಜಾತಿ, ಧರ್ಮ, ಕುಲ, ಮತ ಬೇಧವಿಲ್ಲದ ಮನಸ್ಥಿತಿ ನಿರ್ಮಾಣವಾಗಬೇಕು ಎಂದರು.</p>.<p>ಬಸವಣ್ಣ ಹೇಳಿದಂತೆ ನಾವು ದೇವರನ್ನು ದೇವಾಲಯ, ಚರ್ಚ್, ಮಸೀದಿಗಳಲ್ಲಿ ಹುಡುಕುವ ಅಗತ್ಯವಿಲ್ಲ. ನಮ್ಮನ್ನು ನಾವೇ ಅರಿತರೆ ಅದೇ ದೈವತ್ವ ಎಂದು ಅಭಿಪ್ರಾಯಪಟ್ಟರು.</p>.<p>ದಮನಿತರ ಧ್ವನಿಯಾಗಿದ್ದ ಬಸವಣ್ಣನವರ ಅನುಭವ ಮಂಟಪದಂತಿರುವ ಈ ವೇದಿಕೆ ದೇಶದ ಗಮನ ಸೆಳೆಯಬೇಕು. ಅಸ್ಪೃಶ್ಯತೆಗೆ ತಿಲಾಂಜಲಿ ಇಡಬೇಕು, ಸ್ತ್ರೀ ಸಮಾನತೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಕೆ.ರವಿ, ‘ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾದರು. ಜನಸಾಮಾನ್ಯರಿಗೆ ವಚನಗಳ ಮೂಲಕ ಸಂದೇಶ ತಲುಪಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ಬದಲಾವಣೆಗೆ ಅಡಿಪಾಯ ಹಾಕಿಕೊಟ್ಟರು’ ಎಂದರು.</p>.<p>ಅನುಭವ ಮಂಟಪ ವೇದಿಕೆ ಬಳಸಿಕೊಂಡು ಚರ್ಚೆಗಳ ಮೂಲಕ ಬಸವ ತತ್ವಗಳ ಮಹತ್ವ ಅರಿತು ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. ದ್ವೇಷ, ಅಸೂಯೆ ಕೊನೆಗೊಳ್ಳಬೇಕು ಎಂದು ನುಡಿದರು.</p>.<p>ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಲೋಕನಾಥ್, ಹಣಕಾಸು ಅಧಿಕಾರಿ ವಸಂತಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಮಾತನಾಡಿದರು.</p>.<p>ಪ್ರೊ.ವಿಶ್ವನಾಥ್ ಕವನ ವಾಚಿಸಿದರು. ಗಣಿತ ಉಪನ್ಯಾಸಕಿ ಸಿ.ಎಸ್.ಶ್ರೀಲತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ನಂದಶ್ರೀ ಸ್ವಾಗತಿಸಿ, ಗಾಯತ್ರಿದೇವಿ ಅತಿಥಿಗಳ ಪರಿಚಯ ಮಾಡಿಕೊಟ್ಟರು.</p>.<p>ಆಡಳಿತ ಕುಲಸಚಿವ ಸಿ.ಎನ್.ಶ್ರೀಧರ್, ಸುವರ್ಣಗಂಗೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಪ್ರೊ.ಡಿ.ಕುಮುದಾ, ಪಿ.ಎಂ.ಉಷಾ ನೋಡಲ್ ಅಧಿಕಾರಿ ರಮೇಶ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-18-1438965100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಬಸವಣ್ಣ ಅವರ ಆಶಯದಂತೆ ಸಮ ಸಮಾಜ ನಿರ್ಮಾಣದ ಪ್ರಯತ್ನವಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ‘ಅನುಭವ ಮಂಟಪ ವೇದಿಕೆ’ ರಚಿಸಿರುವುದು ಶ್ಲಾಘನೀಯ ಕಾರ್ಯ ಎಂದು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬಣ್ಣಿಸಿದರು.</p>.<p>ತಾಲ್ಲೂಕಿನ ಮಂಗಸಂದ್ರದ ಸುವರ್ಣಗಂಗೆ ಕ್ಯಾಂಪಸ್ನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಅನುಭವ ಮಂಟಪ ವೇದಿಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ಅನುಭವ ಮಂಟಪ ವೇದಿಕೆ ಮೂಲಕ ಬಸವ ತತ್ವಗಳ ಚರ್ಚೆ ನಡೆಸಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣ ಅವರ ಸ್ಮರಣೆ ಜತೆಗೆ ಜಾತಿ, ಧರ್ಮ, ಕುಲ, ಮತ ಬೇಧವಿಲ್ಲದ ಮನಸ್ಥಿತಿ ನಿರ್ಮಾಣವಾಗಬೇಕು ಎಂದರು.</p>.<p>ಬಸವಣ್ಣ ಹೇಳಿದಂತೆ ನಾವು ದೇವರನ್ನು ದೇವಾಲಯ, ಚರ್ಚ್, ಮಸೀದಿಗಳಲ್ಲಿ ಹುಡುಕುವ ಅಗತ್ಯವಿಲ್ಲ. ನಮ್ಮನ್ನು ನಾವೇ ಅರಿತರೆ ಅದೇ ದೈವತ್ವ ಎಂದು ಅಭಿಪ್ರಾಯಪಟ್ಟರು.</p>.<p>ದಮನಿತರ ಧ್ವನಿಯಾಗಿದ್ದ ಬಸವಣ್ಣನವರ ಅನುಭವ ಮಂಟಪದಂತಿರುವ ಈ ವೇದಿಕೆ ದೇಶದ ಗಮನ ಸೆಳೆಯಬೇಕು. ಅಸ್ಪೃಶ್ಯತೆಗೆ ತಿಲಾಂಜಲಿ ಇಡಬೇಕು, ಸ್ತ್ರೀ ಸಮಾನತೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಕೆ.ರವಿ, ‘ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುಂದಾದರು. ಜನಸಾಮಾನ್ಯರಿಗೆ ವಚನಗಳ ಮೂಲಕ ಸಂದೇಶ ತಲುಪಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ಬದಲಾವಣೆಗೆ ಅಡಿಪಾಯ ಹಾಕಿಕೊಟ್ಟರು’ ಎಂದರು.</p>.<p>ಅನುಭವ ಮಂಟಪ ವೇದಿಕೆ ಬಳಸಿಕೊಂಡು ಚರ್ಚೆಗಳ ಮೂಲಕ ಬಸವ ತತ್ವಗಳ ಮಹತ್ವ ಅರಿತು ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. ದ್ವೇಷ, ಅಸೂಯೆ ಕೊನೆಗೊಳ್ಳಬೇಕು ಎಂದು ನುಡಿದರು.</p>.<p>ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಲೋಕನಾಥ್, ಹಣಕಾಸು ಅಧಿಕಾರಿ ವಸಂತಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಮಾತನಾಡಿದರು.</p>.<p>ಪ್ರೊ.ವಿಶ್ವನಾಥ್ ಕವನ ವಾಚಿಸಿದರು. ಗಣಿತ ಉಪನ್ಯಾಸಕಿ ಸಿ.ಎಸ್.ಶ್ರೀಲತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ನಂದಶ್ರೀ ಸ್ವಾಗತಿಸಿ, ಗಾಯತ್ರಿದೇವಿ ಅತಿಥಿಗಳ ಪರಿಚಯ ಮಾಡಿಕೊಟ್ಟರು.</p>.<p>ಆಡಳಿತ ಕುಲಸಚಿವ ಸಿ.ಎನ್.ಶ್ರೀಧರ್, ಸುವರ್ಣಗಂಗೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಪ್ರೊ.ಡಿ.ಕುಮುದಾ, ಪಿ.ಎಂ.ಉಷಾ ನೋಡಲ್ ಅಧಿಕಾರಿ ರಮೇಶ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-18-1438965100</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>