<p>ಕೋಲಾರ: ನಗರದ ಖಾದ್ರಿಪುರದಲ್ಲಿರುವ ನಲ್ಲೂರಮ್ಮ ದೇವಿ ಮಕ್ಕಳ ಆಶ್ರಮ ಕ್ಷೇಮಾಭಿವೃದ್ಧಿ ಟ್ರಸ್ಟ್ನಲ್ಲಿ ಗುರುವಾರ ಭಾರತ ಸೇವಾದಳ ಸಂಸ್ಥಾಪಕ ನಾ.ಸು.ಹರ್ಡೀಕರ್ ಜನ್ಮ ಜಯಂತಿ ಕಾರ್ಯಕ್ರಮ ನಡೆಯಿತು.</p>.<p>ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಮಾತನಾಡಿ, ‘ಸ್ವಾತಂತ್ಯ್ರ ಚಳವಳಿಗೆ ಯುವ ಸಮೂಹವನ್ನು ಸಂಘಟಿಸಲು ಕರ್ನಾಟಕದ ನಾ.ಸು.ಹರ್ಡೀಕರ್ ಆರಂಭಿಸಿದ ಭಾರತ ಸೇವಾದಳ ತರಬೇತಿ ಶಿಕ್ಷಣವು ಪ್ರಸ್ತುತ ಪ್ರತಿ ವಿದ್ಯಾರ್ಥಿಗೂ ಅಗತ್ಯವಾಗಿದೆ. ಸೇವಾದಳ ಶಿಕ್ಷಣವನ್ನು ಪ್ರತಿ ಶಾಲೆಯಲ್ಲಿಯೂ ಕಡ್ಡಾಯಗೊಳಿಸಬೇಕು’ ಎಂದು ಹೇಳಿದರು.</p>.<p>ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್, ಮಾಲೂರು ತಾಲ್ಲೂಕು ಭಾರತ ಸೇವಾದಳ ಅಧ್ಯಕ್ಷ ಬಹದೂರ್ ಸಾಬ್, ಸೇವಾದಳ ಮುಖಂಡ ವಿ.ಪಿ.ಸೋಮಶೇಖರ್ ಮಾತನಾಡಿದರು.</p>.<p>ಮಕ್ಕಳಿಗೆ ಸಿಹಿ ವಿತರಿಸಿ, ಸರ್ವ ಧರ್ಮ ಪ್ರಾರ್ಥನೆ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಅಂತ್ಯಗೊಂಡಿತು.</p>.<p>ಸಂಘಟಕ ಎಂ.ಬಿ.ದಾನೇಶ್, ಸೇವಾದಳ ಪದಾಧಿಕಾರಿಗಳಾದ ಕೆ.ಜಯದೇವ್, ಮುನಿವೆಂಕಟಯಾದವ್, ರೆಡ್ಡಿ, ಜಗದೀಶ್ ಸೇರಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1496832276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ಖಾದ್ರಿಪುರದಲ್ಲಿರುವ ನಲ್ಲೂರಮ್ಮ ದೇವಿ ಮಕ್ಕಳ ಆಶ್ರಮ ಕ್ಷೇಮಾಭಿವೃದ್ಧಿ ಟ್ರಸ್ಟ್ನಲ್ಲಿ ಗುರುವಾರ ಭಾರತ ಸೇವಾದಳ ಸಂಸ್ಥಾಪಕ ನಾ.ಸು.ಹರ್ಡೀಕರ್ ಜನ್ಮ ಜಯಂತಿ ಕಾರ್ಯಕ್ರಮ ನಡೆಯಿತು.</p>.<p>ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಮಾತನಾಡಿ, ‘ಸ್ವಾತಂತ್ಯ್ರ ಚಳವಳಿಗೆ ಯುವ ಸಮೂಹವನ್ನು ಸಂಘಟಿಸಲು ಕರ್ನಾಟಕದ ನಾ.ಸು.ಹರ್ಡೀಕರ್ ಆರಂಭಿಸಿದ ಭಾರತ ಸೇವಾದಳ ತರಬೇತಿ ಶಿಕ್ಷಣವು ಪ್ರಸ್ತುತ ಪ್ರತಿ ವಿದ್ಯಾರ್ಥಿಗೂ ಅಗತ್ಯವಾಗಿದೆ. ಸೇವಾದಳ ಶಿಕ್ಷಣವನ್ನು ಪ್ರತಿ ಶಾಲೆಯಲ್ಲಿಯೂ ಕಡ್ಡಾಯಗೊಳಿಸಬೇಕು’ ಎಂದು ಹೇಳಿದರು.</p>.<p>ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್, ಮಾಲೂರು ತಾಲ್ಲೂಕು ಭಾರತ ಸೇವಾದಳ ಅಧ್ಯಕ್ಷ ಬಹದೂರ್ ಸಾಬ್, ಸೇವಾದಳ ಮುಖಂಡ ವಿ.ಪಿ.ಸೋಮಶೇಖರ್ ಮಾತನಾಡಿದರು.</p>.<p>ಮಕ್ಕಳಿಗೆ ಸಿಹಿ ವಿತರಿಸಿ, ಸರ್ವ ಧರ್ಮ ಪ್ರಾರ್ಥನೆ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಅಂತ್ಯಗೊಂಡಿತು.</p>.<p>ಸಂಘಟಕ ಎಂ.ಬಿ.ದಾನೇಶ್, ಸೇವಾದಳ ಪದಾಧಿಕಾರಿಗಳಾದ ಕೆ.ಜಯದೇವ್, ಮುನಿವೆಂಕಟಯಾದವ್, ರೆಡ್ಡಿ, ಜಗದೀಶ್ ಸೇರಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1496832276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>