<p>ಕೋಲಾರ: ಟಿನಿ ಟಾಟ್ಸ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ‘ಕಲಾಸಂಸ್ಕೃತಿ’ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆಯಿತು.</p>.<p>ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಭಾರತನಾಟ್ಯ, ಕುಣಿತ ಭಜನೆ, ವಿಷ್ಣು ಸಹಸ್ರನಾಮ ಪಠಣ, ಯೋಗ ಹಾಗೂ ಪಾಶ್ಚಾತ್ಯ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಮಕ್ಕಳಿಗೆ ಕಲಾಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಕಲೆಗಳ ತರಬೇತಿಯನ್ನು ಅಶೋಕ್ ನಾಯಕ್ ತಂಡ ನೀಡಿತ್ತು.</p>.<p>ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಪ್ರಶಂಸಿಸಿದರು. ಕಲಾಸಂಸ್ಕೃತಿಯ ಮಹತ್ವವನ್ನು ವಿವರಿಸಿ, ಇಂತಹ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು. ಸಂಬಂಧಗಳ ಬಗ್ಗೆ ಪೋಷಕರು ತಿಳುವಳಿಕೆ ನೀಡದ ಕಾರಣ ಸಂಬಂಧಗಳು ದೂರವಾಗುತ್ತಿವೆ ಎಂದರು.</p>.<p>ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅನಿತಾ ಶ್ರೀನಿವಾಸ್, ಪೋಷಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-18-1009266270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಟಿನಿ ಟಾಟ್ಸ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ‘ಕಲಾಸಂಸ್ಕೃತಿ’ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆಯಿತು.</p>.<p>ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಭಾರತನಾಟ್ಯ, ಕುಣಿತ ಭಜನೆ, ವಿಷ್ಣು ಸಹಸ್ರನಾಮ ಪಠಣ, ಯೋಗ ಹಾಗೂ ಪಾಶ್ಚಾತ್ಯ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಮಕ್ಕಳಿಗೆ ಕಲಾಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಕಲೆಗಳ ತರಬೇತಿಯನ್ನು ಅಶೋಕ್ ನಾಯಕ್ ತಂಡ ನೀಡಿತ್ತು.</p>.<p>ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಪ್ರಶಂಸಿಸಿದರು. ಕಲಾಸಂಸ್ಕೃತಿಯ ಮಹತ್ವವನ್ನು ವಿವರಿಸಿ, ಇಂತಹ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು. ಸಂಬಂಧಗಳ ಬಗ್ಗೆ ಪೋಷಕರು ತಿಳುವಳಿಕೆ ನೀಡದ ಕಾರಣ ಸಂಬಂಧಗಳು ದೂರವಾಗುತ್ತಿವೆ ಎಂದರು.</p>.<p>ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅನಿತಾ ಶ್ರೀನಿವಾಸ್, ಪೋಷಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-18-1009266270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>