<p>ಮುಳಬಾಗಿಲು: ತಾಲ್ಲೂಕಿನ ಮರವೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಪುಷ್ಪ ಮಳೆ ಸುರಿಸುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು.</p>.<p>ತಾಲ್ಲೂಕಿನಲ್ಲಿ ಮೇ 29ರಂದು ಶಾಲಾ ಸ್ವಚ್ಛತೆ ನಡೆಸಿ, ರಜೆ ಮೋಜಿನಲ್ಲಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರು ಅದ್ದೂರಿಯಾಗಿ ಸ್ವಾಗತಿಸಿದರು.</p>.<p>ವಿದ್ಯಾರ್ಥಿಗಳು ಬೆಳಗ್ಗೆ ಶಾಲೆಗೆ ಬರುತ್ತಿದ್ದಂತೆ ಶಿಕ್ಷಕರು ಗುಲಾಬಿ ಹೂ ನೀಡಿ ನಂತರ, ಚೆಂಡು ಹಾಗೂ ಸೇವಂತಿ ಹೂ ದಳಗಳನ್ನು ವಿದ್ಯಾರ್ಥಿಗಳ ಮೇಲೆ ಚೆಲ್ಲುತ್ತಾ ಶಾಲಾ ಕೊಠಡಿ ಒಳಗೆ ಸ್ವಾಗತ ಕೋರಿದರು. ನಂತರ, ಚಾಕ್ಲೇಟ್ ಹಾಗೂ ಲೇಖನಿ ನೀಡಿದರು.</p>.<p>ಮುಖ್ಯ ಶಿಕ್ಷಕ ಎನ್.ಚನ್ನಪ್ಪ ಮಾತನಾಡಿ, ಸುಮಾರು 40 ದಿನಗಳವರೆಗೂ ಬೇಸಿಗೆ ರಜೆ ಕಳೆದಿದ್ದ ವಿದ್ಯಾರ್ಥಿಗಳು ಶಾಲಾ ವಾತಾವರಣವನ್ನೇ ಮರೆತಂತಿತ್ತು. ಹಾಗಾಗಿ ಮಕ್ಕಳಲ್ಲಿ ಹೊಸ ಹುರುಪು ತುಂಬಿ ಕಲಿಕೆಯ ಮೇಲೆ ಆಸಕ್ತಿ ಮೂಡಿಸಲು ವಿಶೇಷವಾಗಿ ಸ್ವಾಗತಿಸಲಾಯಿತು ಎಂದರು.</p>.<p>ಶಕುಂತಲಮ್ಮ, ಪ್ರಭಾಕರ್ ರಾಜು, ಲಾವಣ್ಯ, ಎಸ್ಡಿಎಂಸಿ ಅಧ್ಯಕ್ಷ ನಾಗರಾಜ್, ರಾಮಮೂರ್ತಿ, ಲಕ್ಷ್ಮಿನಾರಾಯಣ, ವೆಂಕಟಪ್ಪ, ಬಾಲರಾಜು, ಮಂಜುನಾಥ, ಮುನಿಸ್ವಾಮಿ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-18-1870395039</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ತಾಲ್ಲೂಕಿನ ಮರವೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಪುಷ್ಪ ಮಳೆ ಸುರಿಸುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು.</p>.<p>ತಾಲ್ಲೂಕಿನಲ್ಲಿ ಮೇ 29ರಂದು ಶಾಲಾ ಸ್ವಚ್ಛತೆ ನಡೆಸಿ, ರಜೆ ಮೋಜಿನಲ್ಲಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರು ಅದ್ದೂರಿಯಾಗಿ ಸ್ವಾಗತಿಸಿದರು.</p>.<p>ವಿದ್ಯಾರ್ಥಿಗಳು ಬೆಳಗ್ಗೆ ಶಾಲೆಗೆ ಬರುತ್ತಿದ್ದಂತೆ ಶಿಕ್ಷಕರು ಗುಲಾಬಿ ಹೂ ನೀಡಿ ನಂತರ, ಚೆಂಡು ಹಾಗೂ ಸೇವಂತಿ ಹೂ ದಳಗಳನ್ನು ವಿದ್ಯಾರ್ಥಿಗಳ ಮೇಲೆ ಚೆಲ್ಲುತ್ತಾ ಶಾಲಾ ಕೊಠಡಿ ಒಳಗೆ ಸ್ವಾಗತ ಕೋರಿದರು. ನಂತರ, ಚಾಕ್ಲೇಟ್ ಹಾಗೂ ಲೇಖನಿ ನೀಡಿದರು.</p>.<p>ಮುಖ್ಯ ಶಿಕ್ಷಕ ಎನ್.ಚನ್ನಪ್ಪ ಮಾತನಾಡಿ, ಸುಮಾರು 40 ದಿನಗಳವರೆಗೂ ಬೇಸಿಗೆ ರಜೆ ಕಳೆದಿದ್ದ ವಿದ್ಯಾರ್ಥಿಗಳು ಶಾಲಾ ವಾತಾವರಣವನ್ನೇ ಮರೆತಂತಿತ್ತು. ಹಾಗಾಗಿ ಮಕ್ಕಳಲ್ಲಿ ಹೊಸ ಹುರುಪು ತುಂಬಿ ಕಲಿಕೆಯ ಮೇಲೆ ಆಸಕ್ತಿ ಮೂಡಿಸಲು ವಿಶೇಷವಾಗಿ ಸ್ವಾಗತಿಸಲಾಯಿತು ಎಂದರು.</p>.<p>ಶಕುಂತಲಮ್ಮ, ಪ್ರಭಾಕರ್ ರಾಜು, ಲಾವಣ್ಯ, ಎಸ್ಡಿಎಂಸಿ ಅಧ್ಯಕ್ಷ ನಾಗರಾಜ್, ರಾಮಮೂರ್ತಿ, ಲಕ್ಷ್ಮಿನಾರಾಯಣ, ವೆಂಕಟಪ್ಪ, ಬಾಲರಾಜು, ಮಂಜುನಾಥ, ಮುನಿಸ್ವಾಮಿ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-18-1870395039</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>