<p>ಕೋಲಾರ: ಬೆಂಗಳೂರಿನ ಎಸ್ಜೆಆರ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ತಾಲ್ಲೂಕಿನ ನಾಗಲಾಪುರ ಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದೆ.</p>.<p>ಶಿಬಿರದ ಉದ್ಘಾಟನೆಯನ್ನು ಡಿಐಜಿಪಿ (ಪೊಲೀಸ್ ತರಬೇತಿ) ಡಿ.ದೇವರಾಜ್ ನಡೆಸಿಕೊಟ್ಟರು. ಸಮಾರಂಭದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ತೇಜೇಶಲಿಂಗ ಸ್ವಾಮೀಜಿ ವಹಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ತಾಲ್ಲೂಕು ವೀರಶೈವ ವೇದಿಕೆಯ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.</p>.<p>ನಮ್ಮೂರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಬಂದು ಸೇವಾ ಕಾರ್ಯದಲ್ಲಿ ತೊಡಗಿರುವುದು ಅತೀವ ಸಂತೋಷವನ್ನು ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಶೀಲವಂತ ಸಂಜೀವ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಶಿಬಿರಾಧಿಕಾರಿ ಮಮತಾ ಸಾಲಿಮಠ, ಸಹ ಶಿಬಿರಾಧಿಕಾರಿ ಶಾಂತಲಾ, ಉದಯ್ ಸಿ.ಆರ್, ಉಮೇಶ ಆರಾಧ್ಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-18-1645705753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಬೆಂಗಳೂರಿನ ಎಸ್ಜೆಆರ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ತಾಲ್ಲೂಕಿನ ನಾಗಲಾಪುರ ಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದೆ.</p>.<p>ಶಿಬಿರದ ಉದ್ಘಾಟನೆಯನ್ನು ಡಿಐಜಿಪಿ (ಪೊಲೀಸ್ ತರಬೇತಿ) ಡಿ.ದೇವರಾಜ್ ನಡೆಸಿಕೊಟ್ಟರು. ಸಮಾರಂಭದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ತೇಜೇಶಲಿಂಗ ಸ್ವಾಮೀಜಿ ವಹಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ತಾಲ್ಲೂಕು ವೀರಶೈವ ವೇದಿಕೆಯ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.</p>.<p>ನಮ್ಮೂರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಬಂದು ಸೇವಾ ಕಾರ್ಯದಲ್ಲಿ ತೊಡಗಿರುವುದು ಅತೀವ ಸಂತೋಷವನ್ನು ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಶೀಲವಂತ ಸಂಜೀವ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಶಿಬಿರಾಧಿಕಾರಿ ಮಮತಾ ಸಾಲಿಮಠ, ಸಹ ಶಿಬಿರಾಧಿಕಾರಿ ಶಾಂತಲಾ, ಉದಯ್ ಸಿ.ಆರ್, ಉಮೇಶ ಆರಾಧ್ಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-18-1645705753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>