<p>ವೇಮಗಲ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ವಾರ್ಷಿಕೋತ್ಸವ ಹಾಗೂ ಎನ್ಸಿಸಿ, ಎನ್ಎಸ್ಎಸ್ ಮತ್ತು ರೆಡ್ ಕ್ರಾಸ್ ಸಮಿತಿಗಳ ಸಮಾರೋಪ ಸಮಾರಂಭ ನಡೆಯಿತು.</p>.<p>ಈ ವೇಳೆ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ಇಂದಿನ ಯುವ ಸಮೂಹ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ತಾವು ಕಲಿತ ಸಂಸ್ಥೆ ಹಾಗೂ ಪೋಷಕರಿಗೆ ಹೆಮ್ಮೆ ತರುವ ಸಾಧನೆ ಮಾಡಬೇಕೆಂದು ತಿಳಿಸಿದರು.</p>.<p>ಕಾಲೇಜು ದಿನಗಳಲ್ಲಿ ಸಿಗುವ ಮುಕ್ತ ವಾತಾವರಣವನ್ನು ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಗಳಾಗಿವೆ ಎಂದರು.</p>.<p>ಪ್ರಾಂಶುಪಾಲ ಪ್ರೊ.ಕೇಶವ ಮೂರ್ತಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ‘ಬಿಸಿನೆಸ್ ಡೇಟಾ ಅನಾಲಿಟಿಕ್ಸ್’ (ಬಿಡಿಎ) ಕೋರ್ಸ್ ಅನ್ನು ಪ್ರಾರಂಭಿಸಿಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ, ಬಿಕಾಂ, ಬಿಬಿಎ, ಬಿಡಿಎ ಸೇರಿದಂತೆ ಪ್ರಮುಖ ಪದವಿ ಕೋರ್ಸ್ಗಳು ಲಭ್ಯವಿದೆ ಎಂದರು.</p>.<p>ಅಧ್ಯಕ್ಷ ನಾಗೇಶ್, ಅನುಷಾ ಮುನಿ ರಾಜು, ಶರಣಪ್ಪ, ಮಧುಸೂದನ್, ಪರಶುರಾಮ, ಸುನಿಲ್ ಕುಮಾರ್, ನಾಗೇಂದ್ರ, ಕಿರಣ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-18-808885961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಮಗಲ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ವಾರ್ಷಿಕೋತ್ಸವ ಹಾಗೂ ಎನ್ಸಿಸಿ, ಎನ್ಎಸ್ಎಸ್ ಮತ್ತು ರೆಡ್ ಕ್ರಾಸ್ ಸಮಿತಿಗಳ ಸಮಾರೋಪ ಸಮಾರಂಭ ನಡೆಯಿತು.</p>.<p>ಈ ವೇಳೆ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ಇಂದಿನ ಯುವ ಸಮೂಹ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ತಾವು ಕಲಿತ ಸಂಸ್ಥೆ ಹಾಗೂ ಪೋಷಕರಿಗೆ ಹೆಮ್ಮೆ ತರುವ ಸಾಧನೆ ಮಾಡಬೇಕೆಂದು ತಿಳಿಸಿದರು.</p>.<p>ಕಾಲೇಜು ದಿನಗಳಲ್ಲಿ ಸಿಗುವ ಮುಕ್ತ ವಾತಾವರಣವನ್ನು ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಗಳಾಗಿವೆ ಎಂದರು.</p>.<p>ಪ್ರಾಂಶುಪಾಲ ಪ್ರೊ.ಕೇಶವ ಮೂರ್ತಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ‘ಬಿಸಿನೆಸ್ ಡೇಟಾ ಅನಾಲಿಟಿಕ್ಸ್’ (ಬಿಡಿಎ) ಕೋರ್ಸ್ ಅನ್ನು ಪ್ರಾರಂಭಿಸಿಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ, ಬಿಕಾಂ, ಬಿಬಿಎ, ಬಿಡಿಎ ಸೇರಿದಂತೆ ಪ್ರಮುಖ ಪದವಿ ಕೋರ್ಸ್ಗಳು ಲಭ್ಯವಿದೆ ಎಂದರು.</p>.<p>ಅಧ್ಯಕ್ಷ ನಾಗೇಶ್, ಅನುಷಾ ಮುನಿ ರಾಜು, ಶರಣಪ್ಪ, ಮಧುಸೂದನ್, ಪರಶುರಾಮ, ಸುನಿಲ್ ಕುಮಾರ್, ನಾಗೇಂದ್ರ, ಕಿರಣ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-18-808885961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>