<p>ಕೊಳ್ಳೇಗಾಲ: ಇಲ್ಲಿನ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಶ್ಯಾಮ್ ಕುಮಾರ್ ರಾಜೀನಾಮೆ ನೀಡಿರುವುದು ಖಂಡಿಸಿ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಕಾಲೇಜು ಮುಂಭಾಗ ಜಮಾಯಿಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು ಶ್ಯಾಮ್ ಕುಮಾರ್ ರಾಜೀನಾಮೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದರು.</p>.<p>ಕಾಲೇಜಿನ ಆಡಳಿತ ಮಂಡಳಿಯವರು ಉಪನ್ಯಾಸಕ ಶ್ಯಾಮ್ ಕುಮಾರ್ ಅವರ ರಾಜೀನಾಮೆಯನ್ನು ಉದ್ದೇಶ ಪೂರ್ವಕವಾಗಿ ಕೇಳಿದ್ದಾರೆ. ಹಾಗಾಗಿ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆಯದೆ ಹೋದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಅವರು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿದರು.</p>.<p>ಪೋಷಕರು ಮತ್ತು ಆಡಳಿತ ಮಂಡಳಿ ಸಭೆ: ಕಾಲೇಜು ಆಡಳಿತ ಮಂಡಳಿ ಶ್ಯಾಮ್ ಕುಮಾರ್ ಅವರಿಂದ ರಾಜೀನಾಮೆ ಕೇಳಿಲ್ಲ. ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ. ಅವರ ಸ್ಥಾನಕ್ಕೆ ಬೇರೆ ಅಧ್ಯಾಪಕರನ್ನು ನೇಮಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಲಾಗುವುದು ಎಂದು ಆಡಳಿತ ಮಂಡಳಿಯವರು ತಿಳಿಸಿದರು.</p>.<p>ಇದಕ್ಕೆ ಒಪ್ಪದ ಪೋಷಕರು ಸಭೆಗೆ ಶ್ಯಾಮ್ ಕುಮಾರ್ ಅವರನ್ನು ಕರೆಯಿಸುವಂತೆ ಒತ್ತಾಯಿಸಿದರು. ಬಳಿಕ ಆಡಳಿತ ಮಂಡಳಿಯವರು, ಬುಧವಾರ ಮತ್ತೆ ಸಭೆ ಕರೆಯಲಾಗುವುದು. ಅಂದಿನ ಸಭೆಗೆ ಉಪನ್ಯಾಸಕರನ್ನು ಕರೆಯಿಸಲಾಗುವುದು ಎಂದು ತಿಳಿಸಿದರು.</p>.<p>ಪೋಷಕರಾದ ಸಿದ್ದಯ್ಯನಪುರ ಚೇತನ್, ಚಾಮರಾಜು, ಕುಮಾರಸ್ವಾಮಿ, ಪೂರ್ಣಿಮಾ, ಜ್ಯೋತಿ, ಗಾಯತ್ರಿ, ಉಮೇಶ್, ರಜಿಯ ಸುಲ್ತಾನ, ಅನಿತಾ, ರಜಿನಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-1615360306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಇಲ್ಲಿನ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಶ್ಯಾಮ್ ಕುಮಾರ್ ರಾಜೀನಾಮೆ ನೀಡಿರುವುದು ಖಂಡಿಸಿ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಕಾಲೇಜು ಮುಂಭಾಗ ಜಮಾಯಿಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು ಶ್ಯಾಮ್ ಕುಮಾರ್ ರಾಜೀನಾಮೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದರು.</p>.<p>ಕಾಲೇಜಿನ ಆಡಳಿತ ಮಂಡಳಿಯವರು ಉಪನ್ಯಾಸಕ ಶ್ಯಾಮ್ ಕುಮಾರ್ ಅವರ ರಾಜೀನಾಮೆಯನ್ನು ಉದ್ದೇಶ ಪೂರ್ವಕವಾಗಿ ಕೇಳಿದ್ದಾರೆ. ಹಾಗಾಗಿ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆಯದೆ ಹೋದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಅವರು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿದರು.</p>.<p>ಪೋಷಕರು ಮತ್ತು ಆಡಳಿತ ಮಂಡಳಿ ಸಭೆ: ಕಾಲೇಜು ಆಡಳಿತ ಮಂಡಳಿ ಶ್ಯಾಮ್ ಕುಮಾರ್ ಅವರಿಂದ ರಾಜೀನಾಮೆ ಕೇಳಿಲ್ಲ. ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ. ಅವರ ಸ್ಥಾನಕ್ಕೆ ಬೇರೆ ಅಧ್ಯಾಪಕರನ್ನು ನೇಮಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಲಾಗುವುದು ಎಂದು ಆಡಳಿತ ಮಂಡಳಿಯವರು ತಿಳಿಸಿದರು.</p>.<p>ಇದಕ್ಕೆ ಒಪ್ಪದ ಪೋಷಕರು ಸಭೆಗೆ ಶ್ಯಾಮ್ ಕುಮಾರ್ ಅವರನ್ನು ಕರೆಯಿಸುವಂತೆ ಒತ್ತಾಯಿಸಿದರು. ಬಳಿಕ ಆಡಳಿತ ಮಂಡಳಿಯವರು, ಬುಧವಾರ ಮತ್ತೆ ಸಭೆ ಕರೆಯಲಾಗುವುದು. ಅಂದಿನ ಸಭೆಗೆ ಉಪನ್ಯಾಸಕರನ್ನು ಕರೆಯಿಸಲಾಗುವುದು ಎಂದು ತಿಳಿಸಿದರು.</p>.<p>ಪೋಷಕರಾದ ಸಿದ್ದಯ್ಯನಪುರ ಚೇತನ್, ಚಾಮರಾಜು, ಕುಮಾರಸ್ವಾಮಿ, ಪೂರ್ಣಿಮಾ, ಜ್ಯೋತಿ, ಗಾಯತ್ರಿ, ಉಮೇಶ್, ರಜಿಯ ಸುಲ್ತಾನ, ಅನಿತಾ, ರಜಿನಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-1615360306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>