<p>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಇಲ್ಲಿನ ವಿಸ್ಡಮ್ ವಿದ್ಯಾಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಆರ್ಎಸ್ಎಸ್ ಶಿಬಿರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಸ್ಥಳೀಯರು ಆಕ್ಷೇಪಿಸಿದ್ದು, ಶಿಬಿರವನ್ನು ಸ್ಥಗಿತಗೊಳಿಸಲಾಯಿತು.</p>.<p>ಇದೇ ವೇಳೆ, ‘ಶಾಲಾ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ. ಅನ್ಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ನೀಡಿಲ್ಲ. ಶಾಲೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ಮಂಜುಳಾ ತಿಳಿಸಿದ್ದಾರೆ.</p>.<p>ಶಿಬಿರದಲ್ಲಿ ಯಳಂದೂರು, ಕೊಳ್ಳೇಗಾಲ, ಗ್ರಾಮಾಂತರ ಮತ್ತು ಹನೂರು ತಾಲ್ಲೂಕಿನ 8ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರವನ್ನು ಮುಂದುವರಿಸದಂತೆ ಪೊಲೀಸರು ಸೂಚನೆ ನೀಡಿದ ಬಳಿಕ ವಿದ್ಯಾರ್ಥಿಗಳು ಸಹಿತ ಎಲ್ಲರೂ ಶಾಲಾ ಆವರಣ ತೊರೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1369444658</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಇಲ್ಲಿನ ವಿಸ್ಡಮ್ ವಿದ್ಯಾಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಆರ್ಎಸ್ಎಸ್ ಶಿಬಿರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಸ್ಥಳೀಯರು ಆಕ್ಷೇಪಿಸಿದ್ದು, ಶಿಬಿರವನ್ನು ಸ್ಥಗಿತಗೊಳಿಸಲಾಯಿತು.</p>.<p>ಇದೇ ವೇಳೆ, ‘ಶಾಲಾ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ. ಅನ್ಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ನೀಡಿಲ್ಲ. ಶಾಲೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ಮಂಜುಳಾ ತಿಳಿಸಿದ್ದಾರೆ.</p>.<p>ಶಿಬಿರದಲ್ಲಿ ಯಳಂದೂರು, ಕೊಳ್ಳೇಗಾಲ, ಗ್ರಾಮಾಂತರ ಮತ್ತು ಹನೂರು ತಾಲ್ಲೂಕಿನ 8ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರವನ್ನು ಮುಂದುವರಿಸದಂತೆ ಪೊಲೀಸರು ಸೂಚನೆ ನೀಡಿದ ಬಳಿಕ ವಿದ್ಯಾರ್ಥಿಗಳು ಸಹಿತ ಎಲ್ಲರೂ ಶಾಲಾ ಆವರಣ ತೊರೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1369444658</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>