<p>ಲಕ್ಕುಂಡಿ: ‘ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಬೆಲೆಯಿದೆ. ಈ ದಿಸೆಯಲ್ಲಿ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಓದಿನ ಕಡೆ ಹೆಚ್ಚು ಗಮನ ನೀಡಬೇಕು’ ಎಂದು ಕೊಟ್ಟೂರೇಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಹರ್ಲಾಪುರ ಕೊಟ್ಟೂರೇಶ್ವರ ಮಠದಲ್ಲಿ ನಡೆದ 318ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಇಂದು ಎಲ್ಲ ಕ್ಷೇತ್ರಗಳಲ್ಲಿ ಕೌಶಲಕ್ಕೆ ಮಹತ್ವವಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಶಿಕ್ಷಣದ ಜತೆಗೆ ಕೌಶಲ ಕಲಿಯಬೇಕು. ಇದರ ಸಹಾಯದಿಂದ ವೃತ್ತಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.</p>.<p>‘ಕೌಶಲ ಬೆಳೆಸಿಕೊಳ್ಳಲು ಮಠ, ಮಂದಿರಗಳಲ್ಲಿ ನಡೆಯುವ ಶಿವ ಶರಣರ ತತ್ವ ಹಿತೋಪದೇಶಗಳು ದಾರಿ ದೀಪವಾಗಲಿದೆ’ ಎಂದು ಅವರು ಹೇಳಿದರು .</p>.<p>‘ಮಠದಲ್ಲಿ ಕಳೆದ 25 ವರ್ಷಗಳಿಂದ ಎಸ್ಎಸ್ಎಲ್ಸಿ, ಪಿಯುಸಿ ಸೇರಿದಂತೆ ವಿವಿಧ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭಾಗ್ಯಶ್ರೀ ಯಾಳವಾಡ, ನಿಖಿಲ್ ಕೋರಿ, ಭಾಗ್ಯಲಕ್ಷ್ಮೀ ಶಾನಭೋಗರ, ಜ್ಯೋತಿ ಮನ್ನಾಪೂರ, ಶಿವಶಾಂತ ಶಶಿಮಠ, ಪೂರ್ಣಿಮಾ ಕಾಶಪ್ಪನವರ ಅವರನ್ನು ಸನ್ಮಾನಿಸಲಾಯಿತು.</p>.<p>ಕೆ.ಬಿ.ವೀರಾಪುರ, ನಾಗೇಂದ್ರ ಅರ್ಕಸಾಲಿ ಸಂಗೀತ ಸೇವೆ ನೀಡಿದರು. ಉಪನ್ಯಾಸಕ ವಿ.ಎಚ್.ಕೊಳ್ಳಿ, ಶರಣಪ್ಪಗೌಡ ಪಾಟೀಲ, ಸಿದ್ದು ಯಾಳವಾಡ, ಕೊಟ್ರಯ್ಯ ಮಜ್ಜಿಗುಡ್ಡ, ಕೊಟ್ರಗೌಡ ಕಾತರಕಿ, ಶರಣಪ್ಪ ದೇಸಾಯಿ, ದೇವೇಂದ್ರಪ್ಪ ಜಮಲಿಂಗಪ್ಪನವರ, ಕೆ.ಬಿ.ಕೊಣ್ಣೂರು, ಟಿ.ಡಿ.ಗವಾನಿ, ಪ್ರಕಾಶ ಹೊಸಮನಿ ಇದ್ದರು.</p>.<p>ನಿವೃತ್ತ ಶಿಕ್ಷಕ ರಾಮಣ್ಣ ಬೆಳಧಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಜುಂಜಣ್ಣಿ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-1341697619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಕುಂಡಿ: ‘ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಬೆಲೆಯಿದೆ. ಈ ದಿಸೆಯಲ್ಲಿ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಓದಿನ ಕಡೆ ಹೆಚ್ಚು ಗಮನ ನೀಡಬೇಕು’ ಎಂದು ಕೊಟ್ಟೂರೇಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಹರ್ಲಾಪುರ ಕೊಟ್ಟೂರೇಶ್ವರ ಮಠದಲ್ಲಿ ನಡೆದ 318ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಇಂದು ಎಲ್ಲ ಕ್ಷೇತ್ರಗಳಲ್ಲಿ ಕೌಶಲಕ್ಕೆ ಮಹತ್ವವಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಶಿಕ್ಷಣದ ಜತೆಗೆ ಕೌಶಲ ಕಲಿಯಬೇಕು. ಇದರ ಸಹಾಯದಿಂದ ವೃತ್ತಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.</p>.<p>‘ಕೌಶಲ ಬೆಳೆಸಿಕೊಳ್ಳಲು ಮಠ, ಮಂದಿರಗಳಲ್ಲಿ ನಡೆಯುವ ಶಿವ ಶರಣರ ತತ್ವ ಹಿತೋಪದೇಶಗಳು ದಾರಿ ದೀಪವಾಗಲಿದೆ’ ಎಂದು ಅವರು ಹೇಳಿದರು .</p>.<p>‘ಮಠದಲ್ಲಿ ಕಳೆದ 25 ವರ್ಷಗಳಿಂದ ಎಸ್ಎಸ್ಎಲ್ಸಿ, ಪಿಯುಸಿ ಸೇರಿದಂತೆ ವಿವಿಧ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭಾಗ್ಯಶ್ರೀ ಯಾಳವಾಡ, ನಿಖಿಲ್ ಕೋರಿ, ಭಾಗ್ಯಲಕ್ಷ್ಮೀ ಶಾನಭೋಗರ, ಜ್ಯೋತಿ ಮನ್ನಾಪೂರ, ಶಿವಶಾಂತ ಶಶಿಮಠ, ಪೂರ್ಣಿಮಾ ಕಾಶಪ್ಪನವರ ಅವರನ್ನು ಸನ್ಮಾನಿಸಲಾಯಿತು.</p>.<p>ಕೆ.ಬಿ.ವೀರಾಪುರ, ನಾಗೇಂದ್ರ ಅರ್ಕಸಾಲಿ ಸಂಗೀತ ಸೇವೆ ನೀಡಿದರು. ಉಪನ್ಯಾಸಕ ವಿ.ಎಚ್.ಕೊಳ್ಳಿ, ಶರಣಪ್ಪಗೌಡ ಪಾಟೀಲ, ಸಿದ್ದು ಯಾಳವಾಡ, ಕೊಟ್ರಯ್ಯ ಮಜ್ಜಿಗುಡ್ಡ, ಕೊಟ್ರಗೌಡ ಕಾತರಕಿ, ಶರಣಪ್ಪ ದೇಸಾಯಿ, ದೇವೇಂದ್ರಪ್ಪ ಜಮಲಿಂಗಪ್ಪನವರ, ಕೆ.ಬಿ.ಕೊಣ್ಣೂರು, ಟಿ.ಡಿ.ಗವಾನಿ, ಪ್ರಕಾಶ ಹೊಸಮನಿ ಇದ್ದರು.</p>.<p>ನಿವೃತ್ತ ಶಿಕ್ಷಕ ರಾಮಣ್ಣ ಬೆಳಧಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಜುಂಜಣ್ಣಿ ನಿರೂಪಿಸಿ, ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-1341697619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>