<p>ಕೊಪ್ಪಳ: ‘ವೈದ್ಯಕೀಯ ಸೇವೆ ಬಹಳ ಪವಿತ್ರವಾದದ್ದು, ತೊಂದರೆ ಎಂದು ಬರುವ ರೋಗಿಗಳ ಗುಣಮುಖ ಮಾಡುವ ಸೇವೆ ಶ್ರೇಷ್ಠವಾಗಿದೆ. ಉತ್ತಮ ಅಧ್ಯಯನ ಮಾಡುವುದರ ಮೂಲಕ ಇದರಲ್ಲಿ ಪರಿಣತಿ ಪಡೆಯಲು ಸಾಧ್ಯ’ ಎಂದು ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಕಾರ್ಯದರ್ಶಿ ಡಾ. ಆರ್ ಮರೇಗೌಡ ಹೇಳಿದರು.</p>.<p>ನಗರದ ಗವಿಸಿದ್ದೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 2025 -26ನೇ ಸಾಲಿನ ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗವಿಮಠದ ಅನ್ನ, ಅಕ್ಷರ, ಅರಿವು ಆರೋಗ್ಯ, ಆಧ್ಯಾತ್ಮ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿ ವಿದ್ಯಾರ್ಥಿಗಳೇ ಕಾಲೇಜಿನ ಭವಿಷ್ಯ ಎಂದರು.</p>.<p>ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂಗರಚನ ಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕ ಡಾ. ಮಂಜುನಾಥ್ ಎಸ್. ಹಲಗತ್ತಿ ಮಾತನಾಡಿ ‘ತಾವೆಲ್ಲರೂ ಉತ್ತಮ ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಉತ್ತಮ ಅಧ್ಯಯನದಿಂದ ಮಾತ್ರ ಓದುವ ಕೋರ್ಸ್ನಲ್ಲಿ ಅನುಭವ ಗಳಿಸಿಕೊಳ್ಳಲು ಸಾಧ್ಯ’ ಎಂದು ಹೇಳಿದರು.</p>.<p>ಗವಿಸಿದ್ದೇಶ್ವರ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಮರ್ಸಿಲ್ ಎಸ್.ಹೂಲಗೇರಿ, ಪ್ಯಾರಾ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಪ್ರೊ. ನಾಗರಾಜ ಬೊಮ್ಮನಾಳ, ಸಂಯೋಜಕಿ ಶಿಲ್ಪಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-35-102080147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ‘ವೈದ್ಯಕೀಯ ಸೇವೆ ಬಹಳ ಪವಿತ್ರವಾದದ್ದು, ತೊಂದರೆ ಎಂದು ಬರುವ ರೋಗಿಗಳ ಗುಣಮುಖ ಮಾಡುವ ಸೇವೆ ಶ್ರೇಷ್ಠವಾಗಿದೆ. ಉತ್ತಮ ಅಧ್ಯಯನ ಮಾಡುವುದರ ಮೂಲಕ ಇದರಲ್ಲಿ ಪರಿಣತಿ ಪಡೆಯಲು ಸಾಧ್ಯ’ ಎಂದು ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಕಾರ್ಯದರ್ಶಿ ಡಾ. ಆರ್ ಮರೇಗೌಡ ಹೇಳಿದರು.</p>.<p>ನಗರದ ಗವಿಸಿದ್ದೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 2025 -26ನೇ ಸಾಲಿನ ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗವಿಮಠದ ಅನ್ನ, ಅಕ್ಷರ, ಅರಿವು ಆರೋಗ್ಯ, ಆಧ್ಯಾತ್ಮ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿ ವಿದ್ಯಾರ್ಥಿಗಳೇ ಕಾಲೇಜಿನ ಭವಿಷ್ಯ ಎಂದರು.</p>.<p>ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂಗರಚನ ಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕ ಡಾ. ಮಂಜುನಾಥ್ ಎಸ್. ಹಲಗತ್ತಿ ಮಾತನಾಡಿ ‘ತಾವೆಲ್ಲರೂ ಉತ್ತಮ ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಉತ್ತಮ ಅಧ್ಯಯನದಿಂದ ಮಾತ್ರ ಓದುವ ಕೋರ್ಸ್ನಲ್ಲಿ ಅನುಭವ ಗಳಿಸಿಕೊಳ್ಳಲು ಸಾಧ್ಯ’ ಎಂದು ಹೇಳಿದರು.</p>.<p>ಗವಿಸಿದ್ದೇಶ್ವರ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಮರ್ಸಿಲ್ ಎಸ್.ಹೂಲಗೇರಿ, ಪ್ಯಾರಾ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಪ್ರೊ. ನಾಗರಾಜ ಬೊಮ್ಮನಾಳ, ಸಂಯೋಜಕಿ ಶಿಲ್ಪಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-35-102080147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>